<p>ಎಚ್.ಡಿ.ಕೋಟೆ: ‘ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಆಸ್ಪತ್ರೆ ಆರಂಭವಾಗುತ್ತಿರುವುದು ಸಂತಸದ ವಿಷಯ’ ಎಂದು ಬಿಡಗಲು ಪಡುವಲು ಮಠದ ಮಹಾದೇವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಹ್ಯಾಂಡ್ಪೋಸ್ಟ್ನಲ್ಲಿನಿರ್ಮಾಣವಾದ ಪಾರ್ವತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಹ್ಯಾಂಡ್ಪೋಸ್ಟ್ನಲ್ಲಿ ಆಸ್ಪತ್ರೆ ಆರಂಭವಾಗಿರುವುದರಿಂದ ಕಾಡಂಚಿನ ಜನರಿಗೆ ಅನುಕೂಲವಾಗಿದೆ. ಎಲ್ಲ ರೀತಿಯ ಸೌಲಭ್ಯ ದೊರಕುವಂತೆ ಮಾಡಿರುವುದು ಶ್ಲಾಘನೀಯ. ಇಲ್ಲಿನ ಜನರು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ತೆರಳಬೇಕಿತ್ತು. ಇದನ್ನು ಮನಗಂಡು ಆಸ್ಪತ್ರೆ ಮಾಲೀಕರಾದ ಪುಟ್ಟರಾಜು ದಂಪತಿ ಇಲ್ಲಿ ಆಸ್ಪತ್ರೆ ಆರಂಭಿಸಿರುವುದು ಮೆಚ್ಚುಗೆ ವಿಷಯ’ ಎಂದರು.</p>.<p>ಗ್ರಾಮೀಣ ಭಾಗದ ಜನರಿಗೆ ರಿಯಾಯಿತಿ ದರದಲ್ಲಿ ವೈದ್ಯಕೀಯ ಸೇವೆ ನೀಡುವ ದಿಕ್ಕಿನಲ್ಲಿ ಮನಸ್ಸು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಆಸ್ಪತ್ರೆ ಮಾಲೀಕ ಪುಟ್ಟರಾಜು, ‘ಇದು ಹಿಂದುಳಿದ ತಾಲ್ಲೂಕು, ಆರೋಗ್ಯ ಸೌಲಭ್ಯಕ್ಕೆ ಮೈಸೂರಿಗೆ ಹೋಗಬೇಕಿತ್ತು. ಅದನ್ನು ಮನಗಂಡು ಆಸ್ಪತ್ರೆ ನಿರ್ಮಿಸಲಾಗಿದೆ. ಕಡಿಮೆ ದರದಲ್ಲಿ ಉತ್ತಮ ಸೇವೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದರು.</p>.<p>ಡಾ.ಆರೀಫ್, ಡಾ.ಅರುಣ್, ಡಾ. ಚಂದ್ರಶೇಖರ್, ವೈದ್ಯಾಧಿಕಾರಿ ಡಾ.ಭಾಸ್ಕರ್, ಆಸ್ಪತ್ರೆ ಮಾಲೀಕರಾದ ಪಾರ್ವತಿ, ಸಿಬ್ಬಂದಿ ಅನಿತಾ, ಪುಟ್ಟನಾಯಕ, ವಿಜಯ್, ಉಮೇಶ್, ಸುಧಾ, ಪುಷ್ಪ, ಸಂಗೀತಾ, ಕೃಷ್ಣವೇಣಿ, ಮನೋಜ್, ಅಭಿಷೇಕ್, ಅನಿತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-38-470638025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಚ್.ಡಿ.ಕೋಟೆ: ‘ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಆಸ್ಪತ್ರೆ ಆರಂಭವಾಗುತ್ತಿರುವುದು ಸಂತಸದ ವಿಷಯ’ ಎಂದು ಬಿಡಗಲು ಪಡುವಲು ಮಠದ ಮಹಾದೇವ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಹ್ಯಾಂಡ್ಪೋಸ್ಟ್ನಲ್ಲಿನಿರ್ಮಾಣವಾದ ಪಾರ್ವತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಹ್ಯಾಂಡ್ಪೋಸ್ಟ್ನಲ್ಲಿ ಆಸ್ಪತ್ರೆ ಆರಂಭವಾಗಿರುವುದರಿಂದ ಕಾಡಂಚಿನ ಜನರಿಗೆ ಅನುಕೂಲವಾಗಿದೆ. ಎಲ್ಲ ರೀತಿಯ ಸೌಲಭ್ಯ ದೊರಕುವಂತೆ ಮಾಡಿರುವುದು ಶ್ಲಾಘನೀಯ. ಇಲ್ಲಿನ ಜನರು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ತೆರಳಬೇಕಿತ್ತು. ಇದನ್ನು ಮನಗಂಡು ಆಸ್ಪತ್ರೆ ಮಾಲೀಕರಾದ ಪುಟ್ಟರಾಜು ದಂಪತಿ ಇಲ್ಲಿ ಆಸ್ಪತ್ರೆ ಆರಂಭಿಸಿರುವುದು ಮೆಚ್ಚುಗೆ ವಿಷಯ’ ಎಂದರು.</p>.<p>ಗ್ರಾಮೀಣ ಭಾಗದ ಜನರಿಗೆ ರಿಯಾಯಿತಿ ದರದಲ್ಲಿ ವೈದ್ಯಕೀಯ ಸೇವೆ ನೀಡುವ ದಿಕ್ಕಿನಲ್ಲಿ ಮನಸ್ಸು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಆಸ್ಪತ್ರೆ ಮಾಲೀಕ ಪುಟ್ಟರಾಜು, ‘ಇದು ಹಿಂದುಳಿದ ತಾಲ್ಲೂಕು, ಆರೋಗ್ಯ ಸೌಲಭ್ಯಕ್ಕೆ ಮೈಸೂರಿಗೆ ಹೋಗಬೇಕಿತ್ತು. ಅದನ್ನು ಮನಗಂಡು ಆಸ್ಪತ್ರೆ ನಿರ್ಮಿಸಲಾಗಿದೆ. ಕಡಿಮೆ ದರದಲ್ಲಿ ಉತ್ತಮ ಸೇವೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದರು.</p>.<p>ಡಾ.ಆರೀಫ್, ಡಾ.ಅರುಣ್, ಡಾ. ಚಂದ್ರಶೇಖರ್, ವೈದ್ಯಾಧಿಕಾರಿ ಡಾ.ಭಾಸ್ಕರ್, ಆಸ್ಪತ್ರೆ ಮಾಲೀಕರಾದ ಪಾರ್ವತಿ, ಸಿಬ್ಬಂದಿ ಅನಿತಾ, ಪುಟ್ಟನಾಯಕ, ವಿಜಯ್, ಉಮೇಶ್, ಸುಧಾ, ಪುಷ್ಪ, ಸಂಗೀತಾ, ಕೃಷ್ಣವೇಣಿ, ಮನೋಜ್, ಅಭಿಷೇಕ್, ಅನಿತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-38-470638025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>