<p><strong>ಎಚ್.ಡಿ.ಕೋಟೆ:</strong> ರೈತರು, ದಲಿತ ಮತ್ತು ಕನ್ನಡಪರ ಸಂಘಟನೆಗಳು ಹಾಗೂ ಪರಿಸರವಾದಿಗಳು ಅರಣ್ಯ ಸಂರಕ್ಷಣೆಗಾಗಿ ‘ಕಬಿನಿ ಉಳಿಸಿ’ ಹೆಸರಿನಲ್ಲಿ ತಾಲ್ಲೂಕು ಕಚೇರಿ ಮುಂದೆ ಮಂಗಳವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.</p><p>ರೈತ ಮುಖಂಡ ಹೊನ್ನಹಳ್ಳಿ ಪ್ರಕಾಶ್ ಮಾತನಾಡಿ, ‘ಕಬಿನಿ ಹಿನ್ನೀರು, ನಾಗರಹೊಳೆ-ಬಂಡೀಪುರ ಅರಣ್ಯ ಬಫರ್ ವಲಯ ಮತ್ತು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಅಕ್ರಮ ರೆಸಾರ್ಟ್ಗಳು, ಹೋಟೆಲ್ಗಳು ಮತ್ತು ವಾಣಿಜ್ಯ ಕಟ್ಟಡಗಳು ತಲೆ ಎತ್ತಿವೆ’ ಎಂದು ಆರೋಪಿಸಿದರು.</p><p>‘ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಎಲ್ಲಾ ರೆಸಾರ್ಟ್ಗಳು, ಬಾರ್, ಕ್ಲಬ್, ಹೋಟೆಲ್ ಹಾಗೂ ಇತರೆ ವಾಣಿಜ್ಯ ಚಟುವಟಿಕೆ ಕೇಂದ್ರಗಳನ್ನು ತಕ್ಷಣ ತೆರವುಗೊಳಿಸಬೇಕು. ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪಾರದರ್ಶಕವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದು ಒತ್ತಾಯಿಸಿದರು.</p><p>‘ಅಕ್ರಮ ಕಟ್ಟಡಗಳು ಅರಣ್ಯ ಕಾಯ್ದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸುತ್ತಿದ್ದು, ವನ್ಯಜೀವಿಗಳ ಮೇಲೆ ಪರಿಣಾಮ ಬೀರುತ್ತಿವೆ. ಸಾರ್ವಜನಿಕರು ಮತ್ತು ಸಂಘಟನೆಗಳು ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿವೆ. ಆದರೆ ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಕಬಿನಿ ಹಿನ್ನೀರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅಕ್ರಮ ಕಟ್ಟಡಗಳು ಮತ್ತು ರೆಸಾರ್ಟ್ಗಳನ್ನು ತೆರವುಗೊಳಿಸಬೇಕು’<br>ಎಂದರು.</p><p>‘ಪರಿಸರ ಸೂಕ್ಷ್ಮ ವಲಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಅರಣ್ಯ, ವನ್ಯಜೀವಿಗಳು ಮತ್ತು ಪರಿಸರವನ್ನು ರಕ್ಷಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲಾಗಿದೆ’ ಎಂದರು. </p><p>‘ನಮ್ಮ ಹೋರಾಟ ಅಕ್ರಮ ರೆಸಾರ್ಟ್ಗಳ ವಿರುದ್ಧ ಮಾತ್ರ, ಈ ಹೋರಾಟ ಸಂವಿಧಾನಬದ್ಧ, ಶಾಂತಿಯುತ ಹಾಗೂ ಕಾನೂನು ಬದ್ಧವಾಗಿದ್ದು, ಸಾರ್ವಜನಿರಿಗೆ, ಸರ್ಕಾರಿ ಆಸ್ತಿಗೆ ಯಾವುದೇ ರೀತಿ ಧಕ್ಕೆ ಉಂಟಾಗದಂತೆ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದರು.</p><p>ವಕೀಲ ರವಿ ಕುಮಾರ್ ಮಾತನಾಡಿ, ‘ಅಕ್ರಮವಾಗಿ ನಿರ್ಮಾಣಗೊಂಡಿರುವ ಹೋಟೆಲ್ಗಳು, ಕ್ಲಬ್ಗಳು ಮತ್ತು ಇತರೆ ವಾಣಿಜ್ಯ ಕಟ್ಟಡಗಳು ಇಂದು ಕಬಿನಿ ಪರಿಸರ ವ್ಯವಸ್ಥೆಗೆ ಬಾರಿ ಅಪಾಯವನ್ನುಂಟು ಮಾಡುತ್ತಿವೆ, ಈ ಅಕ್ರಮ ಚಟುವಟಿಕೆಗಳಿಂದ ವನ್ಯಜೀವಿಗಳ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿದೆ’ ಎಂದರು.</p><p>ರೈತ ಮುಖಂಡ ಮಂಜುಕಿರಣ್, ಕುಮಾರಸ್ವಾಮಿ, ದಾಸೆಗೌಡ ಹಾಗೂ ಮುಖಂಡರು ಭಾಗವಹಿಸಿದ್ದರು. </p>.<p><strong>ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ</strong></p><p><strong>ನಿಯಮ ಕಟ್ಟುನಿಟ್ಟಾಗಿ ಪಾಲಿಸಿ</strong></p><p><strong>ಸಾರ್ವಜನಿರಿಗೆ ತೊಂದರೆಯಾಗದಂತೆ ಪ್ರತಿಭಟನೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ರೈತರು, ದಲಿತ ಮತ್ತು ಕನ್ನಡಪರ ಸಂಘಟನೆಗಳು ಹಾಗೂ ಪರಿಸರವಾದಿಗಳು ಅರಣ್ಯ ಸಂರಕ್ಷಣೆಗಾಗಿ ‘ಕಬಿನಿ ಉಳಿಸಿ’ ಹೆಸರಿನಲ್ಲಿ ತಾಲ್ಲೂಕು ಕಚೇರಿ ಮುಂದೆ ಮಂಗಳವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.</p><p>ರೈತ ಮುಖಂಡ ಹೊನ್ನಹಳ್ಳಿ ಪ್ರಕಾಶ್ ಮಾತನಾಡಿ, ‘ಕಬಿನಿ ಹಿನ್ನೀರು, ನಾಗರಹೊಳೆ-ಬಂಡೀಪುರ ಅರಣ್ಯ ಬಫರ್ ವಲಯ ಮತ್ತು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಬರುವ ಸ್ಥಳಗಳಲ್ಲಿ ಅಕ್ರಮ ರೆಸಾರ್ಟ್ಗಳು, ಹೋಟೆಲ್ಗಳು ಮತ್ತು ವಾಣಿಜ್ಯ ಕಟ್ಟಡಗಳು ತಲೆ ಎತ್ತಿವೆ’ ಎಂದು ಆರೋಪಿಸಿದರು.</p><p>‘ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಎಲ್ಲಾ ರೆಸಾರ್ಟ್ಗಳು, ಬಾರ್, ಕ್ಲಬ್, ಹೋಟೆಲ್ ಹಾಗೂ ಇತರೆ ವಾಣಿಜ್ಯ ಚಟುವಟಿಕೆ ಕೇಂದ್ರಗಳನ್ನು ತಕ್ಷಣ ತೆರವುಗೊಳಿಸಬೇಕು. ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪಾರದರ್ಶಕವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದು ಒತ್ತಾಯಿಸಿದರು.</p><p>‘ಅಕ್ರಮ ಕಟ್ಟಡಗಳು ಅರಣ್ಯ ಕಾಯ್ದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸುತ್ತಿದ್ದು, ವನ್ಯಜೀವಿಗಳ ಮೇಲೆ ಪರಿಣಾಮ ಬೀರುತ್ತಿವೆ. ಸಾರ್ವಜನಿಕರು ಮತ್ತು ಸಂಘಟನೆಗಳು ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿವೆ. ಆದರೆ ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಕಬಿನಿ ಹಿನ್ನೀರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅಕ್ರಮ ಕಟ್ಟಡಗಳು ಮತ್ತು ರೆಸಾರ್ಟ್ಗಳನ್ನು ತೆರವುಗೊಳಿಸಬೇಕು’<br>ಎಂದರು.</p><p>‘ಪರಿಸರ ಸೂಕ್ಷ್ಮ ವಲಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಅರಣ್ಯ, ವನ್ಯಜೀವಿಗಳು ಮತ್ತು ಪರಿಸರವನ್ನು ರಕ್ಷಿಸಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲಾಗಿದೆ’ ಎಂದರು. </p><p>‘ನಮ್ಮ ಹೋರಾಟ ಅಕ್ರಮ ರೆಸಾರ್ಟ್ಗಳ ವಿರುದ್ಧ ಮಾತ್ರ, ಈ ಹೋರಾಟ ಸಂವಿಧಾನಬದ್ಧ, ಶಾಂತಿಯುತ ಹಾಗೂ ಕಾನೂನು ಬದ್ಧವಾಗಿದ್ದು, ಸಾರ್ವಜನಿರಿಗೆ, ಸರ್ಕಾರಿ ಆಸ್ತಿಗೆ ಯಾವುದೇ ರೀತಿ ಧಕ್ಕೆ ಉಂಟಾಗದಂತೆ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದರು.</p><p>ವಕೀಲ ರವಿ ಕುಮಾರ್ ಮಾತನಾಡಿ, ‘ಅಕ್ರಮವಾಗಿ ನಿರ್ಮಾಣಗೊಂಡಿರುವ ಹೋಟೆಲ್ಗಳು, ಕ್ಲಬ್ಗಳು ಮತ್ತು ಇತರೆ ವಾಣಿಜ್ಯ ಕಟ್ಟಡಗಳು ಇಂದು ಕಬಿನಿ ಪರಿಸರ ವ್ಯವಸ್ಥೆಗೆ ಬಾರಿ ಅಪಾಯವನ್ನುಂಟು ಮಾಡುತ್ತಿವೆ, ಈ ಅಕ್ರಮ ಚಟುವಟಿಕೆಗಳಿಂದ ವನ್ಯಜೀವಿಗಳ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿದೆ’ ಎಂದರು.</p><p>ರೈತ ಮುಖಂಡ ಮಂಜುಕಿರಣ್, ಕುಮಾರಸ್ವಾಮಿ, ದಾಸೆಗೌಡ ಹಾಗೂ ಮುಖಂಡರು ಭಾಗವಹಿಸಿದ್ದರು. </p>.<p><strong>ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ</strong></p><p><strong>ನಿಯಮ ಕಟ್ಟುನಿಟ್ಟಾಗಿ ಪಾಲಿಸಿ</strong></p><p><strong>ಸಾರ್ವಜನಿರಿಗೆ ತೊಂದರೆಯಾಗದಂತೆ ಪ್ರತಿಭಟನೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>