ಬಾಲಕಿಯರು ಕಳಸಗಳನ್ನು ಹೊತ್ತು ಸಾಗಿದ್ದು ವಿಶೇಷ. ಮಂಗಳ ವಾದ್ಯದ ಮೇಳಕ್ಕೆ ತಕ್ಕಂತೆ ವೀರಭದ್ರ ಕುಣಿತದವರು ಹೆಜ್ಜೆ ಹಾಕಿದರು. ಮಹಿಳೆಯರು ಬಾಯಿಗೆ ಬೀಗ ಹಾಕಿಕೊಂಡು ಹರಕೆ ತೀರಿಸಿದರು, ಯುವಕರು ಹೋಳಿಯಾಡಿದರು.
ಬೆಳಿಗ್ಗೆ 9-30 ಕ್ಕೆ ಮೆರವಣಿಗೆ ಮುಗಿಯಿತು, ಕಾಳಮ್ಮ ದೇವಿಯ ರಥೋತ್ಸವದ ನಂತರ ತಂಪಿನ ಪೂಜೆ ನಡೆಯಿತು.
ತಂಪಿನ ಪೂಜೆಯೇ ವಿಶೇಷ :
ಮಹಿಳೆಯರು ಅಕ್ಕಿ ತಂಬಿಟ್ಟು, ಎಳ್ಳು ತಂಬಿಟ್ಟು, ಗಣಗಲೆ ಹೂವಿನಿಂದ ಮಾಡಿದ ಹಾರ ತಂದು ವಿಶೇಷವಾಗಿ ಪೂಜೆ ಸಲ್ಲಿಸಿದರು.
ನಂತರ ಕಾಳಮ್ಮನವರ ರಥದ ಬಳಿ ಪೂಜೆ ಸಲ್ಲಿಸಿ, ಆ ಬಳಿಕ ತಂಬಿಟ್ಟನ್ನು ನೆರೆಯೊರೆಯವರಿಗೆ ಹಂಚಿ ಸಂಭ್ರಮಿಸಿದರು.