<p><strong>ಹಂಪಾಪುರ</strong> : ಎಚ್.ಡಿ. ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಗ್ರಾಮದಲ್ಲಿ ಗುರುವಾರ ಕಾಳಮ್ಮನವರ ರಥೋತ್ಸವ ಮತ್ತು ತಂಪೋತ್ಸವವವನ್ನು ಗ್ರಾಮಸ್ಥರು ವಿಜೃಂಭಣೆಯಿಂದ ಆಚರಿಸಿದರು.</p>.<p>ಮಂಗಳವಾದ್ಯದೊಡನೆ ಹೊಸತೊರವಳ್ಳಿ ಗ್ರಾಮದ ಮಾರ್ಗವಾಗಿ ಮಕ್ಕಳು ಮತ್ತು ಮಹಿಳೆಯರು, ಗ್ರಾಮಸ್ಥರು ತೆರಳಿ ಕಳಶಗಳನ್ನು ತಂದು ಬೆಳಗನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು.</p>.<p>ಬಾಲಕಿಯರು ಕಳಸಗಳನ್ನು ಹೊತ್ತು ಸಾಗಿದ್ದು ವಿಶೇಷ. ಮಂಗಳ ವಾದ್ಯದ ಮೇಳಕ್ಕೆ ತಕ್ಕಂತೆ ವೀರಭದ್ರ ಕುಣಿತದವರು ಹೆಜ್ಜೆ ಹಾಕಿದರು. ಮಹಿಳೆಯರು ಬಾಯಿಗೆ ಬೀಗ ಹಾಕಿಕೊಂಡು ಹರಕೆ ತೀರಿಸಿದರು, ಯುವಕರು ಹೋಳಿಯಾಡಿದರು.<br> ಬೆಳಿಗ್ಗೆ 9-30 ಕ್ಕೆ ಮೆರವಣಿಗೆ ಮುಗಿಯಿತು, ಕಾಳಮ್ಮ ದೇವಿಯ ರಥೋತ್ಸವದ ನಂತರ ತಂಪಿನ ಪೂಜೆ ನಡೆಯಿತು.<br> ತಂಪಿನ ಪೂಜೆಯೇ ವಿಶೇಷ : <br> ಮಹಿಳೆಯರು ಅಕ್ಕಿ ತಂಬಿಟ್ಟು, ಎಳ್ಳು ತಂಬಿಟ್ಟು, ಗಣಗಲೆ ಹೂವಿನಿಂದ ಮಾಡಿದ ಹಾರ ತಂದು ವಿಶೇಷವಾಗಿ ಪೂಜೆ ಸಲ್ಲಿಸಿದರು.<br> ನಂತರ ಕಾಳಮ್ಮನವರ ರಥದ ಬಳಿ ಪೂಜೆ ಸಲ್ಲಿಸಿ, ಆ ಬಳಿಕ ತಂಬಿಟ್ಟನ್ನು ನೆರೆಯೊರೆಯವರಿಗೆ ಹಂಚಿ ಸಂಭ್ರಮಿಸಿದರು.</p>.<p>ರಥೋತ್ಸವದ ಅಂಗವಾಗಿ ಗ್ರಾಮದ ಎಲ್ಲಾ ದೇವಾಲಯಗಳನ್ನು ವಿದ್ಯುತ್ ದೀಪಗಳಿಂದ ಆಲಂಕರಿಸಲಾಗಿತ್ತು. ಅಲ್ಲದೇ ಎಲ್ಲ ಮನೆಗಳ ಮುಂದೆ ರಂಗೋಲಿ ಹಾಕಿ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.</p>.<p>ವಿಶೇಷ ಎಡೆ;<br> ರಥೋತ್ಸವದ ಅಂಗವಾಗಿ ಕಾಳಮ್ಮ ದೇವಿಗೆ ಹಲಸಿನ ಹಣ್ಣು ಹಾಗೂ ಬಾಳೆ ಹಣ್ಣಿನ ಎಡೆಯನ್ನು ನೀಡಲಾಯಿತು, ಗ್ರಾಮಸ್ಥರು ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.<br> ಬಿದಿರಿನ ರಥ : <br> ಕಾಳಮ್ಮ ದೇವಿಯನ್ನು ಗ್ರಾಮದಲ್ಲಿ ಬಿದಿರಿನ ರಥದಲ್ಲಿ ಪ್ರತಿಷ್ಠಾಪಿಸಿ ವಿಶೇಷವಾಗಿ ಅಲಂಕರಿಸಲಾಗಿತ್ತು. ಸ್ವತಃ ಗ್ರಾಮಸ್ಥರೇ ಕೃತಕವಾಗಿ ನೂತನವಾಗಿ ನಿರ್ಮಿಸಿದ್ದರು, ಪ್ರತಿ ಭಾರಿಯೂ ನೂತನವಾಗಿ ನಿರ್ಮಿಸುವುದು ಈ ಗ್ಎಅಮದಲ್ಲಿನ ರಥೋತ್ಸವದ ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಾಪುರ</strong> : ಎಚ್.ಡಿ. ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಗ್ರಾಮದಲ್ಲಿ ಗುರುವಾರ ಕಾಳಮ್ಮನವರ ರಥೋತ್ಸವ ಮತ್ತು ತಂಪೋತ್ಸವವವನ್ನು ಗ್ರಾಮಸ್ಥರು ವಿಜೃಂಭಣೆಯಿಂದ ಆಚರಿಸಿದರು.</p>.<p>ಮಂಗಳವಾದ್ಯದೊಡನೆ ಹೊಸತೊರವಳ್ಳಿ ಗ್ರಾಮದ ಮಾರ್ಗವಾಗಿ ಮಕ್ಕಳು ಮತ್ತು ಮಹಿಳೆಯರು, ಗ್ರಾಮಸ್ಥರು ತೆರಳಿ ಕಳಶಗಳನ್ನು ತಂದು ಬೆಳಗನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು.</p>.<p>ಬಾಲಕಿಯರು ಕಳಸಗಳನ್ನು ಹೊತ್ತು ಸಾಗಿದ್ದು ವಿಶೇಷ. ಮಂಗಳ ವಾದ್ಯದ ಮೇಳಕ್ಕೆ ತಕ್ಕಂತೆ ವೀರಭದ್ರ ಕುಣಿತದವರು ಹೆಜ್ಜೆ ಹಾಕಿದರು. ಮಹಿಳೆಯರು ಬಾಯಿಗೆ ಬೀಗ ಹಾಕಿಕೊಂಡು ಹರಕೆ ತೀರಿಸಿದರು, ಯುವಕರು ಹೋಳಿಯಾಡಿದರು.<br> ಬೆಳಿಗ್ಗೆ 9-30 ಕ್ಕೆ ಮೆರವಣಿಗೆ ಮುಗಿಯಿತು, ಕಾಳಮ್ಮ ದೇವಿಯ ರಥೋತ್ಸವದ ನಂತರ ತಂಪಿನ ಪೂಜೆ ನಡೆಯಿತು.<br> ತಂಪಿನ ಪೂಜೆಯೇ ವಿಶೇಷ : <br> ಮಹಿಳೆಯರು ಅಕ್ಕಿ ತಂಬಿಟ್ಟು, ಎಳ್ಳು ತಂಬಿಟ್ಟು, ಗಣಗಲೆ ಹೂವಿನಿಂದ ಮಾಡಿದ ಹಾರ ತಂದು ವಿಶೇಷವಾಗಿ ಪೂಜೆ ಸಲ್ಲಿಸಿದರು.<br> ನಂತರ ಕಾಳಮ್ಮನವರ ರಥದ ಬಳಿ ಪೂಜೆ ಸಲ್ಲಿಸಿ, ಆ ಬಳಿಕ ತಂಬಿಟ್ಟನ್ನು ನೆರೆಯೊರೆಯವರಿಗೆ ಹಂಚಿ ಸಂಭ್ರಮಿಸಿದರು.</p>.<p>ರಥೋತ್ಸವದ ಅಂಗವಾಗಿ ಗ್ರಾಮದ ಎಲ್ಲಾ ದೇವಾಲಯಗಳನ್ನು ವಿದ್ಯುತ್ ದೀಪಗಳಿಂದ ಆಲಂಕರಿಸಲಾಗಿತ್ತು. ಅಲ್ಲದೇ ಎಲ್ಲ ಮನೆಗಳ ಮುಂದೆ ರಂಗೋಲಿ ಹಾಕಿ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.</p>.<p>ವಿಶೇಷ ಎಡೆ;<br> ರಥೋತ್ಸವದ ಅಂಗವಾಗಿ ಕಾಳಮ್ಮ ದೇವಿಗೆ ಹಲಸಿನ ಹಣ್ಣು ಹಾಗೂ ಬಾಳೆ ಹಣ್ಣಿನ ಎಡೆಯನ್ನು ನೀಡಲಾಯಿತು, ಗ್ರಾಮಸ್ಥರು ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.<br> ಬಿದಿರಿನ ರಥ : <br> ಕಾಳಮ್ಮ ದೇವಿಯನ್ನು ಗ್ರಾಮದಲ್ಲಿ ಬಿದಿರಿನ ರಥದಲ್ಲಿ ಪ್ರತಿಷ್ಠಾಪಿಸಿ ವಿಶೇಷವಾಗಿ ಅಲಂಕರಿಸಲಾಗಿತ್ತು. ಸ್ವತಃ ಗ್ರಾಮಸ್ಥರೇ ಕೃತಕವಾಗಿ ನೂತನವಾಗಿ ನಿರ್ಮಿಸಿದ್ದರು, ಪ್ರತಿ ಭಾರಿಯೂ ನೂತನವಾಗಿ ನಿರ್ಮಿಸುವುದು ಈ ಗ್ಎಅಮದಲ್ಲಿನ ರಥೋತ್ಸವದ ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>