<p><strong>ಎಚ್.ಡಿ.ಕೋಟೆ:</strong> ಗಣಪತಿ ಹೋಮ ಮತ್ತು ಪೂಜೆ ಮಾಡುವ ಮೂಲಕ ಪಟ್ಟಣದಲ್ಲಿರುವ ವಾರಾಹಿ ಮತ್ತು ಮಾರಮ್ಮನವರ ಜಾತ್ರಾ ಮಹೋತ್ಸವಕ್ಕೆ ಅಧಿಕೃತವಾಗಿ ಸೋಮವಾರದಿಂದ ಚಾಲನೆ ನೀಡಲಾಯಿತು.</p>.<p>ಜಾತ್ರೆಯ ಅಂಗವಾಗಿ ದೇವಸ್ಥಾನದ ಸುತ್ತಲೂ ವಿವಿಧ ಫಲ–ಪುಷ್ಪಗಳಿಂದ ವಿಶೇಷವಾದ ಅಲಂಕಾರವನ್ನು ಮಾಡಿದ್ದು, ಬಾಳೆಕಂದು, ಮಾವಿನ ತೋರಣ, ರಂಗೋಲಿ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆದವು.</p>.<p>ಭಕ್ತರಿಗೆ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಲು ಅವಕಾಶ ಮಾಡಿಕೊಟ್ಟಿದ್ದರು. ಸಾರ್ವಜನಿಕರು ಸಾಗರೋಪಾದಿಯಲ್ಲಿ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಜಾತ್ರೆ ಈ ವರ್ಷ ನಡೆಯುತ್ತಿರುವುದು ಗ್ರಾಮದ ಜನತೆಯಲ್ಲಿ ಹರ್ಷ ಮತ್ತು ಸಂತೋಷವನ್ನುಂಟು ಮಾಡಿದೆ.</p>.<p>ಜಾತ್ರೆಯ ಮಹೋತ್ಸವದ ಮೊದಲ ದಿನವಾದ ಸೋಮವಾರ ಮೈಸೂರು ಅರಮನೆ ತಂಪು ಹೆಸರಿನಲ್ಲಿ ನಡೆಯುವ ತಂಪು ಸೇವೆ ನೆರವೇರಿಸಲಾಯಿತು. ತಹಶೀಲ್ದಾರ್ ಅವರನ್ನು ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ಕರೆತಂದು ತಂಪು ಪೂಜೆಯನ್ನು ಸಂಜೆ ಮಾಡಲಾಯಿತು ಎಂದು ಪಟೇಲ್ ನಾಗರಾಜು ತಿಳಿಸಿದರು.</p>.<p>ಇಲ್ಲಿನ ಸಂಪ್ರದಾಯದಂತೆ ತಾರಕ ನದಿಯ ಬಳಿ ಮಾರಮ್ಮನವರ ಪತಿ ಎಂದು ಕರೆಯುವ ಫೋಟೋರಾಯ ಸ್ವಾಮಿಯನ್ನು ಪೂಜಿಸಿ ದೇವಸ್ಥಾನದ ಬಳಿಗೆ ತಂದು ಪ್ರತಿಷ್ಠಾಪಿಸಲಾಗುವುದು, ನಂತರ ಜಾತ್ರಾ ಮಹೋತ್ಸವಗಳು ತಯಾರಿಗಳನ್ನು ಮಾಡಿಕೊಳ್ಳುತ್ತಾರೆ. ವರಾಹಿ ಮತ್ತು ಮಾರಮ್ಮನವರ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವವನ್ನು 9 ವರ್ಷಗಳ ನಂತರ ಅದ್ದೂರಿಯಾಗಿ ಆಚರಿಸಲು ಪಟ್ಟಣದ ಜನತೆ ಸಜ್ಜಾಗಿದ್ದಾರೆ.</p>.<p>ಜಾತ್ರೆಯು ಜುಲೈ 2ರವರೆಗೆ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಪೂಜೆಗಳು ನಡೆಯಲಿವೆ. ಪಟ್ಟಣದ ಮನೆ ಮನೆಗಳು, ದೇಗುಲಗಳು ವಿದ್ಯುತ್ ದೀಪಾಲಂಕಾರ, ಸುಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿವೆ. ಕೊಂಡೋತ್ಸವಕ್ಕೆ ಕೊಂಡ ಸಜ್ಜುಗೊಳಿಸಲು ಕಗ್ಗಲಿ ಸೌದೆಯನ್ನು ಈಗಾಗಲೆ ಸಂಗ್ರಹಿಸಲಾಗಿದೆ.</p>.<p>ಮಂಗಳವಾರ ದಿನ ರಾತ್ರಿ 9 ಗಂಟೆಗೆ ಮಡೆ ಹಾಗೂ ಕೊಂಡದ ಕಗ್ಗಲಿ ಸೌದೆಗೆ ಅಗ್ನಿ ಸ್ಪರ್ಶ ಮಾಡಲಾಗುತ್ತದೆ. ಜು. 2ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕೊಂಡ ಹಾಯುವ ಕಾರ್ಯಕ್ರಮ ನಡೆಯಲಿದೆ.</p>.<p>ಪಟೇಲ್ ನಾಗರಾಜು, ಶಾನುಭೋಗ ಫಣೀಶ್, ಮುಖಂಡರಾದ ಎಂ.ಸಿ.ದೊಡ್ಡನಾಯಕ, ವರ್ತಕರ ಸಂಘದ ಅಧ್ಯಕ್ಷ ವಿನಯ್ ಭಜರಂಗಿ, ಸೋಮು, ಶ್ರೀಕಾಂತ್, ಪ್ರಮೋದ್, ಸ್ಟುಡಿಯೋ ಪ್ರಕಾಶ್, ಕಂಪ್ಯೂಟರ್ ನಾಗರಾಜ್, ಚಂದ್ರ ಮೌಳಿ, ಶ್ರೀಕಂಠರಾಜ್, ಬಸವರಾಜ ಶೆಟ್ಟಿ, ಸುನಿಲ್ ಕುಮಾರ್, ಪ್ರಸಾದ್, ಸೋಮಸುಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ಗಣಪತಿ ಹೋಮ ಮತ್ತು ಪೂಜೆ ಮಾಡುವ ಮೂಲಕ ಪಟ್ಟಣದಲ್ಲಿರುವ ವಾರಾಹಿ ಮತ್ತು ಮಾರಮ್ಮನವರ ಜಾತ್ರಾ ಮಹೋತ್ಸವಕ್ಕೆ ಅಧಿಕೃತವಾಗಿ ಸೋಮವಾರದಿಂದ ಚಾಲನೆ ನೀಡಲಾಯಿತು.</p>.<p>ಜಾತ್ರೆಯ ಅಂಗವಾಗಿ ದೇವಸ್ಥಾನದ ಸುತ್ತಲೂ ವಿವಿಧ ಫಲ–ಪುಷ್ಪಗಳಿಂದ ವಿಶೇಷವಾದ ಅಲಂಕಾರವನ್ನು ಮಾಡಿದ್ದು, ಬಾಳೆಕಂದು, ಮಾವಿನ ತೋರಣ, ರಂಗೋಲಿ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆದವು.</p>.<p>ಭಕ್ತರಿಗೆ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಲು ಅವಕಾಶ ಮಾಡಿಕೊಟ್ಟಿದ್ದರು. ಸಾರ್ವಜನಿಕರು ಸಾಗರೋಪಾದಿಯಲ್ಲಿ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಜಾತ್ರೆ ಈ ವರ್ಷ ನಡೆಯುತ್ತಿರುವುದು ಗ್ರಾಮದ ಜನತೆಯಲ್ಲಿ ಹರ್ಷ ಮತ್ತು ಸಂತೋಷವನ್ನುಂಟು ಮಾಡಿದೆ.</p>.<p>ಜಾತ್ರೆಯ ಮಹೋತ್ಸವದ ಮೊದಲ ದಿನವಾದ ಸೋಮವಾರ ಮೈಸೂರು ಅರಮನೆ ತಂಪು ಹೆಸರಿನಲ್ಲಿ ನಡೆಯುವ ತಂಪು ಸೇವೆ ನೆರವೇರಿಸಲಾಯಿತು. ತಹಶೀಲ್ದಾರ್ ಅವರನ್ನು ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ಕರೆತಂದು ತಂಪು ಪೂಜೆಯನ್ನು ಸಂಜೆ ಮಾಡಲಾಯಿತು ಎಂದು ಪಟೇಲ್ ನಾಗರಾಜು ತಿಳಿಸಿದರು.</p>.<p>ಇಲ್ಲಿನ ಸಂಪ್ರದಾಯದಂತೆ ತಾರಕ ನದಿಯ ಬಳಿ ಮಾರಮ್ಮನವರ ಪತಿ ಎಂದು ಕರೆಯುವ ಫೋಟೋರಾಯ ಸ್ವಾಮಿಯನ್ನು ಪೂಜಿಸಿ ದೇವಸ್ಥಾನದ ಬಳಿಗೆ ತಂದು ಪ್ರತಿಷ್ಠಾಪಿಸಲಾಗುವುದು, ನಂತರ ಜಾತ್ರಾ ಮಹೋತ್ಸವಗಳು ತಯಾರಿಗಳನ್ನು ಮಾಡಿಕೊಳ್ಳುತ್ತಾರೆ. ವರಾಹಿ ಮತ್ತು ಮಾರಮ್ಮನವರ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವವನ್ನು 9 ವರ್ಷಗಳ ನಂತರ ಅದ್ದೂರಿಯಾಗಿ ಆಚರಿಸಲು ಪಟ್ಟಣದ ಜನತೆ ಸಜ್ಜಾಗಿದ್ದಾರೆ.</p>.<p>ಜಾತ್ರೆಯು ಜುಲೈ 2ರವರೆಗೆ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಪೂಜೆಗಳು ನಡೆಯಲಿವೆ. ಪಟ್ಟಣದ ಮನೆ ಮನೆಗಳು, ದೇಗುಲಗಳು ವಿದ್ಯುತ್ ದೀಪಾಲಂಕಾರ, ಸುಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿವೆ. ಕೊಂಡೋತ್ಸವಕ್ಕೆ ಕೊಂಡ ಸಜ್ಜುಗೊಳಿಸಲು ಕಗ್ಗಲಿ ಸೌದೆಯನ್ನು ಈಗಾಗಲೆ ಸಂಗ್ರಹಿಸಲಾಗಿದೆ.</p>.<p>ಮಂಗಳವಾರ ದಿನ ರಾತ್ರಿ 9 ಗಂಟೆಗೆ ಮಡೆ ಹಾಗೂ ಕೊಂಡದ ಕಗ್ಗಲಿ ಸೌದೆಗೆ ಅಗ್ನಿ ಸ್ಪರ್ಶ ಮಾಡಲಾಗುತ್ತದೆ. ಜು. 2ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕೊಂಡ ಹಾಯುವ ಕಾರ್ಯಕ್ರಮ ನಡೆಯಲಿದೆ.</p>.<p>ಪಟೇಲ್ ನಾಗರಾಜು, ಶಾನುಭೋಗ ಫಣೀಶ್, ಮುಖಂಡರಾದ ಎಂ.ಸಿ.ದೊಡ್ಡನಾಯಕ, ವರ್ತಕರ ಸಂಘದ ಅಧ್ಯಕ್ಷ ವಿನಯ್ ಭಜರಂಗಿ, ಸೋಮು, ಶ್ರೀಕಾಂತ್, ಪ್ರಮೋದ್, ಸ್ಟುಡಿಯೋ ಪ್ರಕಾಶ್, ಕಂಪ್ಯೂಟರ್ ನಾಗರಾಜ್, ಚಂದ್ರ ಮೌಳಿ, ಶ್ರೀಕಂಠರಾಜ್, ಬಸವರಾಜ ಶೆಟ್ಟಿ, ಸುನಿಲ್ ಕುಮಾರ್, ಪ್ರಸಾದ್, ಸೋಮಸುಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>