<p><strong>ಎಚ್.ಡಿ. ಕೋಟೆ:</strong> ತಾಲ್ಲೂಕಿನ ತಾರಕ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಯೊಂದು ಓಡಾಡಿರುವುದು ರೈತರು ಮೊಬೈಲ್ ಫೋನ್ಗಳಲ್ಲಿ ಸೆರೆಹಿಡಿದಿದ್ದಾರೆ.</p>.<p>ತಾರಕ ಗ್ರಾಮಕ್ಕೆ ಸಮೀಪವೇ ಆನೆ ಓಡಾಡಿದೆ. ತಾರಕಾ ಜಲಾಶಯದ ಹಿನ್ನೀರು ನಾಗರಹೊಳೆ ಅಭಯಾರಣ್ಯಕ್ಕೆ ಸೇರಿದ್ದು, ಕಾಡಂಚಿನ ಭಾಗದಲ್ಲಿ ಹತ್ತಾರು ಹಳ್ಳಿಗಳಿವೆ. ಮಳೆಯಾಗಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಬಿತ್ತನೆಗಾಗಿ ತೆರಳಿದ್ದ ಸಂದರ್ಭದಲ್ಲಿ ಆನೆ ಓಡಾಡಿರುವುದು ಕಂಡುಬಂದಿದೆ. ರೈತರು ತೀವ್ರ ಆತಂಕಗೊಂಡಿದ್ದಾರೆ.</p>.<p>‘ಕಾಡಂಚಿನ ಪ್ರದೇಶವಾಗಿರುವುದರಿಂದ ಕಾಡುಪ್ರಾಣಿಗಳು ಆಗಾಗ್ಗೆ ಕಾಣಿಸಿಕೊಳ್ಳುತ್ತವೆ. ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಮೀನಿಗೆ ತೆರಳುವಾಗ ಎಚ್ಚರಿರ ವಹಿಸುವಂತೆ ಅರಣ್ಯ ಇಲಾಖೆಯ ಸಿಬ್ಬಂದಿ ರೈತರಿಗೆ ಸೂಚಿಸಿದ್ದಾರೆ.</p>.<p>ಬೊಂಬಲಾಪುರ, ಬೂದನೂರು, ಮೇಟಿಕುಪ್ಪೆ, ಚಕೋಡನಹಳ್ಳಿ, ಭೀಮನಹಳ್ಳಿ ಭಾಗದ ಗ್ರಾಮಗಳಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳು ನಡೆಯುತ್ತಿದ್ದು, ಆನೆಗಳ ಹಾವಳಿ ಕಡಿಮೆಯಾಗಲಿದೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-38-354354406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ. ಕೋಟೆ:</strong> ತಾಲ್ಲೂಕಿನ ತಾರಕ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಯೊಂದು ಓಡಾಡಿರುವುದು ರೈತರು ಮೊಬೈಲ್ ಫೋನ್ಗಳಲ್ಲಿ ಸೆರೆಹಿಡಿದಿದ್ದಾರೆ.</p>.<p>ತಾರಕ ಗ್ರಾಮಕ್ಕೆ ಸಮೀಪವೇ ಆನೆ ಓಡಾಡಿದೆ. ತಾರಕಾ ಜಲಾಶಯದ ಹಿನ್ನೀರು ನಾಗರಹೊಳೆ ಅಭಯಾರಣ್ಯಕ್ಕೆ ಸೇರಿದ್ದು, ಕಾಡಂಚಿನ ಭಾಗದಲ್ಲಿ ಹತ್ತಾರು ಹಳ್ಳಿಗಳಿವೆ. ಮಳೆಯಾಗಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಬಿತ್ತನೆಗಾಗಿ ತೆರಳಿದ್ದ ಸಂದರ್ಭದಲ್ಲಿ ಆನೆ ಓಡಾಡಿರುವುದು ಕಂಡುಬಂದಿದೆ. ರೈತರು ತೀವ್ರ ಆತಂಕಗೊಂಡಿದ್ದಾರೆ.</p>.<p>‘ಕಾಡಂಚಿನ ಪ್ರದೇಶವಾಗಿರುವುದರಿಂದ ಕಾಡುಪ್ರಾಣಿಗಳು ಆಗಾಗ್ಗೆ ಕಾಣಿಸಿಕೊಳ್ಳುತ್ತವೆ. ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜಮೀನಿಗೆ ತೆರಳುವಾಗ ಎಚ್ಚರಿರ ವಹಿಸುವಂತೆ ಅರಣ್ಯ ಇಲಾಖೆಯ ಸಿಬ್ಬಂದಿ ರೈತರಿಗೆ ಸೂಚಿಸಿದ್ದಾರೆ.</p>.<p>ಬೊಂಬಲಾಪುರ, ಬೂದನೂರು, ಮೇಟಿಕುಪ್ಪೆ, ಚಕೋಡನಹಳ್ಳಿ, ಭೀಮನಹಳ್ಳಿ ಭಾಗದ ಗ್ರಾಮಗಳಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳು ನಡೆಯುತ್ತಿದ್ದು, ಆನೆಗಳ ಹಾವಳಿ ಕಡಿಮೆಯಾಗಲಿದೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-38-354354406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>