<p><strong>ಕೆ.ಆರ್.ನಗರ (ಮೈಸೂರು ಜಿಲ್ಲೆ):</strong> ‘ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿಗೌಡ ಸಮುದಾಯವನ್ನು ‘2ಎ ಪ್ರವರ್ಗ’ಕ್ಕೆ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕವಾಗಿ ಬೆಂಬಲ ಕೊಡುತ್ತೇನೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಲ್ಲಿ ಭಾನುವಾರ ಭರವಸೆ ನೀಡಿದರು.</p>.<p>ಇಲ್ಲಿ, ನಾಮಧಾರಿಗೌಡ ಸಮುದಾಯ ಭವನದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಒತ್ತಾಯದ ಬಗ್ಗೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ಬನ್ನಿ. ಹಿಂದುಳಿದ ವರ್ಗಗಳ ಆಯೋಗಕ್ಕೆ, ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಪತ್ರಗಳನ್ನೂ ತನ್ನಿ’ ಎಂದು ಹೇಳಿದರು.</p>.<p>‘ನಾಮಧಾರಿಗೌಡ ಸಮುದಾಯವು ರಾಜಕೀಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕಾಗಿದೆ. ನಮ್ಮನ್ನು ಗುರುತಿಸಬೇಕು ಎಂದು ಸಮುದಾಯದವರು ಕೇಳುತ್ತಲೇ ಇದ್ದಾರೆ. ನೋವು, ಆತಂಕ ಬಿಡಿ. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದರು.</p>.<p>ಸಣ್ಣ ಸಮುದಾಯಗಳಿಗೆ: ‘ಚಿಕ್ಕಮಗಳೂರು ಕಡೆ ಸಣ್ಣಪ್ರಮಾಣದಲ್ಲಿರುವ ಸರ್ಪಒಕ್ಕಲಿಗ ಸಮುದಾಯದ ಎಸ್.ಆರ್. ಲಕ್ಷ್ಮಯ್ಯ ಅವರನ್ನು ಎಚ್.ಡಿ.ದೇವೇಗೌಡರು ಎರಡು ಬಾರಿ ಶಾಸಕರಾಗಿ ಮಾಡಿದರು. ನಂತರ ಅವರ ಪುತ್ರ ಧರ್ಮೇಗೌಡರು 2 ಬಾರಿ ಪರಿಷತ್ ಸದಸ್ಯ, ಒಮ್ಮೆ ಉಪ ಸಭಾಪತಿ ಆದರು. ಅವರ ಇನ್ನೊಬ್ಬ ಪುತ್ರ ಎಸ್.ಎಲ್.ಭೋಜೇಗೌಡರು ನಮ್ಮ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದಾರೆ’ ಎಂದು ತಿಳಿಸಿದರು.</p>.<p>‘ಅತಿ ಸಣ್ಣ ಉಪ್ಪಾರ ಸಮುದಾಯಕ್ಕೂ ಪಕ್ಷ ಅವಕಾಶ ಕೊಟ್ಟಿದೆ. ಎಚ್.ಸಿ.ನೀರಾವರಿ ಅವರನ್ನು ರಾಜಕೀಯಕ್ಕೆ ತಂದೆವು. ನಾಮಧಾರಿಗೌಡ ಸಮುದಾಯದ ಒಬ್ಬರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗುವುದು. ಸಮುದಾಯ ಭವನದ ಅಭಿವೃದ್ಧಿಗೆ ಅನುದಾನ ಒದಗಿಸುತ್ತೇನೆ’ ಎಂದೂ ಭರವಸೆ ನೀಡಿದರು.</p>.<div><blockquote>ಉಪ್ಪಾರ ಸರ್ಪ ಒಕ್ಕಲಿಗ ಸೇರಿ ಅನೇಕ ಸಣ್ಣ ಸಮುದಾಯಗಳಿಗೆ ಪಕ್ಷ ಅವಕಾಶ ಕಲ್ಪಿಸಿದೆ. ಸಣ್ಣ ಸಮುದಾಯಗಳನ್ನು ದೇವೇಗೌಡರು ಬೆಳೆಸಿದ್ದಾರೆ. ಆದರೆ ಹಿಂದುಳಿದ ನಾಯಕ ಎಂದು ಫಲಕ ಹಾಕಿಕೊಂಡು ಕೆಲವರು ಓಡಾಡುತ್ತಾರೆ. </blockquote><span class="attribution">ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ (ಮೈಸೂರು ಜಿಲ್ಲೆ):</strong> ‘ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿಗೌಡ ಸಮುದಾಯವನ್ನು ‘2ಎ ಪ್ರವರ್ಗ’ಕ್ಕೆ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕವಾಗಿ ಬೆಂಬಲ ಕೊಡುತ್ತೇನೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಲ್ಲಿ ಭಾನುವಾರ ಭರವಸೆ ನೀಡಿದರು.</p>.<p>ಇಲ್ಲಿ, ನಾಮಧಾರಿಗೌಡ ಸಮುದಾಯ ಭವನದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಒತ್ತಾಯದ ಬಗ್ಗೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ಬನ್ನಿ. ಹಿಂದುಳಿದ ವರ್ಗಗಳ ಆಯೋಗಕ್ಕೆ, ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಪತ್ರಗಳನ್ನೂ ತನ್ನಿ’ ಎಂದು ಹೇಳಿದರು.</p>.<p>‘ನಾಮಧಾರಿಗೌಡ ಸಮುದಾಯವು ರಾಜಕೀಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕಾಗಿದೆ. ನಮ್ಮನ್ನು ಗುರುತಿಸಬೇಕು ಎಂದು ಸಮುದಾಯದವರು ಕೇಳುತ್ತಲೇ ಇದ್ದಾರೆ. ನೋವು, ಆತಂಕ ಬಿಡಿ. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದರು.</p>.<p>ಸಣ್ಣ ಸಮುದಾಯಗಳಿಗೆ: ‘ಚಿಕ್ಕಮಗಳೂರು ಕಡೆ ಸಣ್ಣಪ್ರಮಾಣದಲ್ಲಿರುವ ಸರ್ಪಒಕ್ಕಲಿಗ ಸಮುದಾಯದ ಎಸ್.ಆರ್. ಲಕ್ಷ್ಮಯ್ಯ ಅವರನ್ನು ಎಚ್.ಡಿ.ದೇವೇಗೌಡರು ಎರಡು ಬಾರಿ ಶಾಸಕರಾಗಿ ಮಾಡಿದರು. ನಂತರ ಅವರ ಪುತ್ರ ಧರ್ಮೇಗೌಡರು 2 ಬಾರಿ ಪರಿಷತ್ ಸದಸ್ಯ, ಒಮ್ಮೆ ಉಪ ಸಭಾಪತಿ ಆದರು. ಅವರ ಇನ್ನೊಬ್ಬ ಪುತ್ರ ಎಸ್.ಎಲ್.ಭೋಜೇಗೌಡರು ನಮ್ಮ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದಾರೆ’ ಎಂದು ತಿಳಿಸಿದರು.</p>.<p>‘ಅತಿ ಸಣ್ಣ ಉಪ್ಪಾರ ಸಮುದಾಯಕ್ಕೂ ಪಕ್ಷ ಅವಕಾಶ ಕೊಟ್ಟಿದೆ. ಎಚ್.ಸಿ.ನೀರಾವರಿ ಅವರನ್ನು ರಾಜಕೀಯಕ್ಕೆ ತಂದೆವು. ನಾಮಧಾರಿಗೌಡ ಸಮುದಾಯದ ಒಬ್ಬರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗುವುದು. ಸಮುದಾಯ ಭವನದ ಅಭಿವೃದ್ಧಿಗೆ ಅನುದಾನ ಒದಗಿಸುತ್ತೇನೆ’ ಎಂದೂ ಭರವಸೆ ನೀಡಿದರು.</p>.<div><blockquote>ಉಪ್ಪಾರ ಸರ್ಪ ಒಕ್ಕಲಿಗ ಸೇರಿ ಅನೇಕ ಸಣ್ಣ ಸಮುದಾಯಗಳಿಗೆ ಪಕ್ಷ ಅವಕಾಶ ಕಲ್ಪಿಸಿದೆ. ಸಣ್ಣ ಸಮುದಾಯಗಳನ್ನು ದೇವೇಗೌಡರು ಬೆಳೆಸಿದ್ದಾರೆ. ಆದರೆ ಹಿಂದುಳಿದ ನಾಯಕ ಎಂದು ಫಲಕ ಹಾಕಿಕೊಂಡು ಕೆಲವರು ಓಡಾಡುತ್ತಾರೆ. </blockquote><span class="attribution">ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>