<p><strong>ಮೈಸೂರು</strong>: ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗೊಂದಲ ಸೃಷ್ಟಿಸಲು ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಕಿಡಿಕಾರಿದರು.</p>.<p>ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರದ್ದು ಪಕ್ಷವೇ ಅಲ್ಲ. ಕುಟುಂಬಕ್ಕೆ ಸೀಮಿತವಾಗಿದೆ. ಹಿಂದೆ ಅಪ್ಪ–ಮಕ್ಕಳ ಪಕ್ಷವಾಗಿತ್ತು. ಈಗ ಸೊಸೆ– ಮೊಮ್ಮಕ್ಕಳದ್ದಾಗಿದೆ. ಬದ್ಧತೆಯೇ ಇಲ್ಲದವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ಹೇಳಿದರು.</p>.<p>‘ಸಾಂದರ್ಭಿಕ ಸುಳ್ಳುಗಳನ್ನು ಹೇಳುತ್ತಾ ಬರುತ್ತಿರುವ ಕೌಟುಂಬಿಕ ಪಕ್ಷವದು’ ಎಂದು ಟೀಕಿಸಿದರು.</p>.<p>‘ಕಾಂಗ್ರೆಸ್ನಲ್ಲಿ ಒಳಜಗಳ ನಡೆಯುತ್ತಿದ್ದು, ಜನರು ಬಿಜೆಪಿ ಬೆಂಬಲಿಸುತ್ತಿದ್ದಾರೆ. ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಉತ್ತಮ ಕಾರ್ಯಕ್ರಮಗಳಿಂದಾಗಿ ಜನರು ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ. ಇದನ್ನು ಸಹಿಸಲಾಗದ ಆ ಪಕ್ಷದವರು ನಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ’ ಎಂದರು.</p>.<p>‘ಸಮಾಜದ ಎಲ್ಲ ವರ್ಗಗಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಆಶಯ. ಚುನಾವಣೆಗೆ ಅಥವಾ ರಾಜಕೀಯಕ್ಕಾಗಿ ಮತದಾರರ ಓಲೈಕೆಗಾಗಿ ಯಾವುದೇ ಕಾರ್ಯಕ್ರಮವನ್ನೂ ನಾವು ಮಾಡುತ್ತಿಲ್ಲ. ರಾಜ್ಯದಾದ್ಯಂತ ವಾತಾವರಣ ನಮ್ಮ ಪರವಾಗಿದೆ. ಇತರ ಪಕ್ಷಗಳಂತೆ, ಸುಳ್ಳುಗಳನ್ನು ಹೇಳಿಕೊಂಡು ಚುನಾವಣೆಯಲ್ಲಿ ಗೆಲ್ಲಲಾಗುವುದಿಲ್ಲ’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಚೆನ್ನಾಗಿ ತಯಾರಿ ನಡೆಯುತ್ತಿದೆ. ಮತಗಟ್ಟೆ ಸಮಿತಿ ರಚಿಸಿದ್ದೇವೆ. ಮೂವತ್ತು ಮತದಾರರಿಗೆ ಒಬ್ಬೊಬ್ಬ ಪ್ರಮುಖರನ್ನು ಜೋಡಿಸಲಾಗಿದೆ. ಪ್ರಚಾರ ಕಾರ್ಯ ವ್ಯಾಪಕವಾಗಿ ನಡೆಯುತ್ತಿದೆ. ಮತಗಟ್ಟೆ ಗೆದ್ದರೆ ಎಲ್ಲವನ್ನೂ ಗೆದ್ದಂತೆ ಎಂಬ ಪರಿಕಲ್ಪನೆಯಲ್ಲಿ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<p>ಘಟಕದ ಸಹ ವಕ್ತಾರ ಡಾ.ಕೆ.ವಸಂತಕುಮಾರ್ ಮಾತನಾಡಿ, ‘ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ನವರು ಪಕ್ಷದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಆ ಬಗ್ಗೆ ಹೇಳುವುದಕ್ಕೆ ಕುಮಾರಸ್ವಾಮಿ ಯಾರು? ಎಲ್ಲ ಸಮಾಜವನ್ನೂ ಸಮಾನವಾಗಿ ನೋಡುತ್ತಿರುವ ಪಕ್ಷ ನಮ್ಮದು. ನಮ್ಮ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ಇಂತಹ ಗಿಮಿಕ್ ರಾಜಕಾರಣವನ್ನು ಬಿಡಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮುಖಂಡ ಗಿರಿಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗೊಂದಲ ಸೃಷ್ಟಿಸಲು ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಕಿಡಿಕಾರಿದರು.</p>.<p>ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರದ್ದು ಪಕ್ಷವೇ ಅಲ್ಲ. ಕುಟುಂಬಕ್ಕೆ ಸೀಮಿತವಾಗಿದೆ. ಹಿಂದೆ ಅಪ್ಪ–ಮಕ್ಕಳ ಪಕ್ಷವಾಗಿತ್ತು. ಈಗ ಸೊಸೆ– ಮೊಮ್ಮಕ್ಕಳದ್ದಾಗಿದೆ. ಬದ್ಧತೆಯೇ ಇಲ್ಲದವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ಹೇಳಿದರು.</p>.<p>‘ಸಾಂದರ್ಭಿಕ ಸುಳ್ಳುಗಳನ್ನು ಹೇಳುತ್ತಾ ಬರುತ್ತಿರುವ ಕೌಟುಂಬಿಕ ಪಕ್ಷವದು’ ಎಂದು ಟೀಕಿಸಿದರು.</p>.<p>‘ಕಾಂಗ್ರೆಸ್ನಲ್ಲಿ ಒಳಜಗಳ ನಡೆಯುತ್ತಿದ್ದು, ಜನರು ಬಿಜೆಪಿ ಬೆಂಬಲಿಸುತ್ತಿದ್ದಾರೆ. ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಉತ್ತಮ ಕಾರ್ಯಕ್ರಮಗಳಿಂದಾಗಿ ಜನರು ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ. ಇದನ್ನು ಸಹಿಸಲಾಗದ ಆ ಪಕ್ಷದವರು ನಮ್ಮ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ’ ಎಂದರು.</p>.<p>‘ಸಮಾಜದ ಎಲ್ಲ ವರ್ಗಗಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಆಶಯ. ಚುನಾವಣೆಗೆ ಅಥವಾ ರಾಜಕೀಯಕ್ಕಾಗಿ ಮತದಾರರ ಓಲೈಕೆಗಾಗಿ ಯಾವುದೇ ಕಾರ್ಯಕ್ರಮವನ್ನೂ ನಾವು ಮಾಡುತ್ತಿಲ್ಲ. ರಾಜ್ಯದಾದ್ಯಂತ ವಾತಾವರಣ ನಮ್ಮ ಪರವಾಗಿದೆ. ಇತರ ಪಕ್ಷಗಳಂತೆ, ಸುಳ್ಳುಗಳನ್ನು ಹೇಳಿಕೊಂಡು ಚುನಾವಣೆಯಲ್ಲಿ ಗೆಲ್ಲಲಾಗುವುದಿಲ್ಲ’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಚೆನ್ನಾಗಿ ತಯಾರಿ ನಡೆಯುತ್ತಿದೆ. ಮತಗಟ್ಟೆ ಸಮಿತಿ ರಚಿಸಿದ್ದೇವೆ. ಮೂವತ್ತು ಮತದಾರರಿಗೆ ಒಬ್ಬೊಬ್ಬ ಪ್ರಮುಖರನ್ನು ಜೋಡಿಸಲಾಗಿದೆ. ಪ್ರಚಾರ ಕಾರ್ಯ ವ್ಯಾಪಕವಾಗಿ ನಡೆಯುತ್ತಿದೆ. ಮತಗಟ್ಟೆ ಗೆದ್ದರೆ ಎಲ್ಲವನ್ನೂ ಗೆದ್ದಂತೆ ಎಂಬ ಪರಿಕಲ್ಪನೆಯಲ್ಲಿ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<p>ಘಟಕದ ಸಹ ವಕ್ತಾರ ಡಾ.ಕೆ.ವಸಂತಕುಮಾರ್ ಮಾತನಾಡಿ, ‘ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ನವರು ಪಕ್ಷದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಆ ಬಗ್ಗೆ ಹೇಳುವುದಕ್ಕೆ ಕುಮಾರಸ್ವಾಮಿ ಯಾರು? ಎಲ್ಲ ಸಮಾಜವನ್ನೂ ಸಮಾನವಾಗಿ ನೋಡುತ್ತಿರುವ ಪಕ್ಷ ನಮ್ಮದು. ನಮ್ಮ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ಇಂತಹ ಗಿಮಿಕ್ ರಾಜಕಾರಣವನ್ನು ಬಿಡಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮುಖಂಡ ಗಿರಿಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>