ಘಟಕದ ಸಹ ವಕ್ತಾರ ಡಾ.ಕೆ.ವಸಂತಕುಮಾರ್ ಮಾತನಾಡಿ, ‘ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ನವರು ಪಕ್ಷದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಆ ಬಗ್ಗೆ ಹೇಳುವುದಕ್ಕೆ ಕುಮಾರಸ್ವಾಮಿ ಯಾರು? ಎಲ್ಲ ಸಮಾಜವನ್ನೂ ಸಮಾನವಾಗಿ ನೋಡುತ್ತಿರುವ ಪಕ್ಷ ನಮ್ಮದು. ನಮ್ಮ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ. ಇಂತಹ ಗಿಮಿಕ್ ರಾಜಕಾರಣವನ್ನು ಬಿಡಬೇಕು’ ಎಂದು ಹೇಳಿದರು.