<p><strong>ಹುಣಸೂರು (ಮೈಸೂರು ಜಿಲ್ಲೆ):</strong> ‘ರಾಜ್ಯ ಸರ್ಕಾರ ವಿವಿಧ ಗ್ಯಾರಂಟಿ ಹೆಸರಿನಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸುವ ಭರದಲ್ಲಿ ಬಂಡವಾಳ ವೃದ್ಧಿಗೆ ಆದ್ಯತೆ ನೀಡದಿರುವುದು ಭವಿಷ್ಯದ ದೃಷ್ಟಿಯಿಂದ ಆಘಾತಕಾರಿಯಾಗಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಮಾದಹಳ್ಳಿಯ ಉಕ್ಕಿನ ಕಂತೆ ಮಠದಲ್ಲಿ ಶನಿವಾರ ಗುರುಬೂದಿಸ್ವಾಮಿಗಳ 397ನೇ ಆರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ, ವೇದಿಕೆಯಲ್ಲಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಉದ್ದೇಶಿಸಿ ಈ ಮಾತು ಹೇಳಿದರು.</p>.<p>‘ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ನೀಡುತ್ತಿರುವ ₹2 ಸಾವಿರ ಗೃಹಲಕ್ಷ್ಮಿ ಹಣದ ಬಗ್ಗೆ ನನ್ನ ತಕರಾರು ಇಲ್ಲ, ವಿರೋಧವೂ ಇಲ್ಲ. ಮೂರು ವರ್ಷಗಳಿಂದ ಯೋಜನೆಯ ಮೂಲಕ ₹70–75 ಸಾವಿರ ಕೋಟಿ ನೀಡಿರಬಹುದು. ಆದರೆ, ಹಣವನ್ನು ಎಲ್ಲಿಂದ ತರುತ್ತಿದ್ದೀರಿ’ ಎಂದು ಎಚ್ಡಿಕೆ ಪ್ರಶ್ನಿಸಿದರು.</p>.<p>‘ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸಾಲದ ಮೊತ್ತ ₹ 8.24 ಲಕ್ಷ ಕೋಟಿಯಾಗಿದೆ. ಮುಂದಿನ ದಿನದಲ್ಲಿ ₹9.50ಲಕ್ಷದಿಂದ ₹10 ಲಕ್ಷ ಕೋಟಿಗೆ ತಲುಪಲಿದೆ. ಇದಕ್ಕೆ ಸರಿಸಮನಾಗಿ ಬಂಡವಾಳ ಕ್ರೋಡೀಕರಣಕ್ಕೆ ಆದ್ಯತೆ ನೀಡದಿದ್ದರೆ ಭವಿಷ್ಯದ ದಿನಗಳನ್ನು ಗಂಭೀರವಾಗಿ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು. </p>.<p>‘ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ ಅನುಭವ ನನಗೆ ಇದ್ದು, ಸರ್ಕಾರ ಈಗಲೂ ಎಚ್ಚರಿಕೆಯಿಂದ ಹೆಜ್ಜೆ ಹಾಕಿ ಆರ್ಥಿಕ ಸ್ಥಿತಿಗತಿಯನ್ನು ತೂಗಬೇಕಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು (ಮೈಸೂರು ಜಿಲ್ಲೆ):</strong> ‘ರಾಜ್ಯ ಸರ್ಕಾರ ವಿವಿಧ ಗ್ಯಾರಂಟಿ ಹೆಸರಿನಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸುವ ಭರದಲ್ಲಿ ಬಂಡವಾಳ ವೃದ್ಧಿಗೆ ಆದ್ಯತೆ ನೀಡದಿರುವುದು ಭವಿಷ್ಯದ ದೃಷ್ಟಿಯಿಂದ ಆಘಾತಕಾರಿಯಾಗಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಮಾದಹಳ್ಳಿಯ ಉಕ್ಕಿನ ಕಂತೆ ಮಠದಲ್ಲಿ ಶನಿವಾರ ಗುರುಬೂದಿಸ್ವಾಮಿಗಳ 397ನೇ ಆರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ, ವೇದಿಕೆಯಲ್ಲಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಉದ್ದೇಶಿಸಿ ಈ ಮಾತು ಹೇಳಿದರು.</p>.<p>‘ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ನೀಡುತ್ತಿರುವ ₹2 ಸಾವಿರ ಗೃಹಲಕ್ಷ್ಮಿ ಹಣದ ಬಗ್ಗೆ ನನ್ನ ತಕರಾರು ಇಲ್ಲ, ವಿರೋಧವೂ ಇಲ್ಲ. ಮೂರು ವರ್ಷಗಳಿಂದ ಯೋಜನೆಯ ಮೂಲಕ ₹70–75 ಸಾವಿರ ಕೋಟಿ ನೀಡಿರಬಹುದು. ಆದರೆ, ಹಣವನ್ನು ಎಲ್ಲಿಂದ ತರುತ್ತಿದ್ದೀರಿ’ ಎಂದು ಎಚ್ಡಿಕೆ ಪ್ರಶ್ನಿಸಿದರು.</p>.<p>‘ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸಾಲದ ಮೊತ್ತ ₹ 8.24 ಲಕ್ಷ ಕೋಟಿಯಾಗಿದೆ. ಮುಂದಿನ ದಿನದಲ್ಲಿ ₹9.50ಲಕ್ಷದಿಂದ ₹10 ಲಕ್ಷ ಕೋಟಿಗೆ ತಲುಪಲಿದೆ. ಇದಕ್ಕೆ ಸರಿಸಮನಾಗಿ ಬಂಡವಾಳ ಕ್ರೋಡೀಕರಣಕ್ಕೆ ಆದ್ಯತೆ ನೀಡದಿದ್ದರೆ ಭವಿಷ್ಯದ ದಿನಗಳನ್ನು ಗಂಭೀರವಾಗಿ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು. </p>.<p>‘ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ ಅನುಭವ ನನಗೆ ಇದ್ದು, ಸರ್ಕಾರ ಈಗಲೂ ಎಚ್ಚರಿಕೆಯಿಂದ ಹೆಜ್ಜೆ ಹಾಕಿ ಆರ್ಥಿಕ ಸ್ಥಿತಿಗತಿಯನ್ನು ತೂಗಬೇಕಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>