<p><strong>ಕೆ.ಆರ್. ನಗರ (ಮೈಸೂರು ಜಿಲ್ಲೆ):</strong> ‘ಕೇಂದ್ರ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಅತ್ಯಂತ ದಕ್ಷತೆ ಮತ್ತು ಕ್ಷಮತೆಯಿಂದ ಕೆಲಸ ಮಾಡಬೇಕು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದರು.</p><p>ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್. ನಗರದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಆಶ್ರಯದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ತ್ರಿಚಕ್ರವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.</p><p>‘ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂಗವಿಕಲರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಅಂಗವಿಕಲರಿಗೆ ಅನುಕಂಪ ಅಗತ್ಯವಿಲ್ಲ. ಅವರನ್ನು ಸಬಲೀಕರಣ ಮಾಡುವ ಅಗತ್ಯ ಬಹಳಷ್ಟಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಈ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಫಲಾನುಭವಿಗೂ ಮುಟ್ಟಿಸಬೇಕಾದ ಕರ್ತವ್ಯ ಅಧಿಕಾರಿಗಳದ್ದು’ ಎಂದರು.</p><p>‘ಈಗಾಗಲೇ ಮಂಡ್ಯದಲ್ಲಿ ಅನೇಕ ಅಂಗವಿಕಲರಿಗೆ ಸೌಲಭ್ಯಗಳನ್ನು ವಿತರಿಸಲಾಗಿದೆ. ಸುಮಾರು ₹ 60 ಲಕ್ಷ ವೆಚ್ಚದಲ್ಲಿ 40 ಫಲಾನುಭವಿಗಳಿಗೆ ಬ್ಯಾಟರಿಚಾಲಿತ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ. ಹಾಗೆಯೇ ವಿವಿಧ ಸಿಎಸ್ಆರ್ ನಿಧಿಯ ನೆರವಿನಿಂದ 365 ಹೆಚ್ಚು ಅಂಗವಿಕಲರಿಗೆ ಬ್ಯಾಟರಿಚಾಲಿತ ತ್ರಿಚಕ್ರವಾಹನಗಳನ್ನು ನೀಡಲಾಗಿದೆ’ ಎಂದು ತಿಳಿಸಿದರು.</p><p>‘ಕೆ.ಆರ್. ನಗರವೂ ಒಳಗೊಂಡಂತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಪರ ಕೆಲಸಗಳನ್ನು ತೆಗೆದುಕೊಳ್ಳಲಾಗಿದೆ. ಸಿಎಸ್ಆರ್ ನಿಧಿ ಅನುದಾನ ಅಡಿಯಲ್ಲಿ ಅನೇಕ ಶಾಲೆಗಳಿಗೆ ನೂತನ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಬಗೆಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ’ ಎಂದರು.</p><p>ಕಾರ್ಯಕ್ರಮವನ್ನು ಕೃತಕ ಅಂಗಾಂಗ ತಯಾರಿಕಾ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಏರ್ಪಡಿಸಿತ್ತು.</p><p>ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್. ನಗರ (ಮೈಸೂರು ಜಿಲ್ಲೆ):</strong> ‘ಕೇಂದ್ರ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಅತ್ಯಂತ ದಕ್ಷತೆ ಮತ್ತು ಕ್ಷಮತೆಯಿಂದ ಕೆಲಸ ಮಾಡಬೇಕು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದರು.</p><p>ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್. ನಗರದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಆಶ್ರಯದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ತ್ರಿಚಕ್ರವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.</p><p>‘ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂಗವಿಕಲರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಅಂಗವಿಕಲರಿಗೆ ಅನುಕಂಪ ಅಗತ್ಯವಿಲ್ಲ. ಅವರನ್ನು ಸಬಲೀಕರಣ ಮಾಡುವ ಅಗತ್ಯ ಬಹಳಷ್ಟಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಈ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಫಲಾನುಭವಿಗೂ ಮುಟ್ಟಿಸಬೇಕಾದ ಕರ್ತವ್ಯ ಅಧಿಕಾರಿಗಳದ್ದು’ ಎಂದರು.</p><p>‘ಈಗಾಗಲೇ ಮಂಡ್ಯದಲ್ಲಿ ಅನೇಕ ಅಂಗವಿಕಲರಿಗೆ ಸೌಲಭ್ಯಗಳನ್ನು ವಿತರಿಸಲಾಗಿದೆ. ಸುಮಾರು ₹ 60 ಲಕ್ಷ ವೆಚ್ಚದಲ್ಲಿ 40 ಫಲಾನುಭವಿಗಳಿಗೆ ಬ್ಯಾಟರಿಚಾಲಿತ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ. ಹಾಗೆಯೇ ವಿವಿಧ ಸಿಎಸ್ಆರ್ ನಿಧಿಯ ನೆರವಿನಿಂದ 365 ಹೆಚ್ಚು ಅಂಗವಿಕಲರಿಗೆ ಬ್ಯಾಟರಿಚಾಲಿತ ತ್ರಿಚಕ್ರವಾಹನಗಳನ್ನು ನೀಡಲಾಗಿದೆ’ ಎಂದು ತಿಳಿಸಿದರು.</p><p>‘ಕೆ.ಆರ್. ನಗರವೂ ಒಳಗೊಂಡಂತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಪರ ಕೆಲಸಗಳನ್ನು ತೆಗೆದುಕೊಳ್ಳಲಾಗಿದೆ. ಸಿಎಸ್ಆರ್ ನಿಧಿ ಅನುದಾನ ಅಡಿಯಲ್ಲಿ ಅನೇಕ ಶಾಲೆಗಳಿಗೆ ನೂತನ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಬಗೆಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ’ ಎಂದರು.</p><p>ಕಾರ್ಯಕ್ರಮವನ್ನು ಕೃತಕ ಅಂಗಾಂಗ ತಯಾರಿಕಾ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಏರ್ಪಡಿಸಿತ್ತು.</p><p>ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>