ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ದೇವಯ್ಯನಹುಂಡಿ: ಮನೆ ಕುಸಿತ

Last Updated 20 ಅಕ್ಟೋಬರ್ 2022, 15:56 IST
ಅಕ್ಷರ ಗಾತ್ರ

ಮೈಸೂರು: ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ದೇವಯ್ಯನಹುಂಡಿಯಲ್ಲಿ ಚನ್ನಮ್ಮ ಎನ್ನುವವರ ಮನೆ ಕುಸಿದುಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಶಾಸಕ ಎಸ್.ಎ.ರಾಮದಾಸ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಕುಟುಂಬದವರಿಗೆ ಧೈರ್ಯ ತುಂಬಿದರು. ಸ್ಥಳಕ್ಕೆ ನಗರಪಾಲಿಕೆ ಅಧಿಕಾರಿಗಳನ್ನು ಕರೆಸಿ ಸಂಪೂರ್ಣ ಪರಿಶೀಲಿಸಿ ಕೂಡಲೇ ಪರಿಹಾರ ದೊರೆಯುವಂತಾಗಲು ಜಿಲ್ಲಾಧಿಕಾರಿ ಕಚೇರಿಗೆ ರವಾನಿಸುವಂತೆ ಸೂಚಿಸಿದರು.

ಸಂತ್ರಸ್ತರಿಗೆ ಹೊಸದಾಗಿ ಮನೆಯನ್ನು ನಿರ್ಮಿಸಿಕೊಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನಗರಪಾಲಿಕೆ ಸದಸ್ಯೆ ಗೀತಾಶ್ರೀ ಯೋಗನಂದ, ಮುಖಂಡರಾದ ಕೆಂಪಣ್ಣ, ಗಿರೀಶ್, ಸತೀಶ್, ಭರತ್, ಸಾಗರ್, ಮಂಜು, ಸಿದ್ದರಾಜು ಮತ್ತು ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT