<p><strong>ಮೈಸೂರು/ಮಂಗಳೂರು</strong>: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ವಿವಿಧೆಡೆ ಭಾನುವಾರ ರಾತ್ರಿ ರಾಜ್ಯದಲ್ಲೇ ಅತ್ಯಧಿಕ ಮಳೆ ಪ್ರಮಾಣ ದಾಖಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಕೆಲವೆಡೆಯೂ ಮಳೆಯಾಗಿದೆ. </p>.<p>ಕೊಡಗು ಜಿಲ್ಲೆಯ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಮೈಸೂರು, ಹುಣಸೂರು, ತಿ. ನರಸೀಪುರ ತಾಲ್ಲೂಕುಗಳಲ್ಲೂ ವರುಣ ಆರ್ಭಟಿಸಿದ್ದು, ಸೋಮವಾರ ಮಧ್ಯಾಹ್ನವೂ ಉತ್ತಮ ಮಳೆ ಸುರಿಯಿತು. ಹಳ್ಳಗಳು ತುಂಬಿ ಹರಿದಿದ್ದು, ಕೆರೆ–ಕಟ್ಟೆಗಳಲ್ಲಿ ನೀರಿನ ಸಂಗ್ರಹವಾಗತೊಡಗಿದೆ. ಕೆಲವೆಡೆ ಹೊಲಗಳಲ್ಲಿ ನೀರು ನಿಂತಿದೆ.</p>.<p>ಚಾಮರಾಜನಗರ ಜಿಲ್ಲೆಯಾದ್ಯಂತ ಇಡೀ ದಿನ ಬಿರುಸಿನ ಮಳೆಯಾಗಿದೆ. ಕೊಳ್ಳೇಗಾಲ ನಗರ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ, ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಗೇಟ್ ಪ್ರದೇಶದ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದಿದೆ.</p>.<p>ಹಾಸನ ಜಿಲ್ಲೆಯ ಹಾಸನ, ಹೊಳೆನರಸೀಪುರ ಅರಕಲಗೂಡು, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಸುತ್ತಲಿನ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಮಳೆ ಸುರಿಯಿತು. </p>.<p>ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಪೆರಾಜೆ ವ್ಯಾಪ್ತಿಯಲ್ಲೂ ಧಾರಾಕಾರ ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಸೋಮವಾರಪೇಟೆಯಲ್ಲೂ ಉತ್ತಮ ಮಳೆಯಾಗಿದೆ.</p>.<p>ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕಿನ ಶಿವನಿ ಹೋಬಳಿ ಧಾರಾಕಾರ ಮಳೆ ಸುರಿದಿದೆ. ಹಳ್ಳ–ಕೊಳ್ಳಗಳು ತುಂಬಿ ಹರಿದಿವೆ. ಒಣಗಲಾರಂಭಿಸಿದ್ದ ಅಡಿಕೆ ತೋಟಗಳಿಗೆ ಮಳೆನೀರು ಜೀವಕಳೆ ತಂದಿದೆ. ಚಿಕ್ಕಮಗಳೂರು, ಚೌಳಹಿರಿಯೂರು, ಅಮೃತಾಪುರ, ಹಿರೇನಲ್ಲೂರು, ಪಂಚನಹಳ್ಳಿ ಸುತ್ತಮುತ್ತ ಜೋರು ಮಳೆಯಾಗಿದೆ.</p>.<p><strong>ಹೊಸಪೇಟೆ/ ಬಳ್ಳಾರಿ ವರದಿ:</strong> ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆ ಕೆಲವೆಡೆ ಭಾನುವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಹೋಬಳಿಯ ಹೊಸಹಳ್ಳಿ ಸೇತುವೆಯ ಒಂದು ಬದಿ ಭಾಗಶಃ ಕುಸಿದಿದೆ. </p>.<p><strong>ತುಮಕೂರು ವರದಿ</strong>: ಜಿಲ್ಲೆಯಲ್ಲಿ ಸೋಮವಾರ ಸಹ ನಗರದಲ್ಲಿ ಒಂದು ತಾಸಿಗೂ ಹೆಚ್ಚು ಮಳೆ ಸುರಿಯಿತು. </p>.<p>ನಗರದಲ್ಲಿ ಸಂಜೆ 4 ಗಂಟೆಗೆ ಆರಂಭವಾದ ಮಳೆ ಒಂದು ತಾಸು ಸುರಿಯಿತು. ನಂತರ ಜಿಟಿಜಿಟಿ ಮಳೆ ಮುಂದುವರಿದಿತ್ತು. </p>.<p>ಶಿರಾ ನಗರದಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆಯಾಗಿದ್ದು 18ನೇ ವಾರ್ಡ್ನ ಬೇಗಂ ಮೊಹಲ್ಲಾದಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. </p>.<p><strong>ಬಿತ್ತನೆಗೆ ಅಡ್ಡಿ</strong>: ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಬೀಳುತ್ತಿರುವ ಕಾರಣ ಕೆಲ ಭಾಗಗಳಲ್ಲಿನ ತೋಟ, ಹೊಲ ಮತ್ತು ಕಟ್ಟೆಗಳಲ್ಲಿ ನೀರು ಸಂಗ್ರಹವಾಗಿದೆ. ರೈತರು ಹೆಜ್ಜೆ ಇಡದಷ್ಟು ಕೆಸರು ಗದ್ದೆಗಳಾಗಿ ಮಾರ್ಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು/ಮಂಗಳೂರು</strong>: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ವಿವಿಧೆಡೆ ಭಾನುವಾರ ರಾತ್ರಿ ರಾಜ್ಯದಲ್ಲೇ ಅತ್ಯಧಿಕ ಮಳೆ ಪ್ರಮಾಣ ದಾಖಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಕೆಲವೆಡೆಯೂ ಮಳೆಯಾಗಿದೆ. </p>.<p>ಕೊಡಗು ಜಿಲ್ಲೆಯ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಮೈಸೂರು, ಹುಣಸೂರು, ತಿ. ನರಸೀಪುರ ತಾಲ್ಲೂಕುಗಳಲ್ಲೂ ವರುಣ ಆರ್ಭಟಿಸಿದ್ದು, ಸೋಮವಾರ ಮಧ್ಯಾಹ್ನವೂ ಉತ್ತಮ ಮಳೆ ಸುರಿಯಿತು. ಹಳ್ಳಗಳು ತುಂಬಿ ಹರಿದಿದ್ದು, ಕೆರೆ–ಕಟ್ಟೆಗಳಲ್ಲಿ ನೀರಿನ ಸಂಗ್ರಹವಾಗತೊಡಗಿದೆ. ಕೆಲವೆಡೆ ಹೊಲಗಳಲ್ಲಿ ನೀರು ನಿಂತಿದೆ.</p>.<p>ಚಾಮರಾಜನಗರ ಜಿಲ್ಲೆಯಾದ್ಯಂತ ಇಡೀ ದಿನ ಬಿರುಸಿನ ಮಳೆಯಾಗಿದೆ. ಕೊಳ್ಳೇಗಾಲ ನಗರ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ, ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಗೇಟ್ ಪ್ರದೇಶದ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದಿದೆ.</p>.<p>ಹಾಸನ ಜಿಲ್ಲೆಯ ಹಾಸನ, ಹೊಳೆನರಸೀಪುರ ಅರಕಲಗೂಡು, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಸುತ್ತಲಿನ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಮಳೆ ಸುರಿಯಿತು. </p>.<p>ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಪೆರಾಜೆ ವ್ಯಾಪ್ತಿಯಲ್ಲೂ ಧಾರಾಕಾರ ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಸೋಮವಾರಪೇಟೆಯಲ್ಲೂ ಉತ್ತಮ ಮಳೆಯಾಗಿದೆ.</p>.<p>ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕಿನ ಶಿವನಿ ಹೋಬಳಿ ಧಾರಾಕಾರ ಮಳೆ ಸುರಿದಿದೆ. ಹಳ್ಳ–ಕೊಳ್ಳಗಳು ತುಂಬಿ ಹರಿದಿವೆ. ಒಣಗಲಾರಂಭಿಸಿದ್ದ ಅಡಿಕೆ ತೋಟಗಳಿಗೆ ಮಳೆನೀರು ಜೀವಕಳೆ ತಂದಿದೆ. ಚಿಕ್ಕಮಗಳೂರು, ಚೌಳಹಿರಿಯೂರು, ಅಮೃತಾಪುರ, ಹಿರೇನಲ್ಲೂರು, ಪಂಚನಹಳ್ಳಿ ಸುತ್ತಮುತ್ತ ಜೋರು ಮಳೆಯಾಗಿದೆ.</p>.<p><strong>ಹೊಸಪೇಟೆ/ ಬಳ್ಳಾರಿ ವರದಿ:</strong> ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆ ಕೆಲವೆಡೆ ಭಾನುವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಹೋಬಳಿಯ ಹೊಸಹಳ್ಳಿ ಸೇತುವೆಯ ಒಂದು ಬದಿ ಭಾಗಶಃ ಕುಸಿದಿದೆ. </p>.<p><strong>ತುಮಕೂರು ವರದಿ</strong>: ಜಿಲ್ಲೆಯಲ್ಲಿ ಸೋಮವಾರ ಸಹ ನಗರದಲ್ಲಿ ಒಂದು ತಾಸಿಗೂ ಹೆಚ್ಚು ಮಳೆ ಸುರಿಯಿತು. </p>.<p>ನಗರದಲ್ಲಿ ಸಂಜೆ 4 ಗಂಟೆಗೆ ಆರಂಭವಾದ ಮಳೆ ಒಂದು ತಾಸು ಸುರಿಯಿತು. ನಂತರ ಜಿಟಿಜಿಟಿ ಮಳೆ ಮುಂದುವರಿದಿತ್ತು. </p>.<p>ಶಿರಾ ನಗರದಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆಯಾಗಿದ್ದು 18ನೇ ವಾರ್ಡ್ನ ಬೇಗಂ ಮೊಹಲ್ಲಾದಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. </p>.<p><strong>ಬಿತ್ತನೆಗೆ ಅಡ್ಡಿ</strong>: ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಬೀಳುತ್ತಿರುವ ಕಾರಣ ಕೆಲ ಭಾಗಗಳಲ್ಲಿನ ತೋಟ, ಹೊಲ ಮತ್ತು ಕಟ್ಟೆಗಳಲ್ಲಿ ನೀರು ಸಂಗ್ರಹವಾಗಿದೆ. ರೈತರು ಹೆಜ್ಜೆ ಇಡದಷ್ಟು ಕೆಸರು ಗದ್ದೆಗಳಾಗಿ ಮಾರ್ಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>