ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು, 'ಒಟ್ಟು ಮೂರು ಕಡೆ ಕುಸಿತ ಉಂಟಾಗಿದೆ. ರಸ್ತೆಯಲ್ಲಿ ನಡೆದಾಡುವುದು ಅಪಾಯಕಾರಿ ಎನಿಸಿದೆ. ಈಚೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಪರಿಶೀಲನೆ ನಡೆಸಿದಾಗ ಈಗ ಕುಸಿದಿರುವ ಜಾಗದಲ್ಲಿ ಬಿರುಕುಗಳು ಇರಲಿಲ್ಲ. ಮಳೆ ಮುಂದುವರಿದರೆ ಮತ್ತಷ್ಟು ಕುಸಿಯುವ ಸಾಧ್ಯತೆಗಳಿವೆ' ಎಂದರು.