<p><strong>ಮೈಸೂರು</strong>: ‘ದಾಖಲೆಗಳು ಇತಿಹಾಸದ ಮೂಲಾಧಾರವಾಗಿದ್ದು, ಅವುಗಳ ಮಹತ್ವ ಅರಿಯುವ ಜೊತೆಗೆ ಸಂರಕ್ಷಣೆಯ ಹೊಣೆಯೂ ನಮ್ಮೆಲ್ಲರದಾಗಿದೆ’ ಎಂದು ರಾಜ್ಯ ಪತ್ರಾಗಾರ ಇಲಾಖೆ ಮೈಸೂರು ವಿಭಾಗೀಯ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಎಚ್.ಎಲ್. ತಿಳಿಸಿದರು.</p>.<p>ನಗರದ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ರಾಜ್ಯ ಪತ್ರಾಗಾರ ಇಲಾಖೆ ಮೈಸೂರಿನ ವಿಭಾಗೀಯ ಪತ್ರಾಗಾರ ಕಚೇರಿ ಸಹಯೋಗದಲ್ಲಿ ಅಂತರರಾಷ್ಟ್ರೀಯ ಪತ್ರಾಗಾರ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ‘ದಾಖಲೆಗಳ ಮಹತ್ವ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಾಖಲೆಗಳನ್ನು ಮುಂದಿನ ಪೀಳಿಗೆಯವರಿಗೂ ತಲುಪಿಸುವ ನಿಟ್ಟಿನಲ್ಲಿ ಪತ್ರಾಗಾರ ಇಲಾಖೆಯು ಹಲವು ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ’ ಎಂದರು.</p>.<p>‘ಪತ್ರಾಗಾರ ಇಲಾಖೆಯು ಇದುವರೆಗೂ ಒಟ್ಟು 1.20 ಕೋಟಿ ಪುಟಗಳ ದಾಖಲೆಗಳನ್ನು ಗಣಕೀಕರಣ ಮೂಲಕ ಜಾಲತಾಣದಲ್ಲಿ ಅಳವಡಿಸಿದೆ. ಈ ದಾಖಲೆಗಳನ್ನು ಅಧ್ಯಾಪಕರು, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಜನಸಾಮಾನ್ಯರು ಸಹ ವೀಕ್ಷಿಸಬಹುದು’ ಎಂದು ಮಾಹಿತಿ ನೀಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ, ‘ದಾಖಲೆಗಳನ್ನು ಸಂರಕ್ಷಿಸುತ್ತಿರುವ ರಾಜ್ಯ ಪತ್ರಾಗಾರ ಇಲಾಖೆಯ ಪಾತ್ರ ಗಣನೀಯವಾದುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಂ. ಪ್ರಭು ಮಾತನಾಡಿ, ‘ವಿದ್ಯಾರ್ಥಿ ದೆಸೆಯಿಂದಲೇ ಅಧಿಕೃತ ದಾಖಲೆಗಳ ಸಂಗ್ರಹ ಮಾಡುವ ಮತ್ತು ಅವುಗಳನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಇತಿಹಾಸ ವಿಭಾಗದ ಮುಖ್ಯಸ್ಥ ಎ.ಜಿ. ಧರ್ಮೇಶ್, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಆರ್. ಸುಜಾತಾಕುಮಾರಿ, ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುವರ್ಣ ಕಂಬಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ದಾಖಲೆಗಳು ಇತಿಹಾಸದ ಮೂಲಾಧಾರವಾಗಿದ್ದು, ಅವುಗಳ ಮಹತ್ವ ಅರಿಯುವ ಜೊತೆಗೆ ಸಂರಕ್ಷಣೆಯ ಹೊಣೆಯೂ ನಮ್ಮೆಲ್ಲರದಾಗಿದೆ’ ಎಂದು ರಾಜ್ಯ ಪತ್ರಾಗಾರ ಇಲಾಖೆ ಮೈಸೂರು ವಿಭಾಗೀಯ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಎಚ್.ಎಲ್. ತಿಳಿಸಿದರು.</p>.<p>ನಗರದ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ರಾಜ್ಯ ಪತ್ರಾಗಾರ ಇಲಾಖೆ ಮೈಸೂರಿನ ವಿಭಾಗೀಯ ಪತ್ರಾಗಾರ ಕಚೇರಿ ಸಹಯೋಗದಲ್ಲಿ ಅಂತರರಾಷ್ಟ್ರೀಯ ಪತ್ರಾಗಾರ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ‘ದಾಖಲೆಗಳ ಮಹತ್ವ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಾಖಲೆಗಳನ್ನು ಮುಂದಿನ ಪೀಳಿಗೆಯವರಿಗೂ ತಲುಪಿಸುವ ನಿಟ್ಟಿನಲ್ಲಿ ಪತ್ರಾಗಾರ ಇಲಾಖೆಯು ಹಲವು ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ’ ಎಂದರು.</p>.<p>‘ಪತ್ರಾಗಾರ ಇಲಾಖೆಯು ಇದುವರೆಗೂ ಒಟ್ಟು 1.20 ಕೋಟಿ ಪುಟಗಳ ದಾಖಲೆಗಳನ್ನು ಗಣಕೀಕರಣ ಮೂಲಕ ಜಾಲತಾಣದಲ್ಲಿ ಅಳವಡಿಸಿದೆ. ಈ ದಾಖಲೆಗಳನ್ನು ಅಧ್ಯಾಪಕರು, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಜನಸಾಮಾನ್ಯರು ಸಹ ವೀಕ್ಷಿಸಬಹುದು’ ಎಂದು ಮಾಹಿತಿ ನೀಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ, ‘ದಾಖಲೆಗಳನ್ನು ಸಂರಕ್ಷಿಸುತ್ತಿರುವ ರಾಜ್ಯ ಪತ್ರಾಗಾರ ಇಲಾಖೆಯ ಪಾತ್ರ ಗಣನೀಯವಾದುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಂ. ಪ್ರಭು ಮಾತನಾಡಿ, ‘ವಿದ್ಯಾರ್ಥಿ ದೆಸೆಯಿಂದಲೇ ಅಧಿಕೃತ ದಾಖಲೆಗಳ ಸಂಗ್ರಹ ಮಾಡುವ ಮತ್ತು ಅವುಗಳನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಇತಿಹಾಸ ವಿಭಾಗದ ಮುಖ್ಯಸ್ಥ ಎ.ಜಿ. ಧರ್ಮೇಶ್, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಆರ್. ಸುಜಾತಾಕುಮಾರಿ, ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುವರ್ಣ ಕಂಬಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>