‘ಪ್ರಧಾನಿ ಅವರಿಗೆ ವಿರೋಧ ಪಕ್ಷಗಳ ಮೇಲೆ ದ್ವೇಷ ಕಾರುವುದು ಬಿಟ್ಟು ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಹಾಗೂ ಅಡುಗೆ ಸಿಲಿಂಡರ್ ಬೆಲೆ ತಗ್ಗಿಸಿ ಜವಾಬ್ದಾರಿ ಪ್ರದರ್ಶಿಸಲಿ. ರಾಹುಲ್ ಗಾಂಧಿ ಅವರನ್ನು ನೇರವಾಗಿ ಎದುರಿಸಲು ಸಾಧ್ಯವಿಲ್ಲದೇ ಚಿಲ್ಲರೆ ರಾಜಕಾರಣ ಮಾಡಿದರೆ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.