<p><strong>ಮೈಸೂರು:</strong> ಮರ್ಯಾದೆಗೇಡು ಹತ್ಯೆಗೆ ಕಠಿಣ ಕಾಯ್ದೆ ರೂಪಿಸಲು ಆಗ್ರಹಿಸಿ ಸಂಶೋಧಕರ ಸಂಘದ ಸದಸ್ಯರು ಮಾನಸಗಂಗೋತ್ರಿಯ ಮುಖ್ಯಗ್ರಂಥಾಲಯದ ಎದುರು ಶನಿವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.</p>.<p>ಸಂಘದ ಅಧ್ಯಕ್ಷ ವರಹಳ್ಳಿ ಆನಂದ ಮಾತನಾಡಿ, ‘ಮರ್ಯಾದೆಯ ಹೆಸರಿನಲ್ಲಿ ಪ್ರತಿವರ್ಷ ಪ್ರಪಂಚದಲ್ಲಿ ಸುಮಾರು 5 ಸಾವಿರಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆ ನಡೆಯುತ್ತಿವೆ ಎಂಬುದಾಗಿ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ (ಯುಎನ್ಎಫ್ಪಿಐ) ತನ್ನ ವರದಿಯಲ್ಲಿ ಹೇಳಿದೆ. ಈಚೆಗೆ ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಗರ್ಭಿಣಿಯನ್ನು ತಂದೆಯೇ ಹತ್ಯೆ ಮಾಡಿದ್ದು ಅಮಾನವೀಯ’ ಎಂದರು.</p>.<p>‘ಜಾತಿ ಕಾರಣಕ್ಕಾಗಿ ಸಮಾಜ ಸಂವೇದನೆ ಕಳೆದುಕೊಂಡಿದೆ. ಇದು ಹೀಗೆಯೇ ಮುಂದುವರಿದರೆ, ಜಾತಿ ಇನ್ನಷ್ಟು, ಕಠಿಣಗೊಂಡು ಸಮಾಜವನ್ನು ಹಾಳುಗೆಡವುತ್ತದೆ. ಕೊಲೆ, ಶೋಷಣೆ ಹೆಚ್ಚಾಗುತ್ತದೆ. ರಾಜ್ಯ ಸರ್ಕಾರ ಮರ್ಯಾದೆಗೇಡು ಹತ್ಯೆಗೂ ಕಾನೂನು ರಚಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಿಂಡಿಕೇಟ್ ಸದಸ್ಯ ನಟರಾಜ್ ಶಿವಣ್ಣ, ಸಂಶೋಧಕರ ಸಂಘದ ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮರ್ಯಾದೆಗೇಡು ಹತ್ಯೆಗೆ ಕಠಿಣ ಕಾಯ್ದೆ ರೂಪಿಸಲು ಆಗ್ರಹಿಸಿ ಸಂಶೋಧಕರ ಸಂಘದ ಸದಸ್ಯರು ಮಾನಸಗಂಗೋತ್ರಿಯ ಮುಖ್ಯಗ್ರಂಥಾಲಯದ ಎದುರು ಶನಿವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.</p>.<p>ಸಂಘದ ಅಧ್ಯಕ್ಷ ವರಹಳ್ಳಿ ಆನಂದ ಮಾತನಾಡಿ, ‘ಮರ್ಯಾದೆಯ ಹೆಸರಿನಲ್ಲಿ ಪ್ರತಿವರ್ಷ ಪ್ರಪಂಚದಲ್ಲಿ ಸುಮಾರು 5 ಸಾವಿರಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆ ನಡೆಯುತ್ತಿವೆ ಎಂಬುದಾಗಿ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ (ಯುಎನ್ಎಫ್ಪಿಐ) ತನ್ನ ವರದಿಯಲ್ಲಿ ಹೇಳಿದೆ. ಈಚೆಗೆ ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಗರ್ಭಿಣಿಯನ್ನು ತಂದೆಯೇ ಹತ್ಯೆ ಮಾಡಿದ್ದು ಅಮಾನವೀಯ’ ಎಂದರು.</p>.<p>‘ಜಾತಿ ಕಾರಣಕ್ಕಾಗಿ ಸಮಾಜ ಸಂವೇದನೆ ಕಳೆದುಕೊಂಡಿದೆ. ಇದು ಹೀಗೆಯೇ ಮುಂದುವರಿದರೆ, ಜಾತಿ ಇನ್ನಷ್ಟು, ಕಠಿಣಗೊಂಡು ಸಮಾಜವನ್ನು ಹಾಳುಗೆಡವುತ್ತದೆ. ಕೊಲೆ, ಶೋಷಣೆ ಹೆಚ್ಚಾಗುತ್ತದೆ. ರಾಜ್ಯ ಸರ್ಕಾರ ಮರ್ಯಾದೆಗೇಡು ಹತ್ಯೆಗೂ ಕಾನೂನು ರಚಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಿಂಡಿಕೇಟ್ ಸದಸ್ಯ ನಟರಾಜ್ ಶಿವಣ್ಣ, ಸಂಶೋಧಕರ ಸಂಘದ ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>