<p><strong>ಹುಣಸೂರು</strong>: ‘ಚುಂಚನಕಟ್ಟೆ ಗ್ರಾಮದಲ್ಲಿ ವಾಸಿಸುತ್ತಿರುವ 59 ನಿರ್ಗತಿಕ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡುವಂತೆ ಹಲವು ವರ್ಷದಿಂದ ಕಂದಾಯ ಇಲಾಖೆಗೆ ಮನವಿ ಮಾಡಿದ್ದರೂ ಸಬೂಬು ಹೇಳಿ ನಿವೇಶನ ಮಂಜೂರು ಮಾಡದೆ ಮುಂದೂಡುತ್ತಿದ್ದಾರೆ’ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಮುಖಂಡ ನಿಂಗರಾಜ್ ಮಲ್ಲಾಡಿ ದೂರಿದರು.</p>.<p>ನಗರದ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಅವರಿಗೆ ಈ ಬಗ್ಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ‘30 ವರ್ಷದಿಂದ ಗ್ರಾಮದ ಕುಪ್ಪೆ ಸರ್ವೆ ನಂ. 69ರಲ್ಲಿ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವ ಈ ಕುಟುಂಬಗಳಿಗೆ 64 ಸಿಸಿ ಯೋಜನೆ ಅಡಿಯಲ್ಲಿ ನಿವೇಶನದ ಹಕ್ಕು ಪತ್ರ ನೀಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ನೀಡುತ್ತಿದ್ದೇವೆ. ಜಿಲ್ಲಾ ಮತ್ತು ಉಪವಿಭಾಗ ಮಟ್ಟದ ಎಸ್ಸಿ, ಎಸ್ಟಿ ಸಭೆಯಲ್ಲೂ ಪ್ರಸ್ತಾಪಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದರು.</p>.<p>‘ಕೆಲವು ರಾಜಕಾರಣಿ ಹಾಗೂ ಜಾತಿ ಮನಸ್ಥಿತಿಯುಳ್ಳವರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಈ ಸಮುದಾಯದವರ ಕುರಿತು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಈ ನಡವಳಿಕೆಯನ್ನು ಸಮಿತಿಯು ತೀವ್ರವಾಗಿ ಖಂಡಿಸುತ್ತದೆ’ ಎಂದರು.</p>.<p>‘ಈ ಬಗ್ಗೆ ಸಂಬಂಧಿಸಿದಂತೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವೀಯ ನೆಲಗಟ್ಟಿನಲ್ಲಿ ಅಧಿಕಾರಿಗಳು ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದ್ದರೂ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ’ ಎಂದು ದೂರಿದರು.</p>.<p>ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಕಾವ್ಯಾ ರಾಣಿ ಮಾತನಾಡಿ, ಮನವಿ ಸಂಬಂಧ ಸಾಲಿಗ್ರಾಮ ತಹಶೀಲ್ದಾರ್ ಅವರೊಂದಿಗೆ ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿ ಗಮನಕ್ಕೆ ತಂದು ಕಾನೂನು ಚೌಕಟ್ಟಿನಲ್ಲಿ ಕ್ರಮವಹಿಸುವುದಾಗಿ ತಿಳಿಸಿದರು.</p>.<p>ದಸಂಸ ಮುಖಂಡ ಬಲ್ಲೇನಹಳ್ಳಿ ಕೆಂಪರಾಜ್, ಗಜೇಂದ್ರ, ನಿವೇಶನದ ಅರ್ಜಿದಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ಚುಂಚನಕಟ್ಟೆ ಗ್ರಾಮದಲ್ಲಿ ವಾಸಿಸುತ್ತಿರುವ 59 ನಿರ್ಗತಿಕ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡುವಂತೆ ಹಲವು ವರ್ಷದಿಂದ ಕಂದಾಯ ಇಲಾಖೆಗೆ ಮನವಿ ಮಾಡಿದ್ದರೂ ಸಬೂಬು ಹೇಳಿ ನಿವೇಶನ ಮಂಜೂರು ಮಾಡದೆ ಮುಂದೂಡುತ್ತಿದ್ದಾರೆ’ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಮುಖಂಡ ನಿಂಗರಾಜ್ ಮಲ್ಲಾಡಿ ದೂರಿದರು.</p>.<p>ನಗರದ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಅವರಿಗೆ ಈ ಬಗ್ಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ‘30 ವರ್ಷದಿಂದ ಗ್ರಾಮದ ಕುಪ್ಪೆ ಸರ್ವೆ ನಂ. 69ರಲ್ಲಿ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವ ಈ ಕುಟುಂಬಗಳಿಗೆ 64 ಸಿಸಿ ಯೋಜನೆ ಅಡಿಯಲ್ಲಿ ನಿವೇಶನದ ಹಕ್ಕು ಪತ್ರ ನೀಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ನೀಡುತ್ತಿದ್ದೇವೆ. ಜಿಲ್ಲಾ ಮತ್ತು ಉಪವಿಭಾಗ ಮಟ್ಟದ ಎಸ್ಸಿ, ಎಸ್ಟಿ ಸಭೆಯಲ್ಲೂ ಪ್ರಸ್ತಾಪಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದರು.</p>.<p>‘ಕೆಲವು ರಾಜಕಾರಣಿ ಹಾಗೂ ಜಾತಿ ಮನಸ್ಥಿತಿಯುಳ್ಳವರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಈ ಸಮುದಾಯದವರ ಕುರಿತು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಈ ನಡವಳಿಕೆಯನ್ನು ಸಮಿತಿಯು ತೀವ್ರವಾಗಿ ಖಂಡಿಸುತ್ತದೆ’ ಎಂದರು.</p>.<p>‘ಈ ಬಗ್ಗೆ ಸಂಬಂಧಿಸಿದಂತೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವೀಯ ನೆಲಗಟ್ಟಿನಲ್ಲಿ ಅಧಿಕಾರಿಗಳು ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದ್ದರೂ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ’ ಎಂದು ದೂರಿದರು.</p>.<p>ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಕಾವ್ಯಾ ರಾಣಿ ಮಾತನಾಡಿ, ಮನವಿ ಸಂಬಂಧ ಸಾಲಿಗ್ರಾಮ ತಹಶೀಲ್ದಾರ್ ಅವರೊಂದಿಗೆ ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿ ಗಮನಕ್ಕೆ ತಂದು ಕಾನೂನು ಚೌಕಟ್ಟಿನಲ್ಲಿ ಕ್ರಮವಹಿಸುವುದಾಗಿ ತಿಳಿಸಿದರು.</p>.<p>ದಸಂಸ ಮುಖಂಡ ಬಲ್ಲೇನಹಳ್ಳಿ ಕೆಂಪರಾಜ್, ಗಜೇಂದ್ರ, ನಿವೇಶನದ ಅರ್ಜಿದಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>