1968ರಲ್ಲಿ ನಿರ್ಮಾಣಗೊಂಡಿದ್ದ ಸೇತುವೆ ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಗೊಂಡಿತ್ತು. ಸೇತುವೆ ಹಳ್ಳ ಕೊಳ್ಳಗಳಿಂದ ಕೂಡಿದ್ದು, ಸೇತುವೆಗೆ ಬಳಸಿದ್ದ ಕಬ್ಬಿಣದ ಎದ್ದು ಕಾಣುತ್ತಿದ್ದವು. ವಾಹನ ಸವಾರರು ಸೇತುವೆ ಮೇಲೆ ಸಂಚರಿಸಲು ತೊಂದರೆ ಉಂಟಾಗಿತ್ತು. ಸಂಘ–ಸಂಸ್ಥೆಗಳು ಸೇತುವೆ ದುರಸ್ತಿ ಕಾರ್ಯ ನಡೆಸುವಂತೆ ಪ್ರತಿಭಟನೆ ನಡೆಸಿದ್ದವು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಮೂರು ತಿಂಗಳ ಕಾಲ ಸೇತುವೆ ಮೇಲೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ನಡೆಸಿದ್ದರು ಎಂದು ಆರ್ಟಿಐ ಕಾರ್ಯಕರ್ತ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ.