<p><strong>ಮೈಸೂರು:</strong> ‘ಮಾನವ ಕಳ್ಳ ಸಾಗಾಣಿಕೆಗೆ ದುರ್ಬಲ ವರ್ಗಗಳು ಗುರಿಯಾಗುತ್ತಿದ್ದು, ಇದನ್ನು ತಡೆಯುವುದು ಪೊಲೀಸರ ಕರ್ತವ್ಯ’ ಎಂದು ಪೊಲೀಸ್ ಅಕಾಡೆಮಿ ನಿರ್ದೇಶಕ ಎಸ್.ಎಲ್.ಚನ್ನಬಸವಣ್ಣ ತಿಳಿಸಿದರು.</p>.<p>ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ವಿಹಾನ್ ಸಂಸ್ಥೆ ಬೆಂಗಳೂರು ಅಕಾಡೆಮಿ ಆವರಣದಲ್ಲಿ ‘ಮಾನವ ಕಳ್ಳಸಾಗಾಣೆ ವಿರೋಧಿ ಹಾಗೂ ನಿರ್ಮೂಲನೆಯಲ್ಲಿ ಪೋಲೀಸರ ಪಾತ್ರ’ ವಿಷಯದ ಕುರಿತು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿರುವ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಮಾನವ ಕಳ್ಳಸಾಗಾಣಿಕೆ ವಿಷಯವು ಗಂಭೀರವಾದ ಸಂಕೀರ್ಣ ಜಾಗತಿಕ ಸಮಸ್ಯೆಯಾಗಿ ಬೆಳೆದಿದೆ. ಬದಲಾದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಇದು ತನ್ನ ವ್ಯಾಪ್ತಿಯನ್ನು ವ್ಯಾಪಕವಾಗಿ ವಿಸ್ತರಿಸಿದೆ. ಇದನ್ನು ತಡೆಯಲು ಹಲವು ಕಾನೂನುಗಳಿದ್ದು, ಪೊಲೀಸ್ ವ್ಯವಸ್ಥೆ, ಸರ್ಕಾರದ ಸಂಸ್ಥೆಗಳು ಹಾಗೂ ಇತರೆ ಸಂಘ-ಸಂಸ್ಥೆಗಳು ಪರಿಣಾಮಕಾರಿಯಾಗಿ ಶ್ರಮಿಸುತ್ತಿದ್ದರೂ, ಹೊಸ ಮಾರ್ಗಗಳು ಹಾಗೂ ತಂತ್ರಜ್ಞಾನದ ಮೂಲಕ ಮಾನವ ಕಳ್ಳಸಾಗಾಣಿಕೆ ಚಟುವಟಿಕೆಯಲ್ಲಿ ಪಾತಕಿಗಳು ತೊಡಗುತ್ತಿದ್ದು ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ’ ಎಂದರು.</p>.<p>‘ಪೊಲೀಸ್ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸರ್ಕಾರಿ ಸಂಘ ಸಂಸ್ಥೆಗಳು ಹಾಗೂ ಸರ್ಕಾರೇತರ ವಿವಿಧ ಸಂಘ ಸಂಸ್ಥೆಗಳೊಡನೆ ಸಮನ್ವಯತೆ ಸಾಧಿಸಿ ಮಾನವ ಕಳ್ಳಸಾಗಾಣಿಕೆ ತಡೆಯವಲ್ಲಿ ಶ್ರಮಿಸಬೇಕು’ ಎಂದರು.</p>.<p>ಕಾರ್ಯಾಗಾರದ ಸಂಯೋಜಕ ಎಸ್. ವೆಂಕಟೇಶ್, ವಿಹಾನ್ ಸಂಸ್ಥೆಯ ರೋವಿನ ಬಾಸ್ಟಿನ್, ಅಂಬರೀಷ್ ಜೈರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮಾನವ ಕಳ್ಳ ಸಾಗಾಣಿಕೆಗೆ ದುರ್ಬಲ ವರ್ಗಗಳು ಗುರಿಯಾಗುತ್ತಿದ್ದು, ಇದನ್ನು ತಡೆಯುವುದು ಪೊಲೀಸರ ಕರ್ತವ್ಯ’ ಎಂದು ಪೊಲೀಸ್ ಅಕಾಡೆಮಿ ನಿರ್ದೇಶಕ ಎಸ್.ಎಲ್.ಚನ್ನಬಸವಣ್ಣ ತಿಳಿಸಿದರು.</p>.<p>ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ವಿಹಾನ್ ಸಂಸ್ಥೆ ಬೆಂಗಳೂರು ಅಕಾಡೆಮಿ ಆವರಣದಲ್ಲಿ ‘ಮಾನವ ಕಳ್ಳಸಾಗಾಣೆ ವಿರೋಧಿ ಹಾಗೂ ನಿರ್ಮೂಲನೆಯಲ್ಲಿ ಪೋಲೀಸರ ಪಾತ್ರ’ ವಿಷಯದ ಕುರಿತು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿರುವ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ಮಾನವ ಕಳ್ಳಸಾಗಾಣಿಕೆ ವಿಷಯವು ಗಂಭೀರವಾದ ಸಂಕೀರ್ಣ ಜಾಗತಿಕ ಸಮಸ್ಯೆಯಾಗಿ ಬೆಳೆದಿದೆ. ಬದಲಾದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಇದು ತನ್ನ ವ್ಯಾಪ್ತಿಯನ್ನು ವ್ಯಾಪಕವಾಗಿ ವಿಸ್ತರಿಸಿದೆ. ಇದನ್ನು ತಡೆಯಲು ಹಲವು ಕಾನೂನುಗಳಿದ್ದು, ಪೊಲೀಸ್ ವ್ಯವಸ್ಥೆ, ಸರ್ಕಾರದ ಸಂಸ್ಥೆಗಳು ಹಾಗೂ ಇತರೆ ಸಂಘ-ಸಂಸ್ಥೆಗಳು ಪರಿಣಾಮಕಾರಿಯಾಗಿ ಶ್ರಮಿಸುತ್ತಿದ್ದರೂ, ಹೊಸ ಮಾರ್ಗಗಳು ಹಾಗೂ ತಂತ್ರಜ್ಞಾನದ ಮೂಲಕ ಮಾನವ ಕಳ್ಳಸಾಗಾಣಿಕೆ ಚಟುವಟಿಕೆಯಲ್ಲಿ ಪಾತಕಿಗಳು ತೊಡಗುತ್ತಿದ್ದು ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ’ ಎಂದರು.</p>.<p>‘ಪೊಲೀಸ್ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸರ್ಕಾರಿ ಸಂಘ ಸಂಸ್ಥೆಗಳು ಹಾಗೂ ಸರ್ಕಾರೇತರ ವಿವಿಧ ಸಂಘ ಸಂಸ್ಥೆಗಳೊಡನೆ ಸಮನ್ವಯತೆ ಸಾಧಿಸಿ ಮಾನವ ಕಳ್ಳಸಾಗಾಣಿಕೆ ತಡೆಯವಲ್ಲಿ ಶ್ರಮಿಸಬೇಕು’ ಎಂದರು.</p>.<p>ಕಾರ್ಯಾಗಾರದ ಸಂಯೋಜಕ ಎಸ್. ವೆಂಕಟೇಶ್, ವಿಹಾನ್ ಸಂಸ್ಥೆಯ ರೋವಿನ ಬಾಸ್ಟಿನ್, ಅಂಬರೀಷ್ ಜೈರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>