ಶನಿವಾರ, ಮಾರ್ಚ್ 25, 2023
23 °C

‘ಮಾನವೀಯ ಮೌಲ್ಯ ಮುಖ್ಯವಾಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಮಹಾತ್ಮ ಗಾಂಧೀಜಿ ಹೇಳಿದ ಮಾನವೀಯ ಮೌಲ್ಯಗಳು ನಮಗೆ ಹೆಚ್ಚು ಮುಖ್ಯವಾಗಬೇಕು’ ಎಂದು ನಿವೃತ್ತ ಕುಲಪತಿ ಡಾ.ಕೆ. ಚಿದಾನಂದಗೌಡ ಹೇಳಿದರು.

ನಗರದ ಜಯಲಕ್ಷ್ಮೀಪುರಂನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ‘ಗಾಂಧಿ ಸದ್ಭಾವನಾ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗಾಂಧೀಜಿಗೆ ವಿಶ್ವದಾದ್ಯಂತ ಮಾನ್ಯತೆ ಇದೆ. ಸಾಮಾನ್ಯವಾಗಿ ವಿಶ್ವಸಂಸ್ಥೆಯಲ್ಲಿರುವ ವಿವಿಧ ದೇಶಗಳ ಧ್ವಜಗಳನ್ನು ಆಯಾ ದೇಶದ ಅಧ್ಯಕ್ಷ ಅಥವಾ ರಾಷ್ಟ್ರಪತಿ ನಿಧನರಾದಾಗ ಅರ್ಧ ಮಟ್ಟಕ್ಕೆ ಇಳಿಸಲಾಗುತ್ತದೆ. ಆದರೆ, ಗಾಂಧೀಜಿ ನಿಧನರಾದಾಗ ಎಲ್ಲ ದೇಶಗಳ ಧ್ವಜಗಳನ್ನೂ ಅರ್ಧಮಟ್ಟಕ್ಕೆ ಇಳಿಸಲಾಗಿತ್ತು. ಇದು ಅವರ ಮಾನವೀಯ ಮೌಲ್ಯಗಳಿಗೆ ದೊರೆತ ಗೌರವವಾಗಿದೆ’ ಎಂದು ತಿಳಿಸಿದರು.

ಅದ್ಯಮ ರಂಗಶಾಲೆಯ ಮಕ್ಕಳು ಅಭಿನಯಿಸಿದ ‘ಪಂಚತಂತ್ರ’ ನಾಟಕಕ್ಕೆ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಚಾಲನೆ ನೀಡಿ ಮಾತನಾಡಿ, ‘ಗಾಂಧಿ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ’ ಎಂದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮಾತನಾಡಿದರು.

ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಅಭಿನಂದನಾ ಭಾಷಣ ಮಾಡಿದರು. ಅದಮ್ಯ ರಂಗಶಾಲೆಯ ಕಾರ್ಯದರ್ಶಿ ಚಂದ್ರು ಮಂಡ್ಯ, ಗಣೇಶ್, ಲೋಕೇಶ್ ಹುಣಸೂರು, ಸತೀಶ್‌ಕುಮಾರ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು