<p>ಪ್ರಜಾವಾಣಿ ವಾರ್ತೆ</p>.<p>ಹುಣಸೂರು: ‘ವಿದ್ಯಾರ್ಥಿ ಜೀವನದಲ್ಲಿ ಅಂಕ ಗಳಿಕೆಯ ಜೊತೆಗೆ ಸಂಸ್ಕೃತಿ ಹಾಗೂ ಸಂಪ್ರದಾಯ ಕಲಿಯುವುದರಿಂದ ಭವಿಷ್ಯದಲ್ಲಿ ಸಮಾಜ ನಿಮ್ಮನ್ನು ಗುರುತಿಸಲಿದೆ’ ಎಂದು ಕಾವೇರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಂಸ್ಥಾಪಕ ಡಾ.ಲೋಹಿತ್ ಹೇಳಿದರು.</p>.<p>ನಗರದ ಶಾಸ್ತ್ರಿ ವಿದ್ಯಾಸಂಸ್ಥೆಯಲ್ಲಿ ಬುಧವಾರ ರಥಸಪ್ತಮಿ ಮತ್ತು ವಸಂತ ಪಂಚಮಿ ಅಂಗವಾಗಿ ನಡೆದ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವ್ಯಕ್ತಿತ್ವ ರೂಪಿಸಿಕೊಳ್ಳದ ಹೊರತು ಪರೀಕ್ಷೆಯಲ್ಲಿ ಗಳಿಸಿದ ಅಂಕಕ್ಕೆ ಮೌಲ್ಯ ಸಿಗುವುದಿಲ್ಲ. ಸಂಸ್ಕಾರ ಮತ್ತು ಸಂಸ್ಕೃತಿಯೊಂದಿಗೆ ಸಮಯ ನಿರ್ವಹಣೆ ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಮೌಲ್ಯಭರಿತ ಜೀವನ ನಡೆಸುವುದರಿಂದ ನಿಮ್ಮ ಜೀವನದಲ್ಲಿ ಸಮಗ್ರ ಬದಲಾವಣೆ ಕಾಣಬಹುದು. ಅಲ್ಲದೆ ಸಮಯ ಪ್ರಜ್ಞೆ ಹೊಂದಿರಬೇಕು. ಸತತ ಪ್ರಯತ್ನ ಇದ್ದಲ್ಲಿ ಗುರಿ ಮುಟ್ಟಲು ಸಹಕಾರಿ ಆಗಲಿದೆ’ ಎಂದರು.</p>.<p>ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಮಾತನಾಡಿ, ‘ಕಲಿಕೆ ಒಂದಿದ್ದರೆ ಸಾಲದು ಓದಿನೊಂದಿಗೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ರವಿಶಂಕರ್, ನಿರ್ದೇಶಕ ಸಚ್ಚಿತ್ ಮಾತನಾಡಿದರು. ಯೋಗ ಶಿಕ್ಷಕ ಪ್ರಮೋದ್ ಮಾರ್ಗದರ್ಶನದಲ್ಲಿ 1,800 ವಿದ್ಯಾರ್ಥಿಗಳು ಏಕಕಾಲಕ್ಕೆ ಸೂರ್ಯನಮಸ್ಕಾರ ಸೇರಿದಂತೆ ವಿವಿಧ ಆಸನ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಹುಣಸೂರು: ‘ವಿದ್ಯಾರ್ಥಿ ಜೀವನದಲ್ಲಿ ಅಂಕ ಗಳಿಕೆಯ ಜೊತೆಗೆ ಸಂಸ್ಕೃತಿ ಹಾಗೂ ಸಂಪ್ರದಾಯ ಕಲಿಯುವುದರಿಂದ ಭವಿಷ್ಯದಲ್ಲಿ ಸಮಾಜ ನಿಮ್ಮನ್ನು ಗುರುತಿಸಲಿದೆ’ ಎಂದು ಕಾವೇರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಂಸ್ಥಾಪಕ ಡಾ.ಲೋಹಿತ್ ಹೇಳಿದರು.</p>.<p>ನಗರದ ಶಾಸ್ತ್ರಿ ವಿದ್ಯಾಸಂಸ್ಥೆಯಲ್ಲಿ ಬುಧವಾರ ರಥಸಪ್ತಮಿ ಮತ್ತು ವಸಂತ ಪಂಚಮಿ ಅಂಗವಾಗಿ ನಡೆದ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವ್ಯಕ್ತಿತ್ವ ರೂಪಿಸಿಕೊಳ್ಳದ ಹೊರತು ಪರೀಕ್ಷೆಯಲ್ಲಿ ಗಳಿಸಿದ ಅಂಕಕ್ಕೆ ಮೌಲ್ಯ ಸಿಗುವುದಿಲ್ಲ. ಸಂಸ್ಕಾರ ಮತ್ತು ಸಂಸ್ಕೃತಿಯೊಂದಿಗೆ ಸಮಯ ನಿರ್ವಹಣೆ ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಮೌಲ್ಯಭರಿತ ಜೀವನ ನಡೆಸುವುದರಿಂದ ನಿಮ್ಮ ಜೀವನದಲ್ಲಿ ಸಮಗ್ರ ಬದಲಾವಣೆ ಕಾಣಬಹುದು. ಅಲ್ಲದೆ ಸಮಯ ಪ್ರಜ್ಞೆ ಹೊಂದಿರಬೇಕು. ಸತತ ಪ್ರಯತ್ನ ಇದ್ದಲ್ಲಿ ಗುರಿ ಮುಟ್ಟಲು ಸಹಕಾರಿ ಆಗಲಿದೆ’ ಎಂದರು.</p>.<p>ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಮಾತನಾಡಿ, ‘ಕಲಿಕೆ ಒಂದಿದ್ದರೆ ಸಾಲದು ಓದಿನೊಂದಿಗೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ರವಿಶಂಕರ್, ನಿರ್ದೇಶಕ ಸಚ್ಚಿತ್ ಮಾತನಾಡಿದರು. ಯೋಗ ಶಿಕ್ಷಕ ಪ್ರಮೋದ್ ಮಾರ್ಗದರ್ಶನದಲ್ಲಿ 1,800 ವಿದ್ಯಾರ್ಥಿಗಳು ಏಕಕಾಲಕ್ಕೆ ಸೂರ್ಯನಮಸ್ಕಾರ ಸೇರಿದಂತೆ ವಿವಿಧ ಆಸನ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>