<p><strong>ಹುಣಸೂರು</strong>: ತಾಲ್ಲೂಕಿನ ಗಾವಡಗೆರೆ ಹೋಬಳಿ ಕೇಂದ್ರದಲ್ಲಿ ಸೋಮವಾರ ಬೃಹತ್ ಮರ ರಸ್ತೆಗೆ ಉರುಳಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.</p>.<p>‘ಮಧ್ಯಾಹ್ನ 1.30ರ ಸುಮಾರಿಗೆ ಮರ ಧರೆಗೆ ಉರುಳಿದೆ. ಮರದ ಬುಡ ಶಿಥಿಲವಾಗಿತ್ತು, ವಿಷಯವನ್ನು ಸ್ಥಳೀಯ ಆಡಳಿತದ ಗಮನಕ್ಕೆ ತರಲಾಗಿತ್ತು. ಅರಣ್ಯ ಇಲಾಖೆ ಮರ ತೆರವುಗೊಳಿಸುವ ಪ್ರಯತ್ನ ನಡೆಸದೆ ಈ ಅವಘಡ ಸಂಭಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ’ ಎಂದು ಸ್ಥಳೀಯ ನಿವಾಸಿ ಗಣಪತಿ ಇಂಡೋಳ್ಕರ್ ತಿಳಿಸಿದರು.</p>.<p>‘ಮರ ಬಿದ್ದ ಸ್ಥಳದ ಸಮೀಪ ಪಶುವೈದ್ಯ ಶಾಲೆ, ಹಾಲು ಉತ್ಪನ್ನ ಸಂಗ್ರಹ ಕೇಂದ್ರ ಮತ್ತು ಪ್ರಾಥಮಿಕ ಶಾಲೆ ಇದ್ದು, ನಿತ್ಯ ಈ ಪ್ರದೇಶ ಜನಜಂಗುಳಿಯಿಂದ ಕೂಡಿರುತ್ತಿತ್ತು. ಇಂದು ಯಾರೂ ಇಲ್ಲದ ಸಮಯದಲ್ಲಿ ಮರ ಬಿದ್ದಿದೆ, ಇಲ್ಲದಿದ್ದರೆ ಅನಾಹುತ ಸಂಭವಿಸುತ್ತಿತ್ತು’ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯುತ್ ವ್ಯತ್ಯಯ: ಘಟನೆಯಿಂದ ಗ್ರಾಮದಲ್ಲಿ ವಿದ್ಯುತ್ ಕಡಿತವಾಗಿದ್ದು, ಸ್ಥಳೀಯರು ಮರ ತೆರವುಗೊಳಿಸಿವ ಕಾರ್ಯ ನಡೆಸಿದರು. ಕೆ.ಆರ್.ನಗರ– ಹುಣಸೂರು ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ತಾಲ್ಲೂಕಿನ ಗಾವಡಗೆರೆ ಹೋಬಳಿ ಕೇಂದ್ರದಲ್ಲಿ ಸೋಮವಾರ ಬೃಹತ್ ಮರ ರಸ್ತೆಗೆ ಉರುಳಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.</p>.<p>‘ಮಧ್ಯಾಹ್ನ 1.30ರ ಸುಮಾರಿಗೆ ಮರ ಧರೆಗೆ ಉರುಳಿದೆ. ಮರದ ಬುಡ ಶಿಥಿಲವಾಗಿತ್ತು, ವಿಷಯವನ್ನು ಸ್ಥಳೀಯ ಆಡಳಿತದ ಗಮನಕ್ಕೆ ತರಲಾಗಿತ್ತು. ಅರಣ್ಯ ಇಲಾಖೆ ಮರ ತೆರವುಗೊಳಿಸುವ ಪ್ರಯತ್ನ ನಡೆಸದೆ ಈ ಅವಘಡ ಸಂಭಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ’ ಎಂದು ಸ್ಥಳೀಯ ನಿವಾಸಿ ಗಣಪತಿ ಇಂಡೋಳ್ಕರ್ ತಿಳಿಸಿದರು.</p>.<p>‘ಮರ ಬಿದ್ದ ಸ್ಥಳದ ಸಮೀಪ ಪಶುವೈದ್ಯ ಶಾಲೆ, ಹಾಲು ಉತ್ಪನ್ನ ಸಂಗ್ರಹ ಕೇಂದ್ರ ಮತ್ತು ಪ್ರಾಥಮಿಕ ಶಾಲೆ ಇದ್ದು, ನಿತ್ಯ ಈ ಪ್ರದೇಶ ಜನಜಂಗುಳಿಯಿಂದ ಕೂಡಿರುತ್ತಿತ್ತು. ಇಂದು ಯಾರೂ ಇಲ್ಲದ ಸಮಯದಲ್ಲಿ ಮರ ಬಿದ್ದಿದೆ, ಇಲ್ಲದಿದ್ದರೆ ಅನಾಹುತ ಸಂಭವಿಸುತ್ತಿತ್ತು’ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯುತ್ ವ್ಯತ್ಯಯ: ಘಟನೆಯಿಂದ ಗ್ರಾಮದಲ್ಲಿ ವಿದ್ಯುತ್ ಕಡಿತವಾಗಿದ್ದು, ಸ್ಥಳೀಯರು ಮರ ತೆರವುಗೊಳಿಸಿವ ಕಾರ್ಯ ನಡೆಸಿದರು. ಕೆ.ಆರ್.ನಗರ– ಹುಣಸೂರು ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>