<p>ಹುಣಸೂರು: ‘ಮಹಿಳೆಯು ಕಾನೂನುಬದ್ಧ ಹಕ್ಕುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವುದರಿಂದ ಕುಟುಂಬದಲ್ಲಿ ಸಾಮರಸ್ಯತೆ ಕಾಯ್ದುಕೊಳ್ಳಲು ಸಾಧ್ಯ’ ಎಂದು ನ್ಯಾಯಾಧೀಶೆ ಅನಿತಾ ಹೇಳಿದರು.</p>.<p>ನಗರದ ಶಿಕ್ಷಣ ಇಲಾಖೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಕೀಲರ ಸಂಘ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರ ರಕ್ಷಣೆಗೆ ಸಂವಿಧಾನಾತ್ಮಕವಾಗಿ ಹಲವು ಹಕ್ಕುಗಳನ್ನು ಸರ್ಕಾರ ರೂಪಿಸಿ ಜಾರಿಗೊಳಿಸಿದೆ. ಆ ಹಕ್ಕುಗಳನ್ನು ನಾವು ನಮ್ಮ ವಿವೇಚನೆಯಿಂದ ಬಳಸಿಕೊಳ್ಳಬೇಕು. ಮಹಿಳೆಯರ ಆರ್ಥಿಕ ಪರಿಸ್ಥಿತಿಯೂ ಬಲಗೊಳ್ಳುತ್ತಿದೆ. ಸ್ವಸಹಾಯ ಸಂಘಗಳನ್ನು, ಉತ್ಪಾದನಾ ಘಟಕಗಳನ್ನು ಆರಂಭಿಸಿ ಆದಾಯ ಗಳಿಸುತ್ತಿದ್ದಾರೆ’ ಎಂದರು.</p>.<p>‘ಹೆಣ್ಣು ಮಕ್ಕಳು ಹದಿಹರೆಯದ ವಯಸ್ಸಿನಲ್ಲಿ ಗರ್ಭವತಿಯಾಗುವ ಪ್ರಕರಣಗಳು ನ್ಯಾಯಾಲಯಕ್ಕೆ ಬರುತ್ತಿರುವುದು ಆತಂಕಕಾರಿ. ಇದು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದು, ಪೋಷಕರು ಮಕ್ಕಳ ಬಗ್ಗೆ ಗಮನ ನೀಡಬೇಕಿದೆ. ಹೆಣ್ಣು ಮಕ್ಕಳು ಮೊಬೈಲ್ ಬಳಸುವಲ್ಲಿಯೂ ಎಚ್ಚರವಹಿಸಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್, ಸಹಾಯಕ ಸರ್ಕಾರಿ ಅಭಿಯೋಜಕಿ ಪಾರ್ವತಿ, ವಕೀಲರ ಸಂಘದ ಅಧ್ಯಕ್ಷ ಶಿವಣ್ಣೆಗೌಡ, ಸೋಮಯ್ಯ, ಹೇಮಲತಾ ಮತ್ತು ವಕೀಲೆ ಪವಿತ್ರಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-38-467993026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ‘ಮಹಿಳೆಯು ಕಾನೂನುಬದ್ಧ ಹಕ್ಕುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವುದರಿಂದ ಕುಟುಂಬದಲ್ಲಿ ಸಾಮರಸ್ಯತೆ ಕಾಯ್ದುಕೊಳ್ಳಲು ಸಾಧ್ಯ’ ಎಂದು ನ್ಯಾಯಾಧೀಶೆ ಅನಿತಾ ಹೇಳಿದರು.</p>.<p>ನಗರದ ಶಿಕ್ಷಣ ಇಲಾಖೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಕೀಲರ ಸಂಘ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರ ರಕ್ಷಣೆಗೆ ಸಂವಿಧಾನಾತ್ಮಕವಾಗಿ ಹಲವು ಹಕ್ಕುಗಳನ್ನು ಸರ್ಕಾರ ರೂಪಿಸಿ ಜಾರಿಗೊಳಿಸಿದೆ. ಆ ಹಕ್ಕುಗಳನ್ನು ನಾವು ನಮ್ಮ ವಿವೇಚನೆಯಿಂದ ಬಳಸಿಕೊಳ್ಳಬೇಕು. ಮಹಿಳೆಯರ ಆರ್ಥಿಕ ಪರಿಸ್ಥಿತಿಯೂ ಬಲಗೊಳ್ಳುತ್ತಿದೆ. ಸ್ವಸಹಾಯ ಸಂಘಗಳನ್ನು, ಉತ್ಪಾದನಾ ಘಟಕಗಳನ್ನು ಆರಂಭಿಸಿ ಆದಾಯ ಗಳಿಸುತ್ತಿದ್ದಾರೆ’ ಎಂದರು.</p>.<p>‘ಹೆಣ್ಣು ಮಕ್ಕಳು ಹದಿಹರೆಯದ ವಯಸ್ಸಿನಲ್ಲಿ ಗರ್ಭವತಿಯಾಗುವ ಪ್ರಕರಣಗಳು ನ್ಯಾಯಾಲಯಕ್ಕೆ ಬರುತ್ತಿರುವುದು ಆತಂಕಕಾರಿ. ಇದು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದು, ಪೋಷಕರು ಮಕ್ಕಳ ಬಗ್ಗೆ ಗಮನ ನೀಡಬೇಕಿದೆ. ಹೆಣ್ಣು ಮಕ್ಕಳು ಮೊಬೈಲ್ ಬಳಸುವಲ್ಲಿಯೂ ಎಚ್ಚರವಹಿಸಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್, ಸಹಾಯಕ ಸರ್ಕಾರಿ ಅಭಿಯೋಜಕಿ ಪಾರ್ವತಿ, ವಕೀಲರ ಸಂಘದ ಅಧ್ಯಕ್ಷ ಶಿವಣ್ಣೆಗೌಡ, ಸೋಮಯ್ಯ, ಹೇಮಲತಾ ಮತ್ತು ವಕೀಲೆ ಪವಿತ್ರಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-38-467993026</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>