<p><strong>ಹುಣಸೂರು:</strong> ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯಿಂದ ಕಾರ್ಮಿಕರ ಹಕ್ಕುಗಳ ದಮನ ಮಾಡಿ, ಕಾಯಂ ಗುಲಾಮರನ್ನಾಗಿಸುವ ಹುನ್ನಾರ ನಡೆದಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಹೇಳಿದರು.</p>.<p>ನಗರದಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಹೋರಾಟದಿಂದ ಪಡೆದ ಕಾರ್ಮಿಕ ಹಕ್ಕುಗಳನ್ನು ಹಿಸುಕಿ ಹಾಕುವ ಹುನ್ನಾರ ನಡೆದಿದ್ದು, ಇದರ ವಿರುದ್ಧ ಕಾರ್ಮಿಕ ಸಂಘಟನೆಗಳು ಧ್ವನಿ ಎತ್ತಬೇಕಿದೆ ಎಂದರು.</p>.<p>‘ಕಾರ್ಮಿಕರ ಶ್ರಮಕ್ಕೆ ತಕ್ಕ ವೇತನವಿಲ್ಲದೆ ಪುಕ್ಕಟೆ ದುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರನ್ನು ಮನಸೋಯಿಚ್ಛೆ ಬಳಸಿಕೊಳ್ಳುವ ಪರಿಪಾಠ ರಾಜ್ಯದಲ್ಲಿ ಎದುರಾಗಿದ್ದು, ಕಾರ್ಮಿಕ ಸಂಘಟನೆಗಳು ಎಚ್ಚರವಹಿಸಬೇಕು ಎಂದರು.</p>.<p>ಸಿಐಟಿಯು ಸಂಘಟನೆಯ ತಾಲ್ಲೂಕು ಸಂಚಾಲಕ ಬಸವರಾಜ್ ಮಾತನಾಡಿ, ಕಾರ್ಮಿಕರು 8 ಗಂಟೆ ಕೆಲಸ 8 ಗಂಟೆ ವಿಶ್ರಾಂತಿ ಎಂಬ ತತ್ವದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಲವಿತ್ತು, ಈಗ 12 ಗಂಟೆ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರನ್ನು ವಿವಿಧ ಹೆಸರಿನಲ್ಲಿ ಖಾಸಗಿ ಕಂಪೆನಿಗಳು ಶೋಷಿಸುತ್ತಿದ್ದು, ವೈಯಕ್ತಿಕ ಬದುಕು ಇಲ್ಲವಾಗಿದೆ ಎಂದರು. ಸರ್ಕಾರ ಮೌನವಹಿಸಿ ಕಂಪೆನಿಗಳ ಜತೆ ಪರೋಕ್ಷವಾಗಿ ಕೈ ಜೋಡಿಸಿ ಕಾರ್ಮಿಕರ ಹಕ್ಕುಗಳನ್ನು ದಮನಗೊಳಿಸಿದೆ ಎಂದು ಕಿಡಿ ಕಾರಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಣ್ಣೇಗೌಡ,ತಾ.ಅಧ್ಯಕ್ಷ ಚಂದ್ರಶೇಖರ್, ಲೋಕೇಶ್,ಮಂಜುಳ, ರಾಜಮ್ಮ ಮಾತನಾಡಿದರು, ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ತೆರಳಿದರು.</p>.<p>ಸಂಘಟನೆಯ ಮುಖಂಡರಾದ ದಿನೇಶ್,ಜಗದೀಶ್, ಹೇಮಾ,ಶಿವಮ್ಮ, ರಾಜೇಶ್ವರಿ,ಮೀನಾ, ಪ್ರೀತಿ, ರಾಜಮ್ಮ,ಶಾಂತಮ್ಮ, ಜಾನಕಮ್ಮ,ಮುಳ್ಳೂರು ಮಹದೇವ್, ಸಿದ್ದಯ್ಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-38-906481446</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯಿಂದ ಕಾರ್ಮಿಕರ ಹಕ್ಕುಗಳ ದಮನ ಮಾಡಿ, ಕಾಯಂ ಗುಲಾಮರನ್ನಾಗಿಸುವ ಹುನ್ನಾರ ನಡೆದಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ ಹೇಳಿದರು.</p>.<p>ನಗರದಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಹೋರಾಟದಿಂದ ಪಡೆದ ಕಾರ್ಮಿಕ ಹಕ್ಕುಗಳನ್ನು ಹಿಸುಕಿ ಹಾಕುವ ಹುನ್ನಾರ ನಡೆದಿದ್ದು, ಇದರ ವಿರುದ್ಧ ಕಾರ್ಮಿಕ ಸಂಘಟನೆಗಳು ಧ್ವನಿ ಎತ್ತಬೇಕಿದೆ ಎಂದರು.</p>.<p>‘ಕಾರ್ಮಿಕರ ಶ್ರಮಕ್ಕೆ ತಕ್ಕ ವೇತನವಿಲ್ಲದೆ ಪುಕ್ಕಟೆ ದುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರನ್ನು ಮನಸೋಯಿಚ್ಛೆ ಬಳಸಿಕೊಳ್ಳುವ ಪರಿಪಾಠ ರಾಜ್ಯದಲ್ಲಿ ಎದುರಾಗಿದ್ದು, ಕಾರ್ಮಿಕ ಸಂಘಟನೆಗಳು ಎಚ್ಚರವಹಿಸಬೇಕು ಎಂದರು.</p>.<p>ಸಿಐಟಿಯು ಸಂಘಟನೆಯ ತಾಲ್ಲೂಕು ಸಂಚಾಲಕ ಬಸವರಾಜ್ ಮಾತನಾಡಿ, ಕಾರ್ಮಿಕರು 8 ಗಂಟೆ ಕೆಲಸ 8 ಗಂಟೆ ವಿಶ್ರಾಂತಿ ಎಂಬ ತತ್ವದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಲವಿತ್ತು, ಈಗ 12 ಗಂಟೆ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರನ್ನು ವಿವಿಧ ಹೆಸರಿನಲ್ಲಿ ಖಾಸಗಿ ಕಂಪೆನಿಗಳು ಶೋಷಿಸುತ್ತಿದ್ದು, ವೈಯಕ್ತಿಕ ಬದುಕು ಇಲ್ಲವಾಗಿದೆ ಎಂದರು. ಸರ್ಕಾರ ಮೌನವಹಿಸಿ ಕಂಪೆನಿಗಳ ಜತೆ ಪರೋಕ್ಷವಾಗಿ ಕೈ ಜೋಡಿಸಿ ಕಾರ್ಮಿಕರ ಹಕ್ಕುಗಳನ್ನು ದಮನಗೊಳಿಸಿದೆ ಎಂದು ಕಿಡಿ ಕಾರಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಣ್ಣೇಗೌಡ,ತಾ.ಅಧ್ಯಕ್ಷ ಚಂದ್ರಶೇಖರ್, ಲೋಕೇಶ್,ಮಂಜುಳ, ರಾಜಮ್ಮ ಮಾತನಾಡಿದರು, ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ತೆರಳಿದರು.</p>.<p>ಸಂಘಟನೆಯ ಮುಖಂಡರಾದ ದಿನೇಶ್,ಜಗದೀಶ್, ಹೇಮಾ,ಶಿವಮ್ಮ, ರಾಜೇಶ್ವರಿ,ಮೀನಾ, ಪ್ರೀತಿ, ರಾಜಮ್ಮ,ಶಾಂತಮ್ಮ, ಜಾನಕಮ್ಮ,ಮುಳ್ಳೂರು ಮಹದೇವ್, ಸಿದ್ದಯ್ಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-38-906481446</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>