<p>ಹುಣಸೂರು: ಜನಗಣತಿ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ವೆಬ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರೇರಣೆ ನೀಡಬೇಕು. ಆ ಮೂಲಕ ಸಮರ್ಪಕ ಗಣತಿ ನಡೆಸಲು ಒತ್ತು ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಹೇಳಿದರು.</p>.<p>ನಗರದ ಸಂತ ಜೋಸೆಫ್ ಶಾಲೆಯ ಗಣತಿದಾರರ ತರಬೇತಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿದರು.</p>.<p>ತರಬೇತಿಯಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿಗೆ ಗಣತಿಯಲ್ಲಿ ಕೈಗೊಳ್ಳಬೇಕಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಾರ್ವಜನಿಕರು ನೇರವಾಗಿ ಗಣತಿ ಕಾರ್ಯದಲ್ಲಿ ಭಾಗಿಯಾಗಿ ತಮ್ಮ ವಿವರವನ್ನು ವೆಬ್ ಪೋರ್ಟಲ್ನಲ್ಲಿ ನಮೂದಿಸುವ ಬಗ್ಗೆ ಗಣತಿದಾರರು ಒತ್ತು ನೀಡಬೇಕು ಎಂದರು.</p>.<p>ಸಾರ್ವಜನಿಕರು ಹಂಚಿಕೊಳ್ಳುವ ಸಮಗ್ರ ಮಾಹಿತಿಯನ್ನು ಯಾವುದೇ ಕಾರಣದಿಂದಲೂ ಸೋರಿಕೆ ಆಗದಂತೆ ಕ್ರಮವಹಿಸುವ ಬಗ್ಗೆ ಜನರಿಗೆ ಭರವಸೆ ನೀಡಬೇಕು. ಈ ಬಗ್ಗೆ ಅವರಿಗೆ ಮನದಟ್ಟು ಮಾಡಿಸಬೇಕು ಎಂದು ಸೂಚಿಸಿದರು.</p>.<p>ಕಂದಾಯ ಇಲಾಖೆ ಅಧಿಕಾರಿ ಶ್ರೀಪಾದ್, ಚಂದ್ರಶೇಖರ್, ಮಾಸ್ಪರ್ ತರಬೇತುದಾರರಾದ ಸಂತೋಷ್ ಕುಮಾರ್, ರಮಣನಾಯಕ್, ಪ್ರಸನ್ನ, ಬಸವರಾಜ್, ಚಂದ್ರು, ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-38-830820665</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ಜನಗಣತಿ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ವೆಬ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರೇರಣೆ ನೀಡಬೇಕು. ಆ ಮೂಲಕ ಸಮರ್ಪಕ ಗಣತಿ ನಡೆಸಲು ಒತ್ತು ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಹೇಳಿದರು.</p>.<p>ನಗರದ ಸಂತ ಜೋಸೆಫ್ ಶಾಲೆಯ ಗಣತಿದಾರರ ತರಬೇತಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿದರು.</p>.<p>ತರಬೇತಿಯಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿಗೆ ಗಣತಿಯಲ್ಲಿ ಕೈಗೊಳ್ಳಬೇಕಿರುವ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಸಾರ್ವಜನಿಕರು ನೇರವಾಗಿ ಗಣತಿ ಕಾರ್ಯದಲ್ಲಿ ಭಾಗಿಯಾಗಿ ತಮ್ಮ ವಿವರವನ್ನು ವೆಬ್ ಪೋರ್ಟಲ್ನಲ್ಲಿ ನಮೂದಿಸುವ ಬಗ್ಗೆ ಗಣತಿದಾರರು ಒತ್ತು ನೀಡಬೇಕು ಎಂದರು.</p>.<p>ಸಾರ್ವಜನಿಕರು ಹಂಚಿಕೊಳ್ಳುವ ಸಮಗ್ರ ಮಾಹಿತಿಯನ್ನು ಯಾವುದೇ ಕಾರಣದಿಂದಲೂ ಸೋರಿಕೆ ಆಗದಂತೆ ಕ್ರಮವಹಿಸುವ ಬಗ್ಗೆ ಜನರಿಗೆ ಭರವಸೆ ನೀಡಬೇಕು. ಈ ಬಗ್ಗೆ ಅವರಿಗೆ ಮನದಟ್ಟು ಮಾಡಿಸಬೇಕು ಎಂದು ಸೂಚಿಸಿದರು.</p>.<p>ಕಂದಾಯ ಇಲಾಖೆ ಅಧಿಕಾರಿ ಶ್ರೀಪಾದ್, ಚಂದ್ರಶೇಖರ್, ಮಾಸ್ಪರ್ ತರಬೇತುದಾರರಾದ ಸಂತೋಷ್ ಕುಮಾರ್, ರಮಣನಾಯಕ್, ಪ್ರಸನ್ನ, ಬಸವರಾಜ್, ಚಂದ್ರು, ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-38-830820665</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>