<p><strong>ಹುಣಸೂರು</strong>: ಹುಣಸೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹ 1 ಕೋಟಿ ಅನುದಾನ ಮಂಜೂರು ಮಾಡಿ ಕೇವಲ ₹ 33 ಲಕ್ಷ ಹಣ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕ್ಷೇತ್ರದಲ್ಲಿ ಯಾವ ಕೆಲಸ ಮಾಡಲು ಸಾಧ್ಯ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಸದನದಲ್ಲಿ ಬುಧವಾರ ಪ್ರಶ್ನಿಸಿದರು.</p>.<p>ಸಮಾಜ ಕಲ್ಯಾಣ ಸಚಿವಾಲಯದಿಂದ ತಾರತಮ್ಯ ಅನುಸರಿಸಲಾಗಿದ್ದು, 2023-24 ನೇ ಸಾಲಿನಲ್ಲಿ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಲಿಲ್ಲ, 24-25 ರಲ್ಲಿ ನೀಡಿದ ₹ 1 ಕೋಟಿ ಅನುದಾನದಲ್ಲಿ ₹ 33 ಲಕ್ಷ ಬಿಡುಗಡೆ ಮಾಡಿದ್ದಾರೆ. ಕ್ಷೇತ್ರದಲ್ಲಿ 200 ಗ್ರಾಮಗಳಿದ್ದು, ಮಂಜೂರಾದ ಅನುದಾನದಲ್ಲಿ ತಲಾ ₹ 15 ಸಾವಿರ ಪ್ರತಿ ಗ್ರಾಮಗಳ ಅಭಿವೃದ್ಧಿಗೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಮೈಸೂರು ಜಿಲ್ಲೆಗೆ ₹ 70 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದ್ದು, ಅ ಪೈಕಿ ವರುಣಾ ಕ್ಷೇತ್ರಕ್ಕೆ ₹14.50 ಕೋಟಿ, ಪಿರಿಯಾಪಟ್ಟಣ ₹ 9.65 ಕೋಟಿ, ಕೆ.ಆರ್.ನಗರ ₹ 7 ಕೋಟಿ, ಟಿ.ನರಸಿಪುರ ಕ್ಷೇತ್ರಕ್ಕೆ ₹8.45 ಕೋಟಿ, ನಂಜನಗೂಡು ₹ 7 ಕೋಟಿ, ಚಾಮುಂಡೇಶ್ವರಿ ₹ 3.50, ಚಾಮರಾಜ ₹ 5 ಕೋಟಿ, ನರಸಿಂಹರಾಜ ಕ್ಷೇತ್ರಕ್ಕೆ ₹ 4 ಕೋಟಿ ನೀಡಲಾಗಿದೆ. ಈ ಅನುದಾನವನ್ನು ಯಾವ ಮಾನದಂಡದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರಕ್ಕೆ ಪ್ರಶ್ನಿಸಲಾಗಿತ್ತು. ಸಚಿವರು ಸೂಕ್ತ ಮಾಹಿತಿ ನೀಡಿಲ್ಲ ಎಂದು ಸದನದ ಗಮನಕ್ಕೆ ತರಲಾಯಿತು ಎಂದು ತಿಳಿಸಿದ್ದಾರೆ.</p>.<p>ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ 70 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರಿದ್ದು, ಸರ್ಕಾರ ನೀಡಿರುವ ಅನುದಾನದಲ್ಲಿ ಯಾವ ಸಮುದಾಯಕ್ಕೆ ವಿತರಿಸಲು ಸಾಧ್ಯ ? ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೂ ಅನುದಾನ ನೀಡದೆ ತಾರತಮ್ಯ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ಹುಣಸೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹ 1 ಕೋಟಿ ಅನುದಾನ ಮಂಜೂರು ಮಾಡಿ ಕೇವಲ ₹ 33 ಲಕ್ಷ ಹಣ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಕ್ಷೇತ್ರದಲ್ಲಿ ಯಾವ ಕೆಲಸ ಮಾಡಲು ಸಾಧ್ಯ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಸದನದಲ್ಲಿ ಬುಧವಾರ ಪ್ರಶ್ನಿಸಿದರು.</p>.<p>ಸಮಾಜ ಕಲ್ಯಾಣ ಸಚಿವಾಲಯದಿಂದ ತಾರತಮ್ಯ ಅನುಸರಿಸಲಾಗಿದ್ದು, 2023-24 ನೇ ಸಾಲಿನಲ್ಲಿ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಲಿಲ್ಲ, 24-25 ರಲ್ಲಿ ನೀಡಿದ ₹ 1 ಕೋಟಿ ಅನುದಾನದಲ್ಲಿ ₹ 33 ಲಕ್ಷ ಬಿಡುಗಡೆ ಮಾಡಿದ್ದಾರೆ. ಕ್ಷೇತ್ರದಲ್ಲಿ 200 ಗ್ರಾಮಗಳಿದ್ದು, ಮಂಜೂರಾದ ಅನುದಾನದಲ್ಲಿ ತಲಾ ₹ 15 ಸಾವಿರ ಪ್ರತಿ ಗ್ರಾಮಗಳ ಅಭಿವೃದ್ಧಿಗೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಮೈಸೂರು ಜಿಲ್ಲೆಗೆ ₹ 70 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದ್ದು, ಅ ಪೈಕಿ ವರುಣಾ ಕ್ಷೇತ್ರಕ್ಕೆ ₹14.50 ಕೋಟಿ, ಪಿರಿಯಾಪಟ್ಟಣ ₹ 9.65 ಕೋಟಿ, ಕೆ.ಆರ್.ನಗರ ₹ 7 ಕೋಟಿ, ಟಿ.ನರಸಿಪುರ ಕ್ಷೇತ್ರಕ್ಕೆ ₹8.45 ಕೋಟಿ, ನಂಜನಗೂಡು ₹ 7 ಕೋಟಿ, ಚಾಮುಂಡೇಶ್ವರಿ ₹ 3.50, ಚಾಮರಾಜ ₹ 5 ಕೋಟಿ, ನರಸಿಂಹರಾಜ ಕ್ಷೇತ್ರಕ್ಕೆ ₹ 4 ಕೋಟಿ ನೀಡಲಾಗಿದೆ. ಈ ಅನುದಾನವನ್ನು ಯಾವ ಮಾನದಂಡದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರಕ್ಕೆ ಪ್ರಶ್ನಿಸಲಾಗಿತ್ತು. ಸಚಿವರು ಸೂಕ್ತ ಮಾಹಿತಿ ನೀಡಿಲ್ಲ ಎಂದು ಸದನದ ಗಮನಕ್ಕೆ ತರಲಾಯಿತು ಎಂದು ತಿಳಿಸಿದ್ದಾರೆ.</p>.<p>ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ 70 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರಿದ್ದು, ಸರ್ಕಾರ ನೀಡಿರುವ ಅನುದಾನದಲ್ಲಿ ಯಾವ ಸಮುದಾಯಕ್ಕೆ ವಿತರಿಸಲು ಸಾಧ್ಯ ? ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೂ ಅನುದಾನ ನೀಡದೆ ತಾರತಮ್ಯ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>