<p><strong>ಹುಣಸೂರು:</strong> ‘ಮರದೂರಿನಲ್ಲಿ ನೆಲೆಸಿರುವ ಅಲೆಮಾರಿ ಸಮುದಾಯಕ್ಕೆ ಸೇರಿದ ದೊಂಬರಿಗೆ ಮೂಲ ಸವಲತ್ತು ಇಲ್ಲದೆ ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸಿದ್ದಾರೆ’ ಎಂದು ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಹೊಂಗಯ್ಯ ಗಮನಕ್ಕೆ ತಂದರು.</p>.<p>ಮರದೂರು ಗ್ರಾಮ ವ್ಯಾಪ್ತಿಯಲ್ಲಿ ನೆಲೆ ಕಟ್ಟಿಕೊಂಡಿರುವ 30 ದೊಂಬಿದಾಸ ಸಮುದಾಯದ ಕುಟುಂಬಗಳಿಗೆ ಹಲವು ವರ್ಷಗಳಿಂದ ಸರ್ಕಾರಿ ಸವಲತ್ತು, ಮನೆ ಇಲ್ಲದೆ ಬಯಲಿನಲ್ಲಿ ಗುಡಿಸಲು ಕಟ್ಟಿಕೊಂಡು ಬದುಕು ನಡೆಸಿದ್ದಾರೆ. ಈ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ಅಲೆಮಾರಿ ನಿಗಮ ಮಂಡಳಿ ಸ್ಥಾಪಿಸಿದ್ದು, ನಿಗಮ ಮಂಡಳಿ ಗಮನಕ್ಕೆ ತಂದು ವಿಶೇಷ ಅನುದಾನಕ್ಕೆ ತಾ.ಪಂ ಅಧಿಕಾರಿಗಳು ವರದಿ ಸಲ್ಲಿಸಿ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.</p>.<p>ಕಾಲೊನಿ ವೀಕ್ಷಿಸಿದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಹೊಂಗಯ್ಯ ಮಾತನಾಡಿ, ಅಲೆಮಾರಿ ನಿಗಮ ಮಂಡಳಿ ಅಧ್ಯಕ್ಷರಿಗೆ ತಾ.ಪಂ ಕಚೇರಿಯಿಂದ ದೊಂಬರ ಕಾಲೊನಿ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ, ಸೂಕ್ತ ಕ್ರಮ ತೆಗೆದುಕೊಳ್ಳಲು ಪತ್ರ ಬರೆದು ಮನವಿ ಮಾಡಲಿದ್ದೇವೆ. ಈಗಾಗಲೇ ವಸತಿ ಯೋಜನೆಯಲ್ಲಿ ಆಯ್ಕೆಗೊಂಡ 5 ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಿ, ಗ್ರಾಮದವರಿಗೆ 30 ಗುಂಟೆ ನಿವೇಶನ ಸ್ಮಶಾನಕ್ಕೆ ಕಾದಿಡುವ ಬಗ್ಗೆ ಸಂಬಂಧಿಸಿದ ಪಿಡಿಒ ಗಮನಕ್ಕೆ ತರಲಾಗುವುದು. ಪಂಚಾಯಿತಿಯಿಂದ ಕಾಲೊನಿಗೆ ಬೀದಿ ದೀಪ ಅಳವಡಿಸಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭರತ್, ಪಿಡಿಒ ಧರ್ಮೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ಮರದೂರಿನಲ್ಲಿ ನೆಲೆಸಿರುವ ಅಲೆಮಾರಿ ಸಮುದಾಯಕ್ಕೆ ಸೇರಿದ ದೊಂಬರಿಗೆ ಮೂಲ ಸವಲತ್ತು ಇಲ್ಲದೆ ಅತಂತ್ರ ಸ್ಥಿತಿಯಲ್ಲಿ ಬದುಕು ನಡೆಸಿದ್ದಾರೆ’ ಎಂದು ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಹೊಂಗಯ್ಯ ಗಮನಕ್ಕೆ ತಂದರು.</p>.<p>ಮರದೂರು ಗ್ರಾಮ ವ್ಯಾಪ್ತಿಯಲ್ಲಿ ನೆಲೆ ಕಟ್ಟಿಕೊಂಡಿರುವ 30 ದೊಂಬಿದಾಸ ಸಮುದಾಯದ ಕುಟುಂಬಗಳಿಗೆ ಹಲವು ವರ್ಷಗಳಿಂದ ಸರ್ಕಾರಿ ಸವಲತ್ತು, ಮನೆ ಇಲ್ಲದೆ ಬಯಲಿನಲ್ಲಿ ಗುಡಿಸಲು ಕಟ್ಟಿಕೊಂಡು ಬದುಕು ನಡೆಸಿದ್ದಾರೆ. ಈ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ಅಲೆಮಾರಿ ನಿಗಮ ಮಂಡಳಿ ಸ್ಥಾಪಿಸಿದ್ದು, ನಿಗಮ ಮಂಡಳಿ ಗಮನಕ್ಕೆ ತಂದು ವಿಶೇಷ ಅನುದಾನಕ್ಕೆ ತಾ.ಪಂ ಅಧಿಕಾರಿಗಳು ವರದಿ ಸಲ್ಲಿಸಿ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.</p>.<p>ಕಾಲೊನಿ ವೀಕ್ಷಿಸಿದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಹೊಂಗಯ್ಯ ಮಾತನಾಡಿ, ಅಲೆಮಾರಿ ನಿಗಮ ಮಂಡಳಿ ಅಧ್ಯಕ್ಷರಿಗೆ ತಾ.ಪಂ ಕಚೇರಿಯಿಂದ ದೊಂಬರ ಕಾಲೊನಿ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ, ಸೂಕ್ತ ಕ್ರಮ ತೆಗೆದುಕೊಳ್ಳಲು ಪತ್ರ ಬರೆದು ಮನವಿ ಮಾಡಲಿದ್ದೇವೆ. ಈಗಾಗಲೇ ವಸತಿ ಯೋಜನೆಯಲ್ಲಿ ಆಯ್ಕೆಗೊಂಡ 5 ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಿ, ಗ್ರಾಮದವರಿಗೆ 30 ಗುಂಟೆ ನಿವೇಶನ ಸ್ಮಶಾನಕ್ಕೆ ಕಾದಿಡುವ ಬಗ್ಗೆ ಸಂಬಂಧಿಸಿದ ಪಿಡಿಒ ಗಮನಕ್ಕೆ ತರಲಾಗುವುದು. ಪಂಚಾಯಿತಿಯಿಂದ ಕಾಲೊನಿಗೆ ಬೀದಿ ದೀಪ ಅಳವಡಿಸಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭರತ್, ಪಿಡಿಒ ಧರ್ಮೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>