<p><strong>ಹುಣಸೂರು: </strong>‘ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಯುವತಿ ಅತ್ಯಾಚಾರ–ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮೌನ ವಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆಂಬಲ ನೀಡಿದೆ’ ಎಂದು ದಸಂಸ (ಅಂಬೇಡ್ಕರ್ ವಾದ) ಬಣದ ಮಹೇಶ್ ಆರೋಪಿಸಿದರು.</p>.<p>ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ನಡೆದ ಧರಣಿಯಲ್ಲಿ ಅವರು<br />ಮಾತನಾಡಿದರು.</p>.<p>‘ಪ್ರಕರಣದಲ್ಲಿ ಯುವತಿಗೆ ರಕ್ಷಣೆ ನೀಡಬೇಕಿದ್ದ ಪೊಲೀಸರೇ ತಪ್ಪು ಮಾಡಿದ್ದಾರೆ. ಕುಟುಂಬದವರಿಗೆ ಶವ ಒಪ್ಪಿಸದೇ ರಾತ್ರೋರಾತ್ರಿ ಅಂತ್ಯಸಂಸ್ಕಾರ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೆ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಆಗಿರುವುದು ಗೊತ್ತಾಗುತ್ತದೆ’ ಎಂದು ಆಕ್ರೋಶ<br />ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪ್ರಧಾನ ಸಂಚಾಲಕ ಬನ್ನಹಳ್ಳಿ ಸೋಮಣ್ಣ ಮಾತನಾಡಿ, ‘ದೇಶದಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ, ಅತ್ಯಾಚಾರ ಘಟನೆಗಳು ಮರುಕಳಿಸುತ್ತಿವೆ. ಆಡಳಿತ ಯಂತ್ರ ಕುಸಿದಿದ್ದು, ಕಾನೂನಿನ ರಕ್ಷಣೆ ಇಲ್ಲವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಶಿವಕುಮಾರ್, ವೆಂಕಟೇಶ್, ದೊಡ್ಡಸಿದ್ದು ಹಾದನೂರು, ವಸಂತ ಹೊನ್ನೇನಹಳ್ಳಿ,<br />ಮಹದೇವ್, ಶೇಖರ್ ವೈ.ಪಿ. ಸಣ್ಣಕುಮಾರ್, ಗಜೇಂದ್ರ, ಎಚ್.ಎಸ್.ಲೋಕೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು: </strong>‘ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದ ಯುವತಿ ಅತ್ಯಾಚಾರ–ಕೊಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮೌನ ವಹಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆಂಬಲ ನೀಡಿದೆ’ ಎಂದು ದಸಂಸ (ಅಂಬೇಡ್ಕರ್ ವಾದ) ಬಣದ ಮಹೇಶ್ ಆರೋಪಿಸಿದರು.</p>.<p>ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ನಡೆದ ಧರಣಿಯಲ್ಲಿ ಅವರು<br />ಮಾತನಾಡಿದರು.</p>.<p>‘ಪ್ರಕರಣದಲ್ಲಿ ಯುವತಿಗೆ ರಕ್ಷಣೆ ನೀಡಬೇಕಿದ್ದ ಪೊಲೀಸರೇ ತಪ್ಪು ಮಾಡಿದ್ದಾರೆ. ಕುಟುಂಬದವರಿಗೆ ಶವ ಒಪ್ಪಿಸದೇ ರಾತ್ರೋರಾತ್ರಿ ಅಂತ್ಯಸಂಸ್ಕಾರ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೆ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಆಗಿರುವುದು ಗೊತ್ತಾಗುತ್ತದೆ’ ಎಂದು ಆಕ್ರೋಶ<br />ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪ್ರಧಾನ ಸಂಚಾಲಕ ಬನ್ನಹಳ್ಳಿ ಸೋಮಣ್ಣ ಮಾತನಾಡಿ, ‘ದೇಶದಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ದೌರ್ಜನ್ಯ, ಅತ್ಯಾಚಾರ ಘಟನೆಗಳು ಮರುಕಳಿಸುತ್ತಿವೆ. ಆಡಳಿತ ಯಂತ್ರ ಕುಸಿದಿದ್ದು, ಕಾನೂನಿನ ರಕ್ಷಣೆ ಇಲ್ಲವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಶಿವಕುಮಾರ್, ವೆಂಕಟೇಶ್, ದೊಡ್ಡಸಿದ್ದು ಹಾದನೂರು, ವಸಂತ ಹೊನ್ನೇನಹಳ್ಳಿ,<br />ಮಹದೇವ್, ಶೇಖರ್ ವೈ.ಪಿ. ಸಣ್ಣಕುಮಾರ್, ಗಜೇಂದ್ರ, ಎಚ್.ಎಸ್.ಲೋಕೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>