<p><strong>ಹುಣಸೂರು</strong>: ‘ಕೃಷಿ ಕುಟುಂಬದ ಯುವಕರು ಉದ್ಯೋಗಕ್ಕಾಗಿ ನಗರಗಳತ್ತ ಮುಖ ಮಾಡದೇ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಬೇಸಾಯದಲ್ಲಿ ತೊಡಗಿ, ಮಾದರಿ ರೈತರಾಗಬೇಕು’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ರಾಮಪಟ್ಟಣ ಗ್ರಾಮದಲ್ಲಿ ರೈತ ಸಂಘದ ಶಾಖೆ ಉದ್ಘಾಟಿಸಿ, ‘ರಾಮಪಟ್ಟಣದ ಪ್ರಗತಿಪರ ರೈತರು ಸಂಘದೊಂದಿಗೆ ನಿರಂತರವಾಗಿ ಗುರುತಿಸಿಕೊಂಡು ಪ್ರತಿಯೊಂದು ಹೋರಾಟದಲ್ಲಿ ಭಾಗವಹಿಸಿ ರೈತರ ಧ್ವನಿಯಾಗಿದ್ದಾರೆ. ಈ ಗ್ರಾಮ ಹುಣಸೂರು ನಗರಕ್ಕೆ ಹತ್ತಿರವಿದ್ದು, ಲಕ್ಷ್ಮಣತೀರ್ಥ ನದಿ ದಂಡೆಯಲ್ಲಿರುವುದರಿಂದ ಭೂಮಿ ಫಲವತ್ತತೆಯಿಂದ ಕೂಡಿದೆ. ನಮ್ಮ ಪೂರ್ವಿಕರು ಕೊಡುಗೆ ನೀಡಿದ ಕೃಷಿ ಭೂಮಿ ಮಾರಾಟ ಮಾಡಿ ಉದ್ಯೋಗಕ್ಕಾಗಿ ನಗರಗಳತ್ತ ಹೋಗಿ ಸ್ವಾವಲಂಬಿ ಬದುಕು ಕೈಚೆಲ್ಲಬೇಡಿ’ ಎಂದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಮಾತನಾಡಿ, ಫಲವತ್ತಾದ ಭೂಮಿಯನ್ನು ಮಾರಾಟ ಮಾಡಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸದೆ ಅನ್ನದಾತರಾಗಿ ಬದುಕು ಕಟ್ಟಿಕೊಳ್ಳಲು ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಗುರುಪುರ ಆಲಿಜಾನ್, ಅಗ್ರಹಾರ ರಾಮೇಗೌ, ಈಶ್ವರೇಗೌಡ, ರಾಜೇಗೌಡ, ರವಿಗೌಡ, ಸತೀಶ್, ಸಣ್ಣೇಗೌಡ, ರಂಗೇಗೌಡ, ಕಾಳೇಗೌಡ, ಮೊಗಣ್ಣ, ಮಲ್ಲೇಶ್ ಹಾಗೂ ಮುಖಂಡರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ಕೃಷಿ ಕುಟುಂಬದ ಯುವಕರು ಉದ್ಯೋಗಕ್ಕಾಗಿ ನಗರಗಳತ್ತ ಮುಖ ಮಾಡದೇ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಬೇಸಾಯದಲ್ಲಿ ತೊಡಗಿ, ಮಾದರಿ ರೈತರಾಗಬೇಕು’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ರಾಮಪಟ್ಟಣ ಗ್ರಾಮದಲ್ಲಿ ರೈತ ಸಂಘದ ಶಾಖೆ ಉದ್ಘಾಟಿಸಿ, ‘ರಾಮಪಟ್ಟಣದ ಪ್ರಗತಿಪರ ರೈತರು ಸಂಘದೊಂದಿಗೆ ನಿರಂತರವಾಗಿ ಗುರುತಿಸಿಕೊಂಡು ಪ್ರತಿಯೊಂದು ಹೋರಾಟದಲ್ಲಿ ಭಾಗವಹಿಸಿ ರೈತರ ಧ್ವನಿಯಾಗಿದ್ದಾರೆ. ಈ ಗ್ರಾಮ ಹುಣಸೂರು ನಗರಕ್ಕೆ ಹತ್ತಿರವಿದ್ದು, ಲಕ್ಷ್ಮಣತೀರ್ಥ ನದಿ ದಂಡೆಯಲ್ಲಿರುವುದರಿಂದ ಭೂಮಿ ಫಲವತ್ತತೆಯಿಂದ ಕೂಡಿದೆ. ನಮ್ಮ ಪೂರ್ವಿಕರು ಕೊಡುಗೆ ನೀಡಿದ ಕೃಷಿ ಭೂಮಿ ಮಾರಾಟ ಮಾಡಿ ಉದ್ಯೋಗಕ್ಕಾಗಿ ನಗರಗಳತ್ತ ಹೋಗಿ ಸ್ವಾವಲಂಬಿ ಬದುಕು ಕೈಚೆಲ್ಲಬೇಡಿ’ ಎಂದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಮಾತನಾಡಿ, ಫಲವತ್ತಾದ ಭೂಮಿಯನ್ನು ಮಾರಾಟ ಮಾಡಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸದೆ ಅನ್ನದಾತರಾಗಿ ಬದುಕು ಕಟ್ಟಿಕೊಳ್ಳಲು ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಗುರುಪುರ ಆಲಿಜಾನ್, ಅಗ್ರಹಾರ ರಾಮೇಗೌ, ಈಶ್ವರೇಗೌಡ, ರಾಜೇಗೌಡ, ರವಿಗೌಡ, ಸತೀಶ್, ಸಣ್ಣೇಗೌಡ, ರಂಗೇಗೌಡ, ಕಾಳೇಗೌಡ, ಮೊಗಣ್ಣ, ಮಲ್ಲೇಶ್ ಹಾಗೂ ಮುಖಂಡರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>