<p><strong>ಹುಣಸೂರು</strong>: ‘ಹೆಣ್ಣು ಮಕ್ಕಳು ಶಿಕ್ಷಣ ಪಡೆದಲ್ಲಿ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರವಾಗಲಿದೆ’ ಎಂದು ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಗಾವಡಗೆರೆ ಹೋಬಳಿಯ ಗುರುಲಿಂಗ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ನಡೆದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಹೆಣ್ಣು ಮಕ್ಕಳನ್ನು ಮನೆಯ ಕೆಲಸಕ್ಕೆ ಸೀಮಿತಗೊಳಿಸುವ ಕಾಲ ಮುಗಿದಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕವಿದೆ. ಆ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಲವು ವರ್ಷಗಳಿಂದ ನಡೆಸಿ, ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರನ್ನು ಜಾಗೃತಗೊಳಿಸಿ ಆರ್ಥಿಕ ಶಕ್ತಿ ಮತ್ತು ಗುಡಿ ಕೈಗಾರಿಕೆ ಹಮ್ಮಿಕೊಳ್ಳುವ ಮೂಲಕ ಸದೃಢಗೊಳಿಸುವ ಪ್ರಯತ್ನ ನಡೆದಿದೆ’ ಎಂದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಹಕಾರಿ ಸಂಘ, ಸ್ತ್ರೀ ಶಕ್ತಿ ಚಟುವಟಿಕೆ ಒಳಗೊಂಡಂತೆ ಅನೇಕ ಗುಡಿ ಕೈಗಾರಿಕೆಗೆ ಒತ್ತು ನೀಡಿ ಆರ್ಥಿಕ ಸ್ವಾವಲಂಬಿಯಾಗಲು ಊರುಗೋಲಾಗಿದೆ. ಮಹಿಳೆಯರನ್ನು ಅಧಿಕಾರ ವಿಕೇಂದ್ರೀಕರಣದಲ್ಲಿ ಪಾಲುದಾರರನ್ನಾಗಿಸಿ ಸಮರ್ಪಕವಾಗಿ ತೊಡಗಿಸಿಕೊಳ್ಳುವುದರೊಂದಿಗೆ ಕೌಟುಂಬಿಕ ಜೀವನ ಉತ್ತಮಗೊಳಿಸುವ ಕೆಲಸ ನಡೆಸಿದೆ’ ಎಂದು ತಿಳಿಸಿದರು.</p>.<p>ಟಿಎಪಿಸಿಎಂಎಸ್ ಉಪಾಧ್ಯಕ್ಷ ಹೊನ್ನಪ್ಪರಾವ್ ಕಾಳಿಂಗೆ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇದರೊಂದಿಗೆ ಧಾರ್ಮಿಕವಾಗಿಯೂ ಹಿಂದು ಸಂಸ್ಕೃತಿ ಸಂಪ್ರದಾಯವನ್ನು ಮೈಗೂಡಿಸಿಕೊಳ್ಳುವ ದಿಕ್ಕಿನಲ್ಲಿ ಸಂಸ್ಥೆ ಕಾರ್ಯೋನ್ಮುಖವಾಗಿದೆ ಎಂದರು.</p>.<p>ಗ್ರಾ.ಪಂ ಅಧ್ಯಕ್ಷ ಲೋಕೇಶ್, ತಾ.ಪಂ ಮಾಜಿ ಸದಸ್ಯ ಗಣಪತಿ ಇಂಡೋಳ್ಕರ್, ಕೃಷ್ಣೋಜಿ ರಾವ್ ಕದಂ ಮಾತನಾಡಿದರು. ಲಕ್ಷ್ಮೀಪೂಜಾ ಸಮಿತಿ ಅದ್ಯಕ್ಷೆ ಶೋಭಾ ಬಾಯಿ, ನಾರಾಯಣಶೆಟ್ಟಿ, ಭೂಮಿಕಾ, ಶಶಿಕಲಾ, ಲಕ್ಷ್ಮಿ, ಮಣಿ, ನೇತ್ರಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ಹೆಣ್ಣು ಮಕ್ಕಳು ಶಿಕ್ಷಣ ಪಡೆದಲ್ಲಿ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರವಾಗಲಿದೆ’ ಎಂದು ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಗಾವಡಗೆರೆ ಹೋಬಳಿಯ ಗುರುಲಿಂಗ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ನಡೆದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಹೆಣ್ಣು ಮಕ್ಕಳನ್ನು ಮನೆಯ ಕೆಲಸಕ್ಕೆ ಸೀಮಿತಗೊಳಿಸುವ ಕಾಲ ಮುಗಿದಿದೆ. ಸಮಾಜದಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕವಿದೆ. ಆ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಲವು ವರ್ಷಗಳಿಂದ ನಡೆಸಿ, ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರನ್ನು ಜಾಗೃತಗೊಳಿಸಿ ಆರ್ಥಿಕ ಶಕ್ತಿ ಮತ್ತು ಗುಡಿ ಕೈಗಾರಿಕೆ ಹಮ್ಮಿಕೊಳ್ಳುವ ಮೂಲಕ ಸದೃಢಗೊಳಿಸುವ ಪ್ರಯತ್ನ ನಡೆದಿದೆ’ ಎಂದರು.</p>.<p>‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಹಕಾರಿ ಸಂಘ, ಸ್ತ್ರೀ ಶಕ್ತಿ ಚಟುವಟಿಕೆ ಒಳಗೊಂಡಂತೆ ಅನೇಕ ಗುಡಿ ಕೈಗಾರಿಕೆಗೆ ಒತ್ತು ನೀಡಿ ಆರ್ಥಿಕ ಸ್ವಾವಲಂಬಿಯಾಗಲು ಊರುಗೋಲಾಗಿದೆ. ಮಹಿಳೆಯರನ್ನು ಅಧಿಕಾರ ವಿಕೇಂದ್ರೀಕರಣದಲ್ಲಿ ಪಾಲುದಾರರನ್ನಾಗಿಸಿ ಸಮರ್ಪಕವಾಗಿ ತೊಡಗಿಸಿಕೊಳ್ಳುವುದರೊಂದಿಗೆ ಕೌಟುಂಬಿಕ ಜೀವನ ಉತ್ತಮಗೊಳಿಸುವ ಕೆಲಸ ನಡೆಸಿದೆ’ ಎಂದು ತಿಳಿಸಿದರು.</p>.<p>ಟಿಎಪಿಸಿಎಂಎಸ್ ಉಪಾಧ್ಯಕ್ಷ ಹೊನ್ನಪ್ಪರಾವ್ ಕಾಳಿಂಗೆ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇದರೊಂದಿಗೆ ಧಾರ್ಮಿಕವಾಗಿಯೂ ಹಿಂದು ಸಂಸ್ಕೃತಿ ಸಂಪ್ರದಾಯವನ್ನು ಮೈಗೂಡಿಸಿಕೊಳ್ಳುವ ದಿಕ್ಕಿನಲ್ಲಿ ಸಂಸ್ಥೆ ಕಾರ್ಯೋನ್ಮುಖವಾಗಿದೆ ಎಂದರು.</p>.<p>ಗ್ರಾ.ಪಂ ಅಧ್ಯಕ್ಷ ಲೋಕೇಶ್, ತಾ.ಪಂ ಮಾಜಿ ಸದಸ್ಯ ಗಣಪತಿ ಇಂಡೋಳ್ಕರ್, ಕೃಷ್ಣೋಜಿ ರಾವ್ ಕದಂ ಮಾತನಾಡಿದರು. ಲಕ್ಷ್ಮೀಪೂಜಾ ಸಮಿತಿ ಅದ್ಯಕ್ಷೆ ಶೋಭಾ ಬಾಯಿ, ನಾರಾಯಣಶೆಟ್ಟಿ, ಭೂಮಿಕಾ, ಶಶಿಕಲಾ, ಲಕ್ಷ್ಮಿ, ಮಣಿ, ನೇತ್ರಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>