<p><strong>ಹುಣಸೂರು/ ಎಚ್.ಡಿ.ಕೋಟೆ:</strong> ಎರಡು ಪ್ರತ್ಯೇಕ ಪ್ರಕರಣದಲ್ಲಿ ಬುಧವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.</p>.<p>ಹುಣಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದ್ದು, ಸಿಡಿಲಿಗೆ ಕೃಷಿ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.</p>.<p>ತಾಲ್ಲೂಕಿನ ಹೊಸಪುರ ಗ್ರಾಮದಲ್ಲಿ ಹೊಗೆಸೊಪ್ಪು ನಾಟಿ ಕೆಲಸ ನಿರ್ವಹಿಸುತ್ತಿದ್ದ ಯಶೋದಮ್ಮ (50) ಮೃತರು. ಹಠಾತನೆ ಮಳೆ ಆರಂಭವಾಗಿದ್ದು, ಜಮೀನಿನಿಂದ ಹಿಂದಿರುಗುತ್ತಿದ್ದರು. ಆ ಸಮಯದಲ್ಲಿ ಸಿಡಿಲು ಬಡಿತಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ ಬೋರೇಗೌಡ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.</p>.<p>ಭೇಟಿ: ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ತಾಲ್ಲೂಕು ಆಡಳಿತಕ್ಕೆ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದರು.</p>.<p>ಪರಿಹಾರ: ಸ್ಥಳಕ್ಕೆ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಣಾಧಿಕಾರಿ ಶ್ರೀಧರ್ ಮತ್ತು ಗ್ರಾಮಲೆಕ್ಕಿಗರ ತಂಡ ಭೇಟಿ ನೀಡಿ ಸ್ಥಳ ಮಹಜರ್ ನಡೆಸಿ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮೃತರ ಕುಟುಂಬಕ್ಕೆ ಪರಿಹಾರವನ್ನು ಕಂದಾಯ ಇಲಾಖೆ ವತಿಯಿಂದ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಜಾನುವಾರು ಮೇಯಿಸಲು ಹೋಗಿದ್ದ ವೇಳೆ ಸಾವು</p>.<p>ಎಚ್.ಡಿ.ಕೋಟೆ: ತಾಲ್ಲೂಕಿನ ಎನ್. ಬೆಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಳದ ಹಾಡಿಯ ನಿವಾಸಿ ಅಪ್ಪಯ್ಯ(60) ಜಾನುವಾರು ಮೇಯಿಸಲು ಹೋಗಿದ್ದ ಸಂದರ್ಭ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಧ್ಯಾಹ್ನ ಒಂದು ಗಂಟೆಯಲ್ಲಿ ಗುಡುಗುಸಹಿತ ಮಳೆಯಾಗುತ್ತಿದ್ದು, ಆ ವೇಳೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ನಿವಾಸಿ ಸೋಮೇಶ್ ತಿಳಿಸಿರುತ್ತಾರೆ.</p>.<p>ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಅಪ್ಪಯ್ಯ ಅವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-38-1362839789</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು/ ಎಚ್.ಡಿ.ಕೋಟೆ:</strong> ಎರಡು ಪ್ರತ್ಯೇಕ ಪ್ರಕರಣದಲ್ಲಿ ಬುಧವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.</p>.<p>ಹುಣಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದ್ದು, ಸಿಡಿಲಿಗೆ ಕೃಷಿ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.</p>.<p>ತಾಲ್ಲೂಕಿನ ಹೊಸಪುರ ಗ್ರಾಮದಲ್ಲಿ ಹೊಗೆಸೊಪ್ಪು ನಾಟಿ ಕೆಲಸ ನಿರ್ವಹಿಸುತ್ತಿದ್ದ ಯಶೋದಮ್ಮ (50) ಮೃತರು. ಹಠಾತನೆ ಮಳೆ ಆರಂಭವಾಗಿದ್ದು, ಜಮೀನಿನಿಂದ ಹಿಂದಿರುಗುತ್ತಿದ್ದರು. ಆ ಸಮಯದಲ್ಲಿ ಸಿಡಿಲು ಬಡಿತಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ ಬೋರೇಗೌಡ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.</p>.<p>ಭೇಟಿ: ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ತಾಲ್ಲೂಕು ಆಡಳಿತಕ್ಕೆ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದರು.</p>.<p>ಪರಿಹಾರ: ಸ್ಥಳಕ್ಕೆ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಣಾಧಿಕಾರಿ ಶ್ರೀಧರ್ ಮತ್ತು ಗ್ರಾಮಲೆಕ್ಕಿಗರ ತಂಡ ಭೇಟಿ ನೀಡಿ ಸ್ಥಳ ಮಹಜರ್ ನಡೆಸಿ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮೃತರ ಕುಟುಂಬಕ್ಕೆ ಪರಿಹಾರವನ್ನು ಕಂದಾಯ ಇಲಾಖೆ ವತಿಯಿಂದ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಜಾನುವಾರು ಮೇಯಿಸಲು ಹೋಗಿದ್ದ ವೇಳೆ ಸಾವು</p>.<p>ಎಚ್.ಡಿ.ಕೋಟೆ: ತಾಲ್ಲೂಕಿನ ಎನ್. ಬೆಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಳದ ಹಾಡಿಯ ನಿವಾಸಿ ಅಪ್ಪಯ್ಯ(60) ಜಾನುವಾರು ಮೇಯಿಸಲು ಹೋಗಿದ್ದ ಸಂದರ್ಭ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮಧ್ಯಾಹ್ನ ಒಂದು ಗಂಟೆಯಲ್ಲಿ ಗುಡುಗುಸಹಿತ ಮಳೆಯಾಗುತ್ತಿದ್ದು, ಆ ವೇಳೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ನಿವಾಸಿ ಸೋಮೇಶ್ ತಿಳಿಸಿರುತ್ತಾರೆ.</p>.<p>ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಅಪ್ಪಯ್ಯ ಅವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-38-1362839789</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>