<p>ಹುಣಸೂರು: ‘ಬಾಬು ಜಗಜೀವನರಾಂ ಮತ್ತು ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಒಟ್ಟಿಗೆ ಆಚರಿಸುವ ಇಚ್ಛೆ ಇದ್ದರೂ ಸರ್ಕಾರದ ನಿಯಮಾನುಸಾರ ಆಯಾ ದಿನಗಳಂದೇ ಇಬ್ಬರು ಮಹನೀಯರ ಜಯಂತಿ ಪ್ರತ್ಯೇಕವಾಗಿ ಆಚರಿಸಲು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಬದ್ಧ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ನಗರದ ಬಾಬು ಜಗಜೀವನರಾಂ ಭವನದಲ್ಲಿ ಮಂಗಳವಾರ ನಡೆದ ಜಯಂತಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಜಯಂತಿಗಳನ್ನು ಒಟ್ಟಿಗೆ ಆಚರಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದ್ದು ಒಳ್ಳೆಬೆಳವಣಿಗೆ’ ಎಂದರು.</p>.<p>ನಗರಸಭೆ ಮಾಜಿ ಸದಸ್ಯ ಸತೀಶ್ ಕುಮಾರ್ ಮಾತನಾಡಿ, ‘ಬಾಬು ಜಗಜೀವನರಾಂ ಭವನ ಕಟ್ಟಡ ಕಾಮಗಾರಿ ಆರಂಭವಾಗಿ 15 ವರ್ಷ ಕಳೆದಿದ್ದು, ಪೂರ್ಣಗೊಂಡಿಲ್ಲ’ ಎಂದರು.</p>.<p>ಶಾಸಕ ಉತ್ತರಿಸಿ, ‘ಭವನ ಪೂರ್ಣಗೊಳಿಸಲು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ₹ 20 ಲಕ್ಷ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸದನದಲ್ಲಿ ₹ 25 ಲಕ್ಷ ನೀಡುವ ಭರವಸೆ ನೀಡಿದ್ದಾರೆ’ ಎಂದರು.</p>.<p>ಕಟ್ಟೆಮಳಲವಾಡಿ ಗ್ರಾಮದ ಮುಖಂಡ ಆಂಜನೇಯ ಮಾತನಾಡಿ, ‘ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಬಿ.ಆರ್.ಅಂಬೇಡ್ಕರ್ ಪುತ್ಥಳಿ ಕಾಮಗಾರಿಗೆ ಅನುದಾನ ನೀಡುವ ಭರವಸೆಯೂ ಈಡೇರಿಸಿಲ್ಲ’ ಎಂದರು.</p>.<p>ಸಭೆಯಲ್ಲಿ ದಲಿತ ಮುಖಂಡರಾದ ನಿಂಗರಾಜ್ ಮಲ್ಲಾಡಿ, ರಾಜು, ಕಿರಂಗೂರು ಸ್ವಾಮಿ, ಬಸವಲಿಂಗಯ್ಯ, ಬೆಳ್ತೂರು ವೆಂಕಟೇಶ್, ಡಿ.ಕುಮಾರ್, ಶಿವಣ್ಣ, ಬಲ್ಲೇನಹಳ್ಳಿ ಕೆಂಪರಾಜು, ಕೆಂಪರಾಜು, ತಹಶೀಲ್ದಾರ್ ಮಂಜುನಾಥ್, ನಗರಸಭೆ ಆಯುಕ್ತೆ ಮಾನಸ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಹೊಂಗಯ್ಯ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-38-326075480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ‘ಬಾಬು ಜಗಜೀವನರಾಂ ಮತ್ತು ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಒಟ್ಟಿಗೆ ಆಚರಿಸುವ ಇಚ್ಛೆ ಇದ್ದರೂ ಸರ್ಕಾರದ ನಿಯಮಾನುಸಾರ ಆಯಾ ದಿನಗಳಂದೇ ಇಬ್ಬರು ಮಹನೀಯರ ಜಯಂತಿ ಪ್ರತ್ಯೇಕವಾಗಿ ಆಚರಿಸಲು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಬದ್ಧ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ನಗರದ ಬಾಬು ಜಗಜೀವನರಾಂ ಭವನದಲ್ಲಿ ಮಂಗಳವಾರ ನಡೆದ ಜಯಂತಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಜಯಂತಿಗಳನ್ನು ಒಟ್ಟಿಗೆ ಆಚರಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದ್ದು ಒಳ್ಳೆಬೆಳವಣಿಗೆ’ ಎಂದರು.</p>.<p>ನಗರಸಭೆ ಮಾಜಿ ಸದಸ್ಯ ಸತೀಶ್ ಕುಮಾರ್ ಮಾತನಾಡಿ, ‘ಬಾಬು ಜಗಜೀವನರಾಂ ಭವನ ಕಟ್ಟಡ ಕಾಮಗಾರಿ ಆರಂಭವಾಗಿ 15 ವರ್ಷ ಕಳೆದಿದ್ದು, ಪೂರ್ಣಗೊಂಡಿಲ್ಲ’ ಎಂದರು.</p>.<p>ಶಾಸಕ ಉತ್ತರಿಸಿ, ‘ಭವನ ಪೂರ್ಣಗೊಳಿಸಲು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ₹ 20 ಲಕ್ಷ ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸದನದಲ್ಲಿ ₹ 25 ಲಕ್ಷ ನೀಡುವ ಭರವಸೆ ನೀಡಿದ್ದಾರೆ’ ಎಂದರು.</p>.<p>ಕಟ್ಟೆಮಳಲವಾಡಿ ಗ್ರಾಮದ ಮುಖಂಡ ಆಂಜನೇಯ ಮಾತನಾಡಿ, ‘ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಬಿ.ಆರ್.ಅಂಬೇಡ್ಕರ್ ಪುತ್ಥಳಿ ಕಾಮಗಾರಿಗೆ ಅನುದಾನ ನೀಡುವ ಭರವಸೆಯೂ ಈಡೇರಿಸಿಲ್ಲ’ ಎಂದರು.</p>.<p>ಸಭೆಯಲ್ಲಿ ದಲಿತ ಮುಖಂಡರಾದ ನಿಂಗರಾಜ್ ಮಲ್ಲಾಡಿ, ರಾಜು, ಕಿರಂಗೂರು ಸ್ವಾಮಿ, ಬಸವಲಿಂಗಯ್ಯ, ಬೆಳ್ತೂರು ವೆಂಕಟೇಶ್, ಡಿ.ಕುಮಾರ್, ಶಿವಣ್ಣ, ಬಲ್ಲೇನಹಳ್ಳಿ ಕೆಂಪರಾಜು, ಕೆಂಪರಾಜು, ತಹಶೀಲ್ದಾರ್ ಮಂಜುನಾಥ್, ನಗರಸಭೆ ಆಯುಕ್ತೆ ಮಾನಸ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಹೊಂಗಯ್ಯ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-38-326075480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>