<p>ಹುಣಸೂರು: ಇಲ್ಲಿನ ನಗರಸಭೆಯಿಂದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದ ಅಡಿಯಲ್ಲಿ ಆಯೋಜಿಸಿದ್ದ ‘ಸ್ವಚ್ಛತೆಗಾಗಿ ಓಟ’ ಕಾರ್ಯಕ್ರಮದಲ್ಲಿ ಮೈಸೂರು, ಕೊಡಗು ಜಿಲ್ಲೆಯಿಂದ ಆಸಕ್ತ ಹವ್ಯಾಸಿ ಓಟಗಾರರು ಭಾಗವಹಿಸಿ ಗಮನ ಸೆಳೆದರು.</p>.<p>ನಗರದ ಸಂವಿಧಾನ ವೃತ್ತದಲ್ಲಿ ಮಂಗಳವಾರ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಡಿವೈಎಸ್ಪಿ ರವಿ ಅವರು ಚಾಲನೆ ನೀಡಿದರು. ನಿಗದಿಗೊಳಿಸಿದ ಮಾರ್ಗದಲ್ಲಿ ತೆರಳಿದ ಓಟಗಾರರು ಸಂವಿಧಾನ ವೃತ್ತದಲ್ಲಿ ಓಟ ಪೂರ್ಣಗೊಳಿಸಿದರು.</p>.<p>ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮಾತನಾಡಿ, ‘ಸ್ವಚ್ಛತೆ ಕಾದುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಹೆಗಲಿಗಿದ್ದು, ನಾವು ನಮ್ಮ ಪರಿಸರವನ್ನು ಶುಚಿತ್ವದಿಂದ ಕಾದುಕೊಂಡಲ್ಲಿ ಆರೋಗ್ಯದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ’ ಎಂದರು.</p>.<p>‘ನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡುವ ಮನಸ್ಥಿತಿ ಪ್ರತಿಯೊಬ್ಬರಲ್ಲಿಯೂ ಇರಬೇಕು. ತಾತ್ಸಾರದ ತ್ಯಾಜ್ಯ ನಿರ್ವಹಣೆ ನಗರಸಭೆಗೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ’ ಎಂದರು.</p>.<p>ಡಿವೈಎಸ್ಪಿ ರವಿ ಮಾತನಾಡಿ, ‘ಸ್ವಚ್ಛತೆ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರಿಗೆ ನಾಗರಿಕರೂ ಸಹಾಯ ಹಸ್ತ ನೀಡಬೇಕು. ತ್ಯಾಜ್ಯ ಸಂಗ್ರಹದ ವಾಹನ ಪ್ರತಿ ಮನೆಗೆ ಬರುತ್ತಿದ್ದು ಹಸಿ ಮತ್ತು ಒಣ ಕಸ ವಿಂಗಡಿಸಿ ಪೌರಕಾರ್ಮಿಕರಿಗೆ ನೀಡಿ ನಗರ ಶುಚಿತ್ವ ಕಾದುಕೊಳ್ಳಲು ಕೈ ಜೋಡಿಸಿ’ ಎಂದರು.</p>.<p>ಬಹುಮಾನ: ಸ್ವಚ್ಛತೆಗಾಗಿ ಓಟ ಕಾರ್ಯಕ್ರಮದಲ್ಲಿ ಪುರುಷರ ವಿಭಾಗದಲ್ಲಿ ಶ್ರೀಧರ್, ನಿತಿನ್, ಪ್ರಸನ್ನಕುಮಾರ್ ಹಾಗೂ ಮಹಿಳೆಯರ ವಿಭಾಗದಲ್ಲಿ ರಾಣಿ, ಅನಿತಾ ಮತ್ತು ಅಂಕಿತಾ ಬಾಯಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತಿಯ ಸ್ಥಾನ ಪಡೆದರು. ನಗರಸಭೆಯಿಂದ ಕ್ರಮವಾಗಿ ₹ 5 ಸಾವಿರ, ₹3 ಸಾವಿರ ಮತ್ತು ₹2 ಸಾವಿರ ಮತ್ತು ಪಾರಿತೋಷಕ ನೀಡಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಪರಿಸರ ಎಂಜಿನಿಯರ್ ಸೌಮ್ಯ, ಸರೋಜಿನಿ ವಿಕ್ರಂ, ಶ್ರೀನಾಥ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-38-753610532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ಇಲ್ಲಿನ ನಗರಸಭೆಯಿಂದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದ ಅಡಿಯಲ್ಲಿ ಆಯೋಜಿಸಿದ್ದ ‘ಸ್ವಚ್ಛತೆಗಾಗಿ ಓಟ’ ಕಾರ್ಯಕ್ರಮದಲ್ಲಿ ಮೈಸೂರು, ಕೊಡಗು ಜಿಲ್ಲೆಯಿಂದ ಆಸಕ್ತ ಹವ್ಯಾಸಿ ಓಟಗಾರರು ಭಾಗವಹಿಸಿ ಗಮನ ಸೆಳೆದರು.</p>.<p>ನಗರದ ಸಂವಿಧಾನ ವೃತ್ತದಲ್ಲಿ ಮಂಗಳವಾರ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಡಿವೈಎಸ್ಪಿ ರವಿ ಅವರು ಚಾಲನೆ ನೀಡಿದರು. ನಿಗದಿಗೊಳಿಸಿದ ಮಾರ್ಗದಲ್ಲಿ ತೆರಳಿದ ಓಟಗಾರರು ಸಂವಿಧಾನ ವೃತ್ತದಲ್ಲಿ ಓಟ ಪೂರ್ಣಗೊಳಿಸಿದರು.</p>.<p>ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮಾತನಾಡಿ, ‘ಸ್ವಚ್ಛತೆ ಕಾದುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಹೆಗಲಿಗಿದ್ದು, ನಾವು ನಮ್ಮ ಪರಿಸರವನ್ನು ಶುಚಿತ್ವದಿಂದ ಕಾದುಕೊಂಡಲ್ಲಿ ಆರೋಗ್ಯದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ’ ಎಂದರು.</p>.<p>‘ನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡುವ ಮನಸ್ಥಿತಿ ಪ್ರತಿಯೊಬ್ಬರಲ್ಲಿಯೂ ಇರಬೇಕು. ತಾತ್ಸಾರದ ತ್ಯಾಜ್ಯ ನಿರ್ವಹಣೆ ನಗರಸಭೆಗೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ’ ಎಂದರು.</p>.<p>ಡಿವೈಎಸ್ಪಿ ರವಿ ಮಾತನಾಡಿ, ‘ಸ್ವಚ್ಛತೆ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರಿಗೆ ನಾಗರಿಕರೂ ಸಹಾಯ ಹಸ್ತ ನೀಡಬೇಕು. ತ್ಯಾಜ್ಯ ಸಂಗ್ರಹದ ವಾಹನ ಪ್ರತಿ ಮನೆಗೆ ಬರುತ್ತಿದ್ದು ಹಸಿ ಮತ್ತು ಒಣ ಕಸ ವಿಂಗಡಿಸಿ ಪೌರಕಾರ್ಮಿಕರಿಗೆ ನೀಡಿ ನಗರ ಶುಚಿತ್ವ ಕಾದುಕೊಳ್ಳಲು ಕೈ ಜೋಡಿಸಿ’ ಎಂದರು.</p>.<p>ಬಹುಮಾನ: ಸ್ವಚ್ಛತೆಗಾಗಿ ಓಟ ಕಾರ್ಯಕ್ರಮದಲ್ಲಿ ಪುರುಷರ ವಿಭಾಗದಲ್ಲಿ ಶ್ರೀಧರ್, ನಿತಿನ್, ಪ್ರಸನ್ನಕುಮಾರ್ ಹಾಗೂ ಮಹಿಳೆಯರ ವಿಭಾಗದಲ್ಲಿ ರಾಣಿ, ಅನಿತಾ ಮತ್ತು ಅಂಕಿತಾ ಬಾಯಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತಿಯ ಸ್ಥಾನ ಪಡೆದರು. ನಗರಸಭೆಯಿಂದ ಕ್ರಮವಾಗಿ ₹ 5 ಸಾವಿರ, ₹3 ಸಾವಿರ ಮತ್ತು ₹2 ಸಾವಿರ ಮತ್ತು ಪಾರಿತೋಷಕ ನೀಡಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತೆ ಮಾನಸ, ಪರಿಸರ ಎಂಜಿನಿಯರ್ ಸೌಮ್ಯ, ಸರೋಜಿನಿ ವಿಕ್ರಂ, ಶ್ರೀನಾಥ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-38-753610532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>