<p><strong>ಹುಣಸೂರು:</strong> ತಾಲ್ಲೂಕಿನ ವಿಶ್ವಶಾಂತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ ಸ್ವಾಮೀಜಿ ನಿಧನದ ಬಳಿಕ ಸಂಸ್ಥೆ ಆಡಳಿತ ವ್ಯವಸ್ಥೆ ಮತ್ತು ಆಸ್ತಿ ಬೇರೆಯವರ ಪಾಲಾಗುತ್ತಿದ್ದು, ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಯನ್ನು ಸುಪರ್ದಿಗೆ ಪಡೆದು ಹಿಂದುಳಿದ ವರ್ಗದವರ ಆಸ್ತಿಯನ್ನಾಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಹರಿಹರ ಆನಂದಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಹುಣಸೂರು ತಾಲ್ಲೂಕಿನ ರತ್ನಾಪುರಿ ಗ್ರಾಮದಲ್ಲಿ 1964 ರಲ್ಲಿ ಲಕ್ಕಪ್ಪ ಸ್ವಾಮೀಜಿ ಅವರ ನೇತೃತ್ವದಲ್ಲಿ ಸ್ಥಾಪನೆಗೊಂಡ ವಿಶ್ವ ಶಾಂತಿ ವಿದ್ಯಾಸಂಸ್ಥೆಗೆ ರತ್ನಾಪುರಿ ಗ್ರಾಮದಲ್ಲಿ 40 ಎಕರೆ, ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗವಾಡಿ ಗ್ರಾಮದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ನ 200 ಎಕರೆ ಜಾಗ, ಮೈಸೂರಿನ ಕಾಮಾಕ್ಷಿ ಆಸ್ಪತ್ರೆ ಎದುರು 1.20 ಎಕರೆ ಜಾಗ ಸರ್ಕಾರದಿಂದ ಗುತ್ತಿಗೆ ಆಧಾರದಲ್ಲಿ ಮಂಜೂರು ಮಾಡಲಾಗಿತ್ತು. ಸ್ವಾಮೀಜಿ ನಿಧನದ ಬಳಿಕ ಸಂಸ್ಥೆ ಆಡಳಿತ ಸಮಿತಿಯಲ್ಲಿ ಅವರ ಕುಟುಂಬ ಸದಸ್ಯರಷ್ಟೇ ಇದ್ದು, ಶೈಕ್ಷಣಿಕ ಪ್ರಗತಿ ಕುಸಿದಿದೆ ಎಂದು ಆಕ್ಷೇಪಿಸಿದರು.</p>.<p>ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಗಮನಕ್ಕೆ ತರಲಾಗಿದ್ದು, ಸರ್ಕಾರ ಸ್ವಾಧೀನಕ್ಕೆ ಪಡೆದು ಮಾದರಿ ಶಿಕ್ಷಣ ಸಂಸ್ಥೆ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಮಹದೇಸ್ವಾಮಿ, ತಟ್ಟೆಕೆರೆ ನಾಗರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-38-1080281112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ತಾಲ್ಲೂಕಿನ ವಿಶ್ವಶಾಂತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ ಸ್ವಾಮೀಜಿ ನಿಧನದ ಬಳಿಕ ಸಂಸ್ಥೆ ಆಡಳಿತ ವ್ಯವಸ್ಥೆ ಮತ್ತು ಆಸ್ತಿ ಬೇರೆಯವರ ಪಾಲಾಗುತ್ತಿದ್ದು, ರಾಜ್ಯ ಸರ್ಕಾರ ಶಿಕ್ಷಣ ಸಂಸ್ಥೆಯನ್ನು ಸುಪರ್ದಿಗೆ ಪಡೆದು ಹಿಂದುಳಿದ ವರ್ಗದವರ ಆಸ್ತಿಯನ್ನಾಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಹರಿಹರ ಆನಂದಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಹುಣಸೂರು ತಾಲ್ಲೂಕಿನ ರತ್ನಾಪುರಿ ಗ್ರಾಮದಲ್ಲಿ 1964 ರಲ್ಲಿ ಲಕ್ಕಪ್ಪ ಸ್ವಾಮೀಜಿ ಅವರ ನೇತೃತ್ವದಲ್ಲಿ ಸ್ಥಾಪನೆಗೊಂಡ ವಿಶ್ವ ಶಾಂತಿ ವಿದ್ಯಾಸಂಸ್ಥೆಗೆ ರತ್ನಾಪುರಿ ಗ್ರಾಮದಲ್ಲಿ 40 ಎಕರೆ, ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗವಾಡಿ ಗ್ರಾಮದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ನ 200 ಎಕರೆ ಜಾಗ, ಮೈಸೂರಿನ ಕಾಮಾಕ್ಷಿ ಆಸ್ಪತ್ರೆ ಎದುರು 1.20 ಎಕರೆ ಜಾಗ ಸರ್ಕಾರದಿಂದ ಗುತ್ತಿಗೆ ಆಧಾರದಲ್ಲಿ ಮಂಜೂರು ಮಾಡಲಾಗಿತ್ತು. ಸ್ವಾಮೀಜಿ ನಿಧನದ ಬಳಿಕ ಸಂಸ್ಥೆ ಆಡಳಿತ ಸಮಿತಿಯಲ್ಲಿ ಅವರ ಕುಟುಂಬ ಸದಸ್ಯರಷ್ಟೇ ಇದ್ದು, ಶೈಕ್ಷಣಿಕ ಪ್ರಗತಿ ಕುಸಿದಿದೆ ಎಂದು ಆಕ್ಷೇಪಿಸಿದರು.</p>.<p>ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಗಮನಕ್ಕೆ ತರಲಾಗಿದ್ದು, ಸರ್ಕಾರ ಸ್ವಾಧೀನಕ್ಕೆ ಪಡೆದು ಮಾದರಿ ಶಿಕ್ಷಣ ಸಂಸ್ಥೆ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಮಹದೇಸ್ವಾಮಿ, ತಟ್ಟೆಕೆರೆ ನಾಗರಾಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-38-1080281112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>