<p><strong>ಹುಣಸೂರು</strong>: ‘ಮಾನವನ ದೇಹದಲ್ಲಿ ಪ್ರತಿಯೊಂದು ಅಂಗವೂ ಅತ್ಯಂತ ಮುಖ್ಯವಾಗಿದ್ದು, ಕಣ್ಣಿನ ದೃಷ್ಟಿ ಎಲ್ಲಕ್ಕಿಂದಲೂ ಅಗತ್ಯ’ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶಿವಮಾದಯ್ಯ ಹೇಳಿದರು.</p>.<p>ನಗರದ ರೋಟರಿ ಭವನದಲ್ಲಿ ಭಾನುವಾರ ನಡೆದ ನೇತ್ರ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ‘ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಕಾಳಜಿಯೊಂದಿಗೆ ಹಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಪಲ್ಸ್ ಪೋಲಿಯೋ ಲಸಿಕೆ ವಿಶ್ವಕ್ಕೆ ಕೊಟ್ಟ ಅತ್ಯಂತ ಪ್ರಮುಖ ಸೇವಾ ಕಾರ್ಯವಾಗಿದೆ. ರೋಟರಿ ಸಂಸ್ಥೆ ಆರೋಗ್ಯ ಸೇರಿದಂತೆ ವಿವಿಧ ಸಾಮಾಜಿಕ ಕೆಲಸಗಳಿಗೆ ಒತ್ತು ನೀಡಿ ತಳಹಂತದ ಸಾರ್ವಜನಿಕರ ಅಗತ್ಯಕ್ಕೆ ಸ್ಪಂದಿಸುವ ಮನಸ್ಥಿತಿ ಹೊಂದಿದೆ’ ಎಂದರು.</p>.<p>ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ‘ಮನುಷ್ಯನ ಅಂಗಾಂಗದಲ್ಲಿ ನೇತ್ರ ಅತಿ ಸೂಕ್ಷ್ಮ ಅಂಗವಾಗಿದ್ದು, ನಾಗರಿಕರು ಎಚ್ಚರಿಕೆಯಿಂದ ಕಣ್ಣುಗಳ ರಕ್ಷಣೆಗೆ ಒತ್ತು ನೀಡಬೇಕು. ದೀಪಾವಳಿ ಸಮಯದಲ್ಲಿ ಅಸಹಜ ಘಟನೆಗಳಲ್ಲಿ ಕಣ್ಣು ಕಳೆದುಕೊಳ್ಳುವುದನ್ನು ಓದುತ್ತೇವೆ. ಈ ರೀತಿಯ ಘಟನೆಗಳು ಸಂಭವಿಸದಂತೆ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಸಂಘ ಸಂಸ್ಥೆಗಳು ಜಾಗೃತಿ ಅಭಿಯಾನ ನಡೆಸುವುದರಿಂದ ಯುವಕರು ಎಚ್ಚರವಹಿಸುವ ಸಾಧ್ಯತೆ ಇದೆ’ ಎಂದರು.</p>.<p>ಶಿಬಿರದಲ್ಲಿ 52 ಹೊರ ರೋಗಿಗಳ ಕಣ್ಣು ತಪಾಸಣೆ ನಡೆಸಿ 25 ಜನರನ್ನು ಶಸ್ತ್ರ ಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. 23 ಜನರಿಗೆ ಕನ್ನಡಕ ವಿತರಿಸಲಾಯಿತು. ಶಿಬಿರದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಕೃಷ್ಣಕುಮಾರ್, ಕಾರ್ಯದರ್ಶಿ ಶ್ಯಾಮಣ್ಣ ಧರ್ಮಾಪುರ, ಶ್ರೀಕಂಠಮೂರ್ತಿ, ಉಷಾ, ಮೋಹನ್ ಕುಮಾರ್, ಆರೋಗ್ಯ ಇಲಾಖೆಯ ರಾಜೇಶ್ವರಿ, ಆನಂದ್, ಮಹೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-38-554226474</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ಮಾನವನ ದೇಹದಲ್ಲಿ ಪ್ರತಿಯೊಂದು ಅಂಗವೂ ಅತ್ಯಂತ ಮುಖ್ಯವಾಗಿದ್ದು, ಕಣ್ಣಿನ ದೃಷ್ಟಿ ಎಲ್ಲಕ್ಕಿಂದಲೂ ಅಗತ್ಯ’ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶಿವಮಾದಯ್ಯ ಹೇಳಿದರು.</p>.<p>ನಗರದ ರೋಟರಿ ಭವನದಲ್ಲಿ ಭಾನುವಾರ ನಡೆದ ನೇತ್ರ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ‘ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಕಾಳಜಿಯೊಂದಿಗೆ ಹಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಪಲ್ಸ್ ಪೋಲಿಯೋ ಲಸಿಕೆ ವಿಶ್ವಕ್ಕೆ ಕೊಟ್ಟ ಅತ್ಯಂತ ಪ್ರಮುಖ ಸೇವಾ ಕಾರ್ಯವಾಗಿದೆ. ರೋಟರಿ ಸಂಸ್ಥೆ ಆರೋಗ್ಯ ಸೇರಿದಂತೆ ವಿವಿಧ ಸಾಮಾಜಿಕ ಕೆಲಸಗಳಿಗೆ ಒತ್ತು ನೀಡಿ ತಳಹಂತದ ಸಾರ್ವಜನಿಕರ ಅಗತ್ಯಕ್ಕೆ ಸ್ಪಂದಿಸುವ ಮನಸ್ಥಿತಿ ಹೊಂದಿದೆ’ ಎಂದರು.</p>.<p>ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ‘ಮನುಷ್ಯನ ಅಂಗಾಂಗದಲ್ಲಿ ನೇತ್ರ ಅತಿ ಸೂಕ್ಷ್ಮ ಅಂಗವಾಗಿದ್ದು, ನಾಗರಿಕರು ಎಚ್ಚರಿಕೆಯಿಂದ ಕಣ್ಣುಗಳ ರಕ್ಷಣೆಗೆ ಒತ್ತು ನೀಡಬೇಕು. ದೀಪಾವಳಿ ಸಮಯದಲ್ಲಿ ಅಸಹಜ ಘಟನೆಗಳಲ್ಲಿ ಕಣ್ಣು ಕಳೆದುಕೊಳ್ಳುವುದನ್ನು ಓದುತ್ತೇವೆ. ಈ ರೀತಿಯ ಘಟನೆಗಳು ಸಂಭವಿಸದಂತೆ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಸಂಘ ಸಂಸ್ಥೆಗಳು ಜಾಗೃತಿ ಅಭಿಯಾನ ನಡೆಸುವುದರಿಂದ ಯುವಕರು ಎಚ್ಚರವಹಿಸುವ ಸಾಧ್ಯತೆ ಇದೆ’ ಎಂದರು.</p>.<p>ಶಿಬಿರದಲ್ಲಿ 52 ಹೊರ ರೋಗಿಗಳ ಕಣ್ಣು ತಪಾಸಣೆ ನಡೆಸಿ 25 ಜನರನ್ನು ಶಸ್ತ್ರ ಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. 23 ಜನರಿಗೆ ಕನ್ನಡಕ ವಿತರಿಸಲಾಯಿತು. ಶಿಬಿರದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಕೃಷ್ಣಕುಮಾರ್, ಕಾರ್ಯದರ್ಶಿ ಶ್ಯಾಮಣ್ಣ ಧರ್ಮಾಪುರ, ಶ್ರೀಕಂಠಮೂರ್ತಿ, ಉಷಾ, ಮೋಹನ್ ಕುಮಾರ್, ಆರೋಗ್ಯ ಇಲಾಖೆಯ ರಾಜೇಶ್ವರಿ, ಆನಂದ್, ಮಹೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-38-554226474</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>