ಪತ್ನಿಯೊಂದಿಗೆ ನಡೆದ ಕಲಹದಿಂದ ಬೇಸತ್ತ ಅವರು ಟ್ಯಾಂಕ್ ಹತ್ತಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು. ಕೆಳಗೆ ಇಳಿಯುವಂತೆ ಗ್ರಾಮಸ್ಥರು ಕೋರಿದರೂ ಸ್ಪಂದಿಸಲಿಲ್ಲ. ಮಾಹಿತಿ ಪಡೆದ ಬಳಿಕ ಸ್ಥಳಕ್ಕೆ ಧಾವಿಸಿದ ತುರ್ತು ಸಹಾಯವಾಣಿ 112ರ ಸಿಬ್ಬಂದಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಅವರು ಮಗುವಿನೊಂದಿಗೆ ಸುರಕ್ಷಿತವಾಗಿ ಕೆಳಗೆ ಇಳಿದರು. ನಂತರ ಅವರನ್ನು ವಶಕ್ಕೆ ಪಡೆದ ನಂಜನಗೂಡು ಗ್ರಾಮಾಂತರ ಪೊಲೀಸರು ವಿಚಾರಣೆ ನಡೆಸಿದ್ದಾರೆ.