<p><strong>ಮೈಸೂರು:</strong> ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆಂದರೆ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂಬ ಅರ್ಥ ತಾನೇ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಕ್ಷದ ಎಲ್ಲ ಗೊಂದಲಗಳು ಬೇಗನೆ ಬಗೆಹರಿಯುತ್ತವೆ. ಭಿನ್ನಮತೀಯರ ಮಾತುಗಳೂ ನಿಲ್ಲುತ್ತವೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ಅಧ್ಯಕ್ಷ ಸ್ಥಾನವನ್ನು ಒಂದು ವರ್ಷ ನಿಭಾಯಿಸಿರುವೆ. ಮುಂದೆಯೂ ಶ್ರಮ ವಹಿಸುವೆ’ ಎಂದರು. </p>.ವಿಜಯೇಂದ್ರ ಕಟ್ಟಿ ಹಾಕಲು ಶತಯತ್ನ: ಫೆಬ್ರುವರಿಯಲ್ಲಿ ರಾಜ್ಯಕ್ಕೂ ಹೊಸ ಅಧ್ಯಕ್ಷ.<p>‘ಬಿ.ಎಸ್.ಯಡಿಯೂರಪ್ಪ ಹಳ್ಳಿಯಿಂದ ಪಕ್ಷ ಕಟ್ಟಿದ್ದಾರೆ. ಅವರ ವಿರುದ್ಧ ಮಾತನಾಡಿದರೆ ಕಾರ್ಯಕರ್ತರಿಗೆ ನೋವಾಗುತ್ತದೆ. ಮಾತನಾಡುವಾಗ ಎಚ್ಚರಿಕೆ ವಹಿಸಬೇಕೆಂದು ಈ ಹಿಂದೆ ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರಿಗೆ ಹೇಳಿದ್ದೆ’ ಎಂದು ಹೇಳಿದರು.</p><p>‘ಬೀದರ್ನಲ್ಲಿ ಎಟಿಎಂ ದರೋಡೆ, ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣಗಳು ನಡೆದಿವೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ದೇಶದ್ರೋಹಿಗಳನ್ನು ಮಟ್ಟ ಹಾಕುತ್ತಿಲ್ಲ. ತುಷ್ಟೀಕರಣ ನೀತಿ ಅದಕ್ಕೆ ಕಾರಣ’ ಎಂದು ವಾಗ್ದಾಳಿ ನಡೆಸಿದರು. </p>.ಸಿಎಂ ಖುರ್ಚಿಗಾಗಿ ಕಾಂಗ್ರೆಸ್ಸಿನಲ್ಲಿ ಕಿತ್ತಾಟ: ಬಿ.ವೈ. ವಿಜಯೇಂದ್ರ.<h2>ರಾಜಕೀಯ ಚಾಣಾಕ್ಷ:</h2>.<p> ‘ಸಿದ್ದರಾಮಯ್ಯ ರಾಜಕೀಯ ಚಾಣಾಕ್ಷ. ಅಧಿಕಾರಾವಧಿ ಮುಗಿಯುತ್ತಿದೆ ಎಂದು ರಾಜಕೀಯ ತಂತ್ರ– ಕುತಂತ್ರ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ರಾಜಕೀಯ ದಾಳ ಉರುಳಿಸುತ್ತಿದ್ದಾರೆ’ ಎಂದು ವಿಜಯೇಂದ್ರ ಹೇಳಿದರು.</p><p>‘ಕಾಂಗ್ರೆಸ್ ಅಧಿಕಾರಕ್ಕೆ ಬರಲು ನನ್ನದು ಸಿಂಹಪಾಲೆಂದು ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಔತಣಕೂಟ ರಾಜಕೀಯ ನಡೆಯುತ್ತಿದೆ. ಆಡಳಿತ ಪಕ್ಷದ ಸಚಿವರೇ ಶಿವಕುಮಾರ್ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ’ ಎಂದರು.</p><p>‘ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪೂರ್ಣಾವಧಿ ಮುಖ್ಯಮಂತ್ರಿ ಆಗುವುದಿಲ್ಲ. ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು. ಸಿ.ಎಂ ಕುರ್ಚಿಗಾಗಿ 8 ಮಂದಿ ಟವೆಲ್ ಹಾಕಿದ್ದಾರೆ’ ಎಂದರು.</p> .ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಬಿ.ವೈ. ವಿಜಯೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆಂದರೆ ಪಕ್ಷದ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂಬ ಅರ್ಥ ತಾನೇ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪಕ್ಷದ ಎಲ್ಲ ಗೊಂದಲಗಳು ಬೇಗನೆ ಬಗೆಹರಿಯುತ್ತವೆ. ಭಿನ್ನಮತೀಯರ ಮಾತುಗಳೂ ನಿಲ್ಲುತ್ತವೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ಅಧ್ಯಕ್ಷ ಸ್ಥಾನವನ್ನು ಒಂದು ವರ್ಷ ನಿಭಾಯಿಸಿರುವೆ. ಮುಂದೆಯೂ ಶ್ರಮ ವಹಿಸುವೆ’ ಎಂದರು. </p>.ವಿಜಯೇಂದ್ರ ಕಟ್ಟಿ ಹಾಕಲು ಶತಯತ್ನ: ಫೆಬ್ರುವರಿಯಲ್ಲಿ ರಾಜ್ಯಕ್ಕೂ ಹೊಸ ಅಧ್ಯಕ್ಷ.<p>‘ಬಿ.ಎಸ್.ಯಡಿಯೂರಪ್ಪ ಹಳ್ಳಿಯಿಂದ ಪಕ್ಷ ಕಟ್ಟಿದ್ದಾರೆ. ಅವರ ವಿರುದ್ಧ ಮಾತನಾಡಿದರೆ ಕಾರ್ಯಕರ್ತರಿಗೆ ನೋವಾಗುತ್ತದೆ. ಮಾತನಾಡುವಾಗ ಎಚ್ಚರಿಕೆ ವಹಿಸಬೇಕೆಂದು ಈ ಹಿಂದೆ ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರಿಗೆ ಹೇಳಿದ್ದೆ’ ಎಂದು ಹೇಳಿದರು.</p><p>‘ಬೀದರ್ನಲ್ಲಿ ಎಟಿಎಂ ದರೋಡೆ, ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣಗಳು ನಡೆದಿವೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ದೇಶದ್ರೋಹಿಗಳನ್ನು ಮಟ್ಟ ಹಾಕುತ್ತಿಲ್ಲ. ತುಷ್ಟೀಕರಣ ನೀತಿ ಅದಕ್ಕೆ ಕಾರಣ’ ಎಂದು ವಾಗ್ದಾಳಿ ನಡೆಸಿದರು. </p>.ಸಿಎಂ ಖುರ್ಚಿಗಾಗಿ ಕಾಂಗ್ರೆಸ್ಸಿನಲ್ಲಿ ಕಿತ್ತಾಟ: ಬಿ.ವೈ. ವಿಜಯೇಂದ್ರ.<h2>ರಾಜಕೀಯ ಚಾಣಾಕ್ಷ:</h2>.<p> ‘ಸಿದ್ದರಾಮಯ್ಯ ರಾಜಕೀಯ ಚಾಣಾಕ್ಷ. ಅಧಿಕಾರಾವಧಿ ಮುಗಿಯುತ್ತಿದೆ ಎಂದು ರಾಜಕೀಯ ತಂತ್ರ– ಕುತಂತ್ರ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ರಾಜಕೀಯ ದಾಳ ಉರುಳಿಸುತ್ತಿದ್ದಾರೆ’ ಎಂದು ವಿಜಯೇಂದ್ರ ಹೇಳಿದರು.</p><p>‘ಕಾಂಗ್ರೆಸ್ ಅಧಿಕಾರಕ್ಕೆ ಬರಲು ನನ್ನದು ಸಿಂಹಪಾಲೆಂದು ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಔತಣಕೂಟ ರಾಜಕೀಯ ನಡೆಯುತ್ತಿದೆ. ಆಡಳಿತ ಪಕ್ಷದ ಸಚಿವರೇ ಶಿವಕುಮಾರ್ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ’ ಎಂದರು.</p><p>‘ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಪೂರ್ಣಾವಧಿ ಮುಖ್ಯಮಂತ್ರಿ ಆಗುವುದಿಲ್ಲ. ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು. ಸಿ.ಎಂ ಕುರ್ಚಿಗಾಗಿ 8 ಮಂದಿ ಟವೆಲ್ ಹಾಕಿದ್ದಾರೆ’ ಎಂದರು.</p> .ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಬಿ.ವೈ. ವಿಜಯೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>