ಮೈಸೂರು: ನಂಜನಗೂಡು ತಾಲ್ಲೂಕಿನ ಕಾರ್ಯ, ಚಾಮನಮಾದನಹಳ್ಳಿ ಹಾಗೂ ಕುರಿಹುಂಡಿ ಗ್ರಾಮಗಳ ಬಳಿ ಇರುವ ರೈತರ ಕೃಷಿ ಜಮೀನಿನಲ್ಲಿ ಅವಧಿ ಪೂರ್ಣಗೊಂಡಿದ್ದರೂ ಬಾಕ್ಸೈಟ್ ಗಣಿಗಾರಿಕೆ ನಡೆಸಲಾಗುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.