<p><strong>ಮೈಸೂರು:</strong> ಜಿಲ್ಲಾ ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೇಶ್ ಅವರು ಸೋಮವಾರ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವು ತೆರನಾದ ಸಮಸ್ಯೆಗಳು ರಿಂಗಣಿಸಿದವು.</p>.<p>ಲಾಕ್ಡೌನ್ ಸಮಯದಲ್ಲಿ ಬಡವರಿಗೆ ಕೆಲಸ ನೀಡುವಂತಹ ‘ನರೇಗಾ’ ಯೋಜನೆಯ ಕಾಮಗಾರಿಗಳನ್ನು ಜೆಸಿಬಿ ಮೊದಲಾದ ಯಂತ್ರೋಪಕರಣದ ಮೂಲಕ ನಡೆಸಲಾಗುತ್ತಿದೆ ಎಂದು ತಿ.ನರಸೀಪುರ ತಾಲ್ಲೂಕಿನ ತುರುಗನೂರಿನ ಪ್ರಶಾಂತ್ ದೂರು ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಯೋಗೇಶ್, ‘ಸಾಕಷ್ಟು ಕಡೆ ಇಂತಹ ದೂರುಗಳು ಬಂದಿವೆ. ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಲಾಕ್ಡೌನ್ನಿಂದ ಸಂಪಾದನೆ ಇಲ್ಲ. ಖಾಸಗಿ ಫೈನಾನ್ಸ್ನವರು ಸಾಲದ ಕಂತು ಪಾವತಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ಆಲನಹಳ್ಳಿ ಪಂಚಾಯಿತಿಯ ಜಗದೀಶ್ ಹೆಮ್ಮಿಗೆ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಯೋಗೇಶ್, ‘ಈ ವಿಚಾರವನ್ನು ಜಿಲ್ಲಾಧಿಕಾರಿಯ ಗಮನಕ್ಕೆ ತರಲಾಗುವುದು’ ಎಂದರು.</p>.<p>ಹಿನಕಲ್ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಕ್ರಮ ಖಾತೆಯನ್ನು ಮಾಡಿಕೊಡುತ್ತಿದ್ದಾರೆ ಎಂದು ಲೋಕೇಶ್ ಎಂಬುವವರು ನೀಡಿದ ದೂರಿಗೆ ಪ್ರತಿಕ್ರಿಯಿಸಿದ ಯೋಗೇಶ್, ‘ಈಗಾಗಲೇ ಈ ಕುರಿತು ತನಿಖೆ ನಡೆಸಲು ತಾಲ್ಲೂಕು ಪಂಚಾಯಿತು ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸ ಲಾಗಿದೆ’ ಎಂದರು.</p>.<p>ಹುಣಸೂರು ತಾಲ್ಲೂಕಿನ ಮಹದೇವ ಅವರು ತಮ್ಮ ಮನೆ ಮಳೆಗೆ ಬಿದ್ದು ಹೋಗಿದ್ದು, ಮನೆ ಕಟ್ಟಿಸಿಕೊಡಬೇಕು ಎಂದು ಬೇಡಿಕೆ ಇತ್ತರು. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಯೋಗೇಶ್ ಭರವಸೆ ನೀಡಿದರು.</p>.<p>ಒಟ್ಟು 25 ಮಂದಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ದೂರವಾಣಿ ಮೂಲಕ ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳಾದ ಡಾ.ಪ್ರೇಮ್ ಕುಮಾರ್, ಡಾ.ಎಂ.ಕೃಷ್ಣರಾಜುಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲಾ ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೇಶ್ ಅವರು ಸೋಮವಾರ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವು ತೆರನಾದ ಸಮಸ್ಯೆಗಳು ರಿಂಗಣಿಸಿದವು.</p>.<p>ಲಾಕ್ಡೌನ್ ಸಮಯದಲ್ಲಿ ಬಡವರಿಗೆ ಕೆಲಸ ನೀಡುವಂತಹ ‘ನರೇಗಾ’ ಯೋಜನೆಯ ಕಾಮಗಾರಿಗಳನ್ನು ಜೆಸಿಬಿ ಮೊದಲಾದ ಯಂತ್ರೋಪಕರಣದ ಮೂಲಕ ನಡೆಸಲಾಗುತ್ತಿದೆ ಎಂದು ತಿ.ನರಸೀಪುರ ತಾಲ್ಲೂಕಿನ ತುರುಗನೂರಿನ ಪ್ರಶಾಂತ್ ದೂರು ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಯೋಗೇಶ್, ‘ಸಾಕಷ್ಟು ಕಡೆ ಇಂತಹ ದೂರುಗಳು ಬಂದಿವೆ. ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಲಾಕ್ಡೌನ್ನಿಂದ ಸಂಪಾದನೆ ಇಲ್ಲ. ಖಾಸಗಿ ಫೈನಾನ್ಸ್ನವರು ಸಾಲದ ಕಂತು ಪಾವತಿಸಲು ಒತ್ತಡ ಹೇರುತ್ತಿದ್ದಾರೆ’ ಎಂದು ಆಲನಹಳ್ಳಿ ಪಂಚಾಯಿತಿಯ ಜಗದೀಶ್ ಹೆಮ್ಮಿಗೆ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಯೋಗೇಶ್, ‘ಈ ವಿಚಾರವನ್ನು ಜಿಲ್ಲಾಧಿಕಾರಿಯ ಗಮನಕ್ಕೆ ತರಲಾಗುವುದು’ ಎಂದರು.</p>.<p>ಹಿನಕಲ್ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಕ್ರಮ ಖಾತೆಯನ್ನು ಮಾಡಿಕೊಡುತ್ತಿದ್ದಾರೆ ಎಂದು ಲೋಕೇಶ್ ಎಂಬುವವರು ನೀಡಿದ ದೂರಿಗೆ ಪ್ರತಿಕ್ರಿಯಿಸಿದ ಯೋಗೇಶ್, ‘ಈಗಾಗಲೇ ಈ ಕುರಿತು ತನಿಖೆ ನಡೆಸಲು ತಾಲ್ಲೂಕು ಪಂಚಾಯಿತು ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸ ಲಾಗಿದೆ’ ಎಂದರು.</p>.<p>ಹುಣಸೂರು ತಾಲ್ಲೂಕಿನ ಮಹದೇವ ಅವರು ತಮ್ಮ ಮನೆ ಮಳೆಗೆ ಬಿದ್ದು ಹೋಗಿದ್ದು, ಮನೆ ಕಟ್ಟಿಸಿಕೊಡಬೇಕು ಎಂದು ಬೇಡಿಕೆ ಇತ್ತರು. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಯೋಗೇಶ್ ಭರವಸೆ ನೀಡಿದರು.</p>.<p>ಒಟ್ಟು 25 ಮಂದಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ದೂರವಾಣಿ ಮೂಲಕ ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳಾದ ಡಾ.ಪ್ರೇಮ್ ಕುಮಾರ್, ಡಾ.ಎಂ.ಕೃಷ್ಣರಾಜುಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>