<p><strong>ಮೈಸೂರು</strong>: ‘ವಿಶ್ವದ ಕೃತಕ ಬುದ್ಧಿಮತ್ತೆ (ಎಐ) ಉದ್ಯಮಕ್ಕೆ ಭಾರತವೇ ಸಾರ್ವಭೌಮ ಆಗಬಲ್ಲುದು’ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಹೇಳಿದರು.</p><p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಡಿಜಿಟಲ್ ಪರಿವರ್ತನೆ ಮತ್ತು ಸುಸ್ಥಿರ ಬೆಳವಣಿಗೆ: ಹಣಕಾಸು ವ್ಯವಸ್ಥೆಯ ಮರು ವಿನ್ಯಾಸ’ ವಿಷಯ ಕುರಿತ ರಾಷ್ಟ್ರೀಯ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನವನ್ನು ಭಾರತ ತನ್ನದೇ ಆದ ವಿಶಿಷ್ಟ ಹಾದಿಯಲ್ಲಿ ಬಳಸುತ್ತಿದೆ’ ಎಂದರು.</p><p>‘ಜಗತ್ತು ಇಂದು ತಂತ್ರಜ್ಞಾನದಲ್ಲಿ ನಾಗಲೋಟದಲ್ಲಿ ಮುನ್ನುಗ್ಗುತ್ತಿದೆ. ಅಂತೆಯೇ ಸೈಬರ್ ಅಪರಾಧ ಪ್ರಕರಣಗಳೂ ಹೆಚ್ಚುತ್ತಿವೆ. ದೇಶದಲ್ಲಿ ಈ ಅಪರಾಧಗಳ ಸಂಖ್ಯೆ ಜಾಸ್ತಿಯಾಗಿದೆ. ಆದರೂ ಡಿಜಿಟಲ್ ಮಾಧ್ಯಮದ ಹಣಕಾಸು, ಆರ್ಥಿಕ ವ್ಯವಹಾರಗಳಲ್ಲಿ ನಾವು ಮುಂದಿದ್ದೇವೆ’ ಎಂದು ತಿಳಿಸಿದರು.</p><p>ಬೆಂಗಳೂರಿನ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಹಣಕಾಸು ಮತ್ತು ಬಿಎಫ್ಎಸ್ಐ ವಿಭಾಗದ ಪ್ರಾಧ್ಯಾಪಕ ಕೆ.ವಿ. ಕಿರಣ್ಕುಮಾರ್, ‘ಭಾರತವು ಡಿಜಿಟಲ್ ಮಾಧ್ಯಮದಲ್ಲಿ ಅಭೂತಪೂರ್ವ ಬದಲಾವಣೆ ಹೊಂದುತ್ತಿದೆ. ಅದು ನಮಗೆ ಅನುಭವಕ್ಕೆ ಬಂದಿದೆ’ ಎಂದು ಹೇಳಿದರು.</p><p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ‘ತಂತ್ರಜ್ಞಾನದ ಬೆಳವಣಿಗೆಗೆ ನಾವು ಸಕಾರಾತ್ಮಕವಾಗಿ ತೆರೆದುಕೊಳ್ಳಬೇಕು’ ಎಂದರು.</p><p>ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಎಂ. ಪ್ರಭು ಸ್ವಾಗತಿಸಿದರು. ಧನುಷ್ ನಿರೂಪಿಸಿದರು. ಪ್ರಿಯಾಂಕಾ ಹಾಗೂ ಮೇಘನಾ ಹಾಡಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥ ಎನ್. ದಿಲೀಪ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಿಶ್ವದ ಕೃತಕ ಬುದ್ಧಿಮತ್ತೆ (ಎಐ) ಉದ್ಯಮಕ್ಕೆ ಭಾರತವೇ ಸಾರ್ವಭೌಮ ಆಗಬಲ್ಲುದು’ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಹೇಳಿದರು.</p><p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಡಿಜಿಟಲ್ ಪರಿವರ್ತನೆ ಮತ್ತು ಸುಸ್ಥಿರ ಬೆಳವಣಿಗೆ: ಹಣಕಾಸು ವ್ಯವಸ್ಥೆಯ ಮರು ವಿನ್ಯಾಸ’ ವಿಷಯ ಕುರಿತ ರಾಷ್ಟ್ರೀಯ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನವನ್ನು ಭಾರತ ತನ್ನದೇ ಆದ ವಿಶಿಷ್ಟ ಹಾದಿಯಲ್ಲಿ ಬಳಸುತ್ತಿದೆ’ ಎಂದರು.</p><p>‘ಜಗತ್ತು ಇಂದು ತಂತ್ರಜ್ಞಾನದಲ್ಲಿ ನಾಗಲೋಟದಲ್ಲಿ ಮುನ್ನುಗ್ಗುತ್ತಿದೆ. ಅಂತೆಯೇ ಸೈಬರ್ ಅಪರಾಧ ಪ್ರಕರಣಗಳೂ ಹೆಚ್ಚುತ್ತಿವೆ. ದೇಶದಲ್ಲಿ ಈ ಅಪರಾಧಗಳ ಸಂಖ್ಯೆ ಜಾಸ್ತಿಯಾಗಿದೆ. ಆದರೂ ಡಿಜಿಟಲ್ ಮಾಧ್ಯಮದ ಹಣಕಾಸು, ಆರ್ಥಿಕ ವ್ಯವಹಾರಗಳಲ್ಲಿ ನಾವು ಮುಂದಿದ್ದೇವೆ’ ಎಂದು ತಿಳಿಸಿದರು.</p><p>ಬೆಂಗಳೂರಿನ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಹಣಕಾಸು ಮತ್ತು ಬಿಎಫ್ಎಸ್ಐ ವಿಭಾಗದ ಪ್ರಾಧ್ಯಾಪಕ ಕೆ.ವಿ. ಕಿರಣ್ಕುಮಾರ್, ‘ಭಾರತವು ಡಿಜಿಟಲ್ ಮಾಧ್ಯಮದಲ್ಲಿ ಅಭೂತಪೂರ್ವ ಬದಲಾವಣೆ ಹೊಂದುತ್ತಿದೆ. ಅದು ನಮಗೆ ಅನುಭವಕ್ಕೆ ಬಂದಿದೆ’ ಎಂದು ಹೇಳಿದರು.</p><p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ‘ತಂತ್ರಜ್ಞಾನದ ಬೆಳವಣಿಗೆಗೆ ನಾವು ಸಕಾರಾತ್ಮಕವಾಗಿ ತೆರೆದುಕೊಳ್ಳಬೇಕು’ ಎಂದರು.</p><p>ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಎಂ. ಪ್ರಭು ಸ್ವಾಗತಿಸಿದರು. ಧನುಷ್ ನಿರೂಪಿಸಿದರು. ಪ್ರಿಯಾಂಕಾ ಹಾಗೂ ಮೇಘನಾ ಹಾಡಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥ ಎನ್. ದಿಲೀಪ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>