<p><strong>ಮೈಸೂರು:</strong> ‘ಯುವ ಸಮೂಹದ ಪ್ರಯತ್ನದಿಂದ ವಿಕಸಿತ ಭಾರತ ರೂಪುಗೊಳ್ಳಲು ಸಾಧ್ಯ’ ಎಂದು ಡಿಆರ್ಡಿಒ ಮಾಜಿ ವಿಜ್ಞಾನಿ ಪ್ರಹ್ಲಾದ್ ರಾಮರಾವ್ ತಿಳಿಸಿದರು.</p>.<p>ವ್ಯಾಸರಾಜಮಠ (ಸೋಸಲೆ) ವಿದ್ಯಾಶ್ರೀಶತೀರ್ಥ ಸ್ವಾಮೀಜಿಯ 9ನೇ ಪೀಠಾರೋಹಣ ವಾರ್ಷಿಕೋತ್ಸವ ಮತ್ತು ವಿದ್ಯಾಪೀಠದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.</p>.<p>‘ಗುರುಕುಲದ ಶಿಕ್ಷಣದಲ್ಲಿ ವಿಜ್ಞಾನ, ತಂತ್ರಜ್ಞಾನದ ಕಲಿಕೆಯಿತ್ತು. ಆಧುನಿಕ ಶಿಕ್ಷಣವೂ ಅದನ್ನೇ ಮುಂದುವರಿಸಿದೆ. ಪೂರ್ವ ಕಾಲದಲ್ಲಿನ ಆಚರಣೆಗಳಿಗೂ ವೈಜ್ಞಾನಿಕತೆಯ ಸ್ಪರ್ಶ ಇತ್ತು. ಇಂದಿನ ವಿದ್ಯಾರ್ಥಿಗಳು ಎಲ್ಲಾ ವಿಚಾರಗಳ ಅಧ್ಯಯನ ಮಾಡುವುದರೊಂದಿಗೆ ಆಧ್ಯಾತ್ಮಿಕವಾಗಿಯೂ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ವ್ಯಾಸರಾಜಮಠ ನೀಡುತ್ತಿರುವ ಶಿಕ್ಷಣವು ಇತರರಿಗೆ ಮಾದರಿಯಾಗಿತ್ತು. ಇಂತಹ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು. ಭವಿಷ್ಯದ ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನದೊಂದಿಗೆ ದೇಶದ ರಕ್ಷಣೆಗಾಗಿ ಯುದ್ಧಾಭ್ಯಾಸವು ಅಗತ್ಯವಾಗಿದೆ’ ಎಂದು ಹೇಳಿದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವ್ಯಾಸರಾಜ ಮಠದ ವಿದ್ಯಾಶ್ರೀಶತೀರ್ಥ ಸ್ವಾಮೀಜಿ, ನಿವೃತ್ತ ಐಎಎಸ್ ಅಧಿಕಾರಿಗಳಾದ ಕೆ.ಜಯರಾಜ್, ಸಿ.ಎಸ್.ಸುರಂಜನ, ಎಚ್.ಎಸ್.ಹರಿಪ್ರಸಾದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಯುವ ಸಮೂಹದ ಪ್ರಯತ್ನದಿಂದ ವಿಕಸಿತ ಭಾರತ ರೂಪುಗೊಳ್ಳಲು ಸಾಧ್ಯ’ ಎಂದು ಡಿಆರ್ಡಿಒ ಮಾಜಿ ವಿಜ್ಞಾನಿ ಪ್ರಹ್ಲಾದ್ ರಾಮರಾವ್ ತಿಳಿಸಿದರು.</p>.<p>ವ್ಯಾಸರಾಜಮಠ (ಸೋಸಲೆ) ವಿದ್ಯಾಶ್ರೀಶತೀರ್ಥ ಸ್ವಾಮೀಜಿಯ 9ನೇ ಪೀಠಾರೋಹಣ ವಾರ್ಷಿಕೋತ್ಸವ ಮತ್ತು ವಿದ್ಯಾಪೀಠದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.</p>.<p>‘ಗುರುಕುಲದ ಶಿಕ್ಷಣದಲ್ಲಿ ವಿಜ್ಞಾನ, ತಂತ್ರಜ್ಞಾನದ ಕಲಿಕೆಯಿತ್ತು. ಆಧುನಿಕ ಶಿಕ್ಷಣವೂ ಅದನ್ನೇ ಮುಂದುವರಿಸಿದೆ. ಪೂರ್ವ ಕಾಲದಲ್ಲಿನ ಆಚರಣೆಗಳಿಗೂ ವೈಜ್ಞಾನಿಕತೆಯ ಸ್ಪರ್ಶ ಇತ್ತು. ಇಂದಿನ ವಿದ್ಯಾರ್ಥಿಗಳು ಎಲ್ಲಾ ವಿಚಾರಗಳ ಅಧ್ಯಯನ ಮಾಡುವುದರೊಂದಿಗೆ ಆಧ್ಯಾತ್ಮಿಕವಾಗಿಯೂ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ವ್ಯಾಸರಾಜಮಠ ನೀಡುತ್ತಿರುವ ಶಿಕ್ಷಣವು ಇತರರಿಗೆ ಮಾದರಿಯಾಗಿತ್ತು. ಇಂತಹ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು. ಭವಿಷ್ಯದ ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನದೊಂದಿಗೆ ದೇಶದ ರಕ್ಷಣೆಗಾಗಿ ಯುದ್ಧಾಭ್ಯಾಸವು ಅಗತ್ಯವಾಗಿದೆ’ ಎಂದು ಹೇಳಿದರು.</p>.<p>ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವ್ಯಾಸರಾಜ ಮಠದ ವಿದ್ಯಾಶ್ರೀಶತೀರ್ಥ ಸ್ವಾಮೀಜಿ, ನಿವೃತ್ತ ಐಎಎಸ್ ಅಧಿಕಾರಿಗಳಾದ ಕೆ.ಜಯರಾಜ್, ಸಿ.ಎಸ್.ಸುರಂಜನ, ಎಚ್.ಎಸ್.ಹರಿಪ್ರಸಾದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>