ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅಧಿಕಾರಿಗಳಿಗೆ ಕರೆ ಮಾಡಿ, ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ‘ನೀರು ಕಲುಷಿತವಾಗಲು ಕಾರಣವೇನು ಎಂದು ತಿಳಿದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ಚಿಕಿತ್ಸೆಗೆ ಅಗತ್ಯ ಸೇವೆ ನೀಡಲು ಕ್ರಮ ವಹಿಸಬೇಕು’ ಎಂದು ಸೂಚಿಸಿದ್ದಾರೆ.