‘ಕಳೆದ 12 ದಿನಗಳ ಹಿಂದೆ ಮರಿಯಾನೆ ಗಾಯಗೊಂಡ ಮಾಹಿತಿ ಸಿಕ್ಕಿತ್ತು. ಪ್ರಾಣಿ ತಜ್ಞ ಡಾ. ರಮೇಶ್ ಹಾಗೂ ಸಿಬ್ಬಂದಿಯ ಜೊತೆಗೂಡಿ ಭೀಮ ಮತ್ತು ಪ್ರಶಾಂತ ಆನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಿದ್ದರೂ ಮರಿಯಾನೆ ಹಾಗೂ ತಾಯಿ ಆನೆ ಸಿಕ್ಕಿರಲಿಲ್ಲ. ಹೀಗಾಗಿ, ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದೆವು. ಮೇಲಧಿಕಾರಿಗಳ ಅನುಮತಿ ಪಡೆದು ಪುನಃ ಕಾರ್ಯಾಚರಣೆ ನಡೆಸಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಭರತ್ ತಲ್ವಾರ್ ‘ಪ್ರಜಾವಾಣಿ’ಗೆ ತಿಳಿಸಿದರು.