<p><strong>ಮೈಸೂರು: </strong>ರೈತರು ಹಾಗೂ ರೈತ ಮಹಿಳೆಯರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಮಹಿಳಾ ಸ್ವಸ್ವಹಾಯ ಸಂಘಗಳು ಖಾಸಗಿ ಫೈನಾನ್ಸ್ಗಳಿಂದ, ಸಂಸ್ಥೆಗಳಿಂದ ಸಾಲ ಪಡೆದುಕೊಂಡಿವೆ. ಕೊರೊನಾ ಸಂಕಷ್ಟದಿಂದಾಗಿ ಈ ಸಂಘಗಳ ಸದಸ್ಯರು ತಾವು ಪಡೆದ ಸಾಲ ಮರುಪಾವತಿಸುವುದು ಕಷ್ಟವಾಗಿದೆ. ಸಾಲ ನೀಡಿದ ಸಂಸ್ಥೆಗಳು ಬಡ್ಡಿ ಹಾಗೂ ಅಸಲು ಪಾವತಿಸುವಂತೆ ದುಂಬಾಲು ಬಿದ್ದಿವೆ. ಈ ಒತ್ತಡದಿಂದ ಸ್ವಸಹಾಯ ಸಂಘಗಳು ವಿನಾಶದ ಅಂಚಿಗೆ ತಲುಪಿವೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಇಂತಹ ಒತ್ತಡಕ್ಕೆ ತಡೆ ಹಾಕಬೇಕು. ಸಾಲ ವಸೂಲಾತಿ ಎಂಬ ನೀತಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ವಿದ್ಯುತ್ ಇಲಾಖೆಯ ಖಾಸಗೀಕರಣ ಮಾಡಬಾರದು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಇದರಿಂದ ಬಂಡವಾಳಷಾಹಿಗಳಿಗಷ್ಟೇ ಲಾಭವಾಗುತ್ತದೆ. ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಟೀಕಿಸಿದರು.</p>.<p>ರೈತರ ಹಳೆ ಸಾಲಗಳನ್ನು ಮನ್ನಾ ಮಾಡಿ, ಹೊಸ ಸಾಲಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಮುಖಂಡರಾದ ಅತ್ತಹಳ್ಳಿ ದೇವರಾಜ್ ಸೇರಿದಂತೆ ಹಲವರು ಇದ್ದರು.</p>.<p><strong>ಅಮೆರಿಕದಲ್ಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ</strong></p>.<p><strong>ಮೈಸೂರು: </strong>ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿ ಅಮೆರಿಕದಲ್ಲಿ ಕಪ್ಪು ವರ್ಣೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿದರು.</p>.<p>ಅಮೆರಿಕ ಸರ್ಕಾರವು ಕೂಡಲೇ ಅಲ್ಲಿನ ಕಪ್ಪುವರ್ಣೀಯರ ಹಕ್ಕುಗಳ ರಕ್ಷಣೆಗೆ ಧಾವಿಸಬೇಕು, ಅವರಿಗೆ ರಕ್ಷಣೆಗೆ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನಾಕಾರರ ಮೇಲೆ ಕೈಗೊಳ್ಳುತ್ತಿರುವ ನಿರ್ದಾಕ್ಷಿಣ್ಯ ಕ್ರಮಗಳು ಸರಿಯಲ್ಲ. ವರ್ಣಬೇಧ ನೀತಿಯನ್ನು ತೊಡೆದು ಹಾಕಬೇಕು ಎಂದು ಒತ್ತಾಯಿಸಿದರು. ಹೋರಾಟಗಾರರಾದ ಬಸವರಾಜು, ಪುನೀತ್, ಬಾಬೂರಾಜ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ರೈತರು ಹಾಗೂ ರೈತ ಮಹಿಳೆಯರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಮಹಿಳಾ ಸ್ವಸ್ವಹಾಯ ಸಂಘಗಳು ಖಾಸಗಿ ಫೈನಾನ್ಸ್ಗಳಿಂದ, ಸಂಸ್ಥೆಗಳಿಂದ ಸಾಲ ಪಡೆದುಕೊಂಡಿವೆ. ಕೊರೊನಾ ಸಂಕಷ್ಟದಿಂದಾಗಿ ಈ ಸಂಘಗಳ ಸದಸ್ಯರು ತಾವು ಪಡೆದ ಸಾಲ ಮರುಪಾವತಿಸುವುದು ಕಷ್ಟವಾಗಿದೆ. ಸಾಲ ನೀಡಿದ ಸಂಸ್ಥೆಗಳು ಬಡ್ಡಿ ಹಾಗೂ ಅಸಲು ಪಾವತಿಸುವಂತೆ ದುಂಬಾಲು ಬಿದ್ದಿವೆ. ಈ ಒತ್ತಡದಿಂದ ಸ್ವಸಹಾಯ ಸಂಘಗಳು ವಿನಾಶದ ಅಂಚಿಗೆ ತಲುಪಿವೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಇಂತಹ ಒತ್ತಡಕ್ಕೆ ತಡೆ ಹಾಕಬೇಕು. ಸಾಲ ವಸೂಲಾತಿ ಎಂಬ ನೀತಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ವಿದ್ಯುತ್ ಇಲಾಖೆಯ ಖಾಸಗೀಕರಣ ಮಾಡಬಾರದು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಇದರಿಂದ ಬಂಡವಾಳಷಾಹಿಗಳಿಗಷ್ಟೇ ಲಾಭವಾಗುತ್ತದೆ. ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಟೀಕಿಸಿದರು.</p>.<p>ರೈತರ ಹಳೆ ಸಾಲಗಳನ್ನು ಮನ್ನಾ ಮಾಡಿ, ಹೊಸ ಸಾಲಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಮುಖಂಡರಾದ ಅತ್ತಹಳ್ಳಿ ದೇವರಾಜ್ ಸೇರಿದಂತೆ ಹಲವರು ಇದ್ದರು.</p>.<p><strong>ಅಮೆರಿಕದಲ್ಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ</strong></p>.<p><strong>ಮೈಸೂರು: </strong>ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿ ಅಮೆರಿಕದಲ್ಲಿ ಕಪ್ಪು ವರ್ಣೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿದರು.</p>.<p>ಅಮೆರಿಕ ಸರ್ಕಾರವು ಕೂಡಲೇ ಅಲ್ಲಿನ ಕಪ್ಪುವರ್ಣೀಯರ ಹಕ್ಕುಗಳ ರಕ್ಷಣೆಗೆ ಧಾವಿಸಬೇಕು, ಅವರಿಗೆ ರಕ್ಷಣೆಗೆ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನಾಕಾರರ ಮೇಲೆ ಕೈಗೊಳ್ಳುತ್ತಿರುವ ನಿರ್ದಾಕ್ಷಿಣ್ಯ ಕ್ರಮಗಳು ಸರಿಯಲ್ಲ. ವರ್ಣಬೇಧ ನೀತಿಯನ್ನು ತೊಡೆದು ಹಾಕಬೇಕು ಎಂದು ಒತ್ತಾಯಿಸಿದರು. ಹೋರಾಟಗಾರರಾದ ಬಸವರಾಜು, ಪುನೀತ್, ಬಾಬೂರಾಜ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>