‘ನಗರದ ಹೃದಯ ಭಾಗದಲ್ಲಿನ ಮಾರುಕಟ್ಟೆಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ನಿಷೇಧಿತ ಪ್ಲಾಸ್ಟಿಕ್ ಬಳಕೆಯಾಗುತ್ತಿರುವ ಮಾಹಿತಿಯಿದ್ದು, ಅನೇಕ ಬಾರಿ ದಾಳಿ ನಡೆಸಲಾಗಿದೆ. ಅದನ್ನು ಮುಂದುವರಿಸಬೇಡಿ. ಅಂಗಡಿಗಳ ನೆರಳಿಗಾಗಿ ಆಕಾಶ ನೀಲಿ ಅಥವಾ ಬಿಳಿ ಬಣ್ಣದ ಟಾರ್ಪಾಲುಗಳನ್ನಷ್ಟೇ ಬಳಸಿ, ಒತ್ತುವರಿ ಮುಂದುವರೆದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದರು.