ಸಿದ್ದರಾಮಯ್ಯ ಅಭಿಮಾನಿಗಳು, ಕುರುಬರ ಸಂಘದ ಬಿ.ಸುಬ್ರಹ್ಮಣ್ಯ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ನಿರ್ದೇಶಕ ಕಾರ್ತಿಕ್ ಉಪಮನ್ಯು ಕ್ಷಮೆ ಕೋರಿದರೂ, ಪ್ರತಿಭಟನಾಕಾರರು ಸ್ಥಳದಲ್ಲಿಯೇ ಕುಳಿತರು. ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಆಗಮಿಸಿ ಪ್ರತಿಭಟನಕಾರರನ್ನು ಮನವೊಲಿಸಿದರು.