ರಂಗಕರ್ಮಿ ಪ್ರೊ.ಎಚ್.ಎಸ್.ಉಮೇಶ್ ಮಾತನಾಡಿ, ‘ಕನ್ನಡ ರಂಗಭೂಮಿಗೆ ಮೈಸೂರಿನ ಹವ್ಯಾಸಿ ರಂಗತಂಡಗಳ ಕೊಡುಗೆ ಮಹತ್ತರವಾಗಿದ್ದು, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರಾಗಿದ್ದವರು ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ಮಹಾರಾಜ ಕಾಲೇಜಿನ ಪ್ರೊ.ಗುರುರಾಜರಾವ್, ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ವಿಶ್ವನಾಥ ಮಿರ್ಲೆ, ಬನುಮಯ್ಯ ಕಾಲೇಜಿನ ಸಿಂಧುವಳ್ಳಿ ಅನಂತಮೂರ್ತಿ ಪ್ರಮುಖರು’ ಎಂದು ಹೇಳಿದರು.