<p><strong>ಮೈಸೂರು</strong>: ‘ಸಾಧಿಸುವ ಛಲ, ದೂರದೃಷ್ಟಿ ಮತ್ತು ದೃಢ ಸಂಕಲ್ಪ ಯಶಸ್ಸಿನ ಮೂರು ಮುಖ್ಯ ಸೂತ್ರಗಳು. ಇವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ.ಡಿ.ಆನಂದ್ ಹೇಳಿದರು.</p>.<p>ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿಯ ಸಹಯೋಗದಲ್ಲಿ ಈಚೆಗೆ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಎರಡು ದಿನದ ‘ದೀಕ್ಷಾರಂಭ’ ಪರಿಚಯಾತ್ಮಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ ಮತ್ತು ಗುರಿ ಸ್ಪಷ್ಟವಾಗಿರಬೇಕು. ಆಗ ಮಾತ್ರ ಬದುಕಿನಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಸಮಯ ಮತ್ತು ಅವಕಾಶ ಯಾರಿಗೂ ಕಾಯುವುದಿಲ್ಲ. ಆದ್ದರಿಂದ ನೀವೇನಾಗಬೇಕು ಎಂಬುದನ್ನು ನಿಶ್ಚಯಿಸಿಕೊಳ್ಳಬೇಕು. ಇದರಿಂದ ನಿಮ್ಮ ಮುಂದಿನ ಭವಿಷ್ಯ ಸುಭದ್ರವಾಗಿರುತ್ತದೆ’ ಎಂದರು.</p>.<p>‘ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕನಸಾದ ‘ಸೂಪರ್ ಪವರ್ ಇಂಡಿಯಾ’ ನನಸು ಮಾಡಲು ವಿದ್ಯಾರ್ಥಿಗಳು ಪಣ ತೊಡಬೇಕು. ಶಿಕ್ಷಣ ಎಂದರೆ ಕೇವಲ ಪದವಿ ಪಡೆಯುವುದಲ್ಲ; ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದಾಗಿರುತ್ತದೆ. ಇಂದು ಯುವಕರು ಸ್ಪಷ್ಟ ಗುರಿಗಳಿಲ್ಲದೆ ದಾರಿ ತಪ್ಪುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ ಮಾತನಾಡಿ, ‘ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗುರು ಮತ್ತು ವಿದ್ಯಾರ್ಥಿಗಳ ಸಂಬಂಧ ಗಟ್ಟಿಗೊಳಿಸಲು, ಕಾಲೇಜಿನ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗಿರುವ ವಿಚಾರಗಳ ಮೇಲೆ ಬೆಳಕು ಚೆಲ್ಲುವುದು ‘ದೀಕ್ಷಾರಂಭ’ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>ಪ್ರಾಂಶುಪಾಲ ಎಂ.ಪ್ರಭು, ಎಲ್.ವಿನಯ್ ಕುಮಾರ್, ಎನ್.ರಾಜೇಂದ್ರಪ್ರಸಾದ್, ಕಾಲೇಜಿನ ಪರೀಕ್ಷಾ ನಿಯಂತ್ರಣಾಧಿಕಾರಿ ಬಿ.ಪ್ರಭುಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಾಧಿಸುವ ಛಲ, ದೂರದೃಷ್ಟಿ ಮತ್ತು ದೃಢ ಸಂಕಲ್ಪ ಯಶಸ್ಸಿನ ಮೂರು ಮುಖ್ಯ ಸೂತ್ರಗಳು. ಇವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ.ಡಿ.ಆನಂದ್ ಹೇಳಿದರು.</p>.<p>ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿಯ ಸಹಯೋಗದಲ್ಲಿ ಈಚೆಗೆ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಎರಡು ದಿನದ ‘ದೀಕ್ಷಾರಂಭ’ ಪರಿಚಯಾತ್ಮಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ ಮತ್ತು ಗುರಿ ಸ್ಪಷ್ಟವಾಗಿರಬೇಕು. ಆಗ ಮಾತ್ರ ಬದುಕಿನಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಸಮಯ ಮತ್ತು ಅವಕಾಶ ಯಾರಿಗೂ ಕಾಯುವುದಿಲ್ಲ. ಆದ್ದರಿಂದ ನೀವೇನಾಗಬೇಕು ಎಂಬುದನ್ನು ನಿಶ್ಚಯಿಸಿಕೊಳ್ಳಬೇಕು. ಇದರಿಂದ ನಿಮ್ಮ ಮುಂದಿನ ಭವಿಷ್ಯ ಸುಭದ್ರವಾಗಿರುತ್ತದೆ’ ಎಂದರು.</p>.<p>‘ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕನಸಾದ ‘ಸೂಪರ್ ಪವರ್ ಇಂಡಿಯಾ’ ನನಸು ಮಾಡಲು ವಿದ್ಯಾರ್ಥಿಗಳು ಪಣ ತೊಡಬೇಕು. ಶಿಕ್ಷಣ ಎಂದರೆ ಕೇವಲ ಪದವಿ ಪಡೆಯುವುದಲ್ಲ; ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದಾಗಿರುತ್ತದೆ. ಇಂದು ಯುವಕರು ಸ್ಪಷ್ಟ ಗುರಿಗಳಿಲ್ಲದೆ ದಾರಿ ತಪ್ಪುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ ಮಾತನಾಡಿ, ‘ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗುರು ಮತ್ತು ವಿದ್ಯಾರ್ಥಿಗಳ ಸಂಬಂಧ ಗಟ್ಟಿಗೊಳಿಸಲು, ಕಾಲೇಜಿನ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗಿರುವ ವಿಚಾರಗಳ ಮೇಲೆ ಬೆಳಕು ಚೆಲ್ಲುವುದು ‘ದೀಕ್ಷಾರಂಭ’ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>ಪ್ರಾಂಶುಪಾಲ ಎಂ.ಪ್ರಭು, ಎಲ್.ವಿನಯ್ ಕುಮಾರ್, ಎನ್.ರಾಜೇಂದ್ರಪ್ರಸಾದ್, ಕಾಲೇಜಿನ ಪರೀಕ್ಷಾ ನಿಯಂತ್ರಣಾಧಿಕಾರಿ ಬಿ.ಪ್ರಭುಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>