ಈ ನಡುವೆ ವಿ.ವಿ.ಯ ಬೋಧಕ ಸಿಬ್ಬಂದಿಯೊಬ್ಬರು ರಂಗನಾಥ ಅವರ ದೂರಿನ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುತ್ತಿದ್ದರು. ಇದು ಕುಲಪತಿ ಗಮನಕ್ಕೆ ಬಂದಿದ್ದು, ನೋಟಿಸ್ ನೀಡಲಾಗಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಗಮನಕ್ಕೆ ತರಲಾಗಿದೆ. ಇಲಾಖೆಯ ಅನುಮತಿಯ ಮೇಲೆ ತನಿಖೆ ನಡೆಯಲಿದೆ. ಲೋಕಾಯುಕ್ತ ನಿವೃತ್ತ ಹೆಚ್ಚುವರಿ ರಿಜಿಸ್ಟ್ರಾರ್ ವಿದ್ಯಾಧರ ಅವರ ಏಕಸದಸ್ಯ ತನಿಖಾ ಸಮಿತಿ ರಚಿಸಿದ್ದು, ತನಿಖೆ ಆರಂಭವಾಗಿದೆ ಎಂದು ಶಿವಲಿಂಗಯ್ಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.